ರಿಪ್ಪನ್ಪೇಟೆ: ಸಮಾಜದಲ್ಲಿ ಶೋಷಣೆಯನ್ನು ಹೊಗಲಾಡಿಸುವ ನಿಟ್ಟಿನಲ್ಲಿ ದಲಿತರ ಮತ್ತು ಮಹಿಳೆಯರ ಮೇಲೆ ಶೋಷಣೆಗಳು ನಡೆಯುತ್ತಿದ್ದು ಆದನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಜನಜಾಗೃತಿ ಮೂಡಿಸಿದ ಸಾವಿತ್ರಿಬಾಯಿ ಫುಲೆ ಓರ್ವ ದಿಟ್ಟ ಕ್ರಾಂತಿಕಾರಿ ಮಹಿಳೆಯಾದರು ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು.
ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ಆಯೋಜಿಸಲಾದ ಶಿಕ್ಷಕಿ ಸಾವಿತ್ರಿಬಾಯಿ ಫುಲೆ 45 ನಿಮಿಷದ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ, ಈ ಹಿಂದೆಯೂ ಮಹಿಳೆಯರ ಮತ್ತು ದಲಿತರ ಮೇಲೆ ದೌರ್ಜನ್ಯಗಳು ಶೋಷಣೆಗಳು ನಡೆಯುತ್ತಿದ್ದು
ಅದನ್ನು ಮೆಟ್ಟಿನಿಲ್ಲುವುದರೊಂದಿಗೆ ಮುಗ್ದ ಮಹಿಳೆಯರಲ್ಲಿ ಅಕ್ಷರದ ಕ್ರಾಂತಿ ಮಾಡಿ ಸಮಾಜದ ಮುಖ್ಯವಾಹಿನಿಗೆ ತರುವುದರೊಂದಿಗೆ ಸ್ತ್ರಿ ಸಮಾನತೆಯನ್ನು ಬೋಧಿಸಿದ ಪುರುಷ ಪ್ರಧಾನದಂತೆ ಸ್ತ್ರಿಯರಿಗೂ ಸಮಾಜದಲ್ಲಿ ಸಮಾನ ಅವಕಾಶ ಕಲ್ಪಿಸಿದ ಕೀರ್ತಿ ಸಾವಿತ್ರಿಬಾಯಿ ಫುಲೆ ಸಲ್ಲುತ್ತದೆಂದರು.
ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ಅಂಭ್ರಯಾಮಠ, ಖ್ಯಾತ ನಾಟಕ ನಿರ್ದೇಶಕ ಸಿನಿಮಾ ನಟ ಏಸು ಪ್ರಕಾಶ್ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಅಂಭ್ರಯಾಮಠ, ಖ್ಯಾತ ನಾಟಕ ನಿರ್ದೇಶಕ ಸಿನಿಮಾ ನಟ ಏಸು ಪ್ರಕಾಶ್, ಪಶು ಇಲಾಖೆಯ ನೌಕರ ಮಲ್ಲಿಕಾರ್ಜುನಯ್ಯ, ತಮ್ಮಣ್ಣಗೌಡ, ಬಿ.ಯುವರಾಜಗೌಡ ಇನ್ನಿತರ ಹಲವರು ಹಾಜರಿದ್ದರು.
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…