Categories: Hosanagara News

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ ; ಚಿದಂಬರ

ಹೊಸನಗರ : ಮಕ್ಕಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳು ಸೇವಾ ಚಟುವಟಿ ಹೆಚ್ಚಿಸಬೇಕು ಎಂದು ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ ಅಭಿಪ್ರಾಯಪಟ್ಟರು.


ಇಂದು ತಾಲ್ಲೂಕಿನ ಬಟ್ಟೆಮಲ್ಲಪ್ಪ ಶ್ರೀ ವ್ಯಾಸ ಮಹರ್ಷಿ ಗುರುಕುಲದ ತ್ರಯೋದಶ ಪ್ರದರ್ಶಿನಿ ಕಾರ್ಯಕ್ರಮದ ಎರಡನೇ ಸೇವಾ ಚಟುವಟಿಕೆ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿ, ಮಕ್ಕಳ ಇಂದಿನ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವ ಪಠ್ಯ ಕೊರತೆ ಹೆಚ್ಚುತ್ತಿದೆ. ಮತ್ತೊಂದೆಡೆ ಪೋಷಕರಿಂದ ಕೂಡ ಮಕ್ಕಳಿಗೆ ಮಾನವೀಯ ಮೌಲ್ಯ ಹೆಚ್ಚಿಸುವ ಕೆಲಸ ಆಗುತ್ತಿಲ್ಲ. ಎಲ್ಲೆಲ್ಲೂ ಸ್ವಾರ್ಥ ಕೇಂದ್ರೀತ ಬದುಕು ನಿರ್ಮಾಣ ಆಗಿದೆ. ಹೀಗಾಗಿ ಮಕ್ಕಳಿಗೆ ಶಿಕ್ಷಣ ಸಂಸ್ಥೆಗಳೇ ಇಂದು ನಿಜವಾದ ದಿಕ್ಕು. ಈ ನಿಟ್ಟಿನಲ್ಲಿ ಶ್ರೀ ವ್ಯಾಸ ಮಹರ್ಷಿ ಗುರುಕುಲ ನಿರಂತರ ಮಾನವೀಯ ಕಾರ್ಯ ನಡೆಸುತ್ತಿರುವುದು ಅಭಿನಂದನೀಯ ಎಂದು ಶ್ಲಾಘಿಸಿದರು.


ಪುರಪ್ಪೆಮನೆ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಮಳವಳ್ಳಿ ಮಾತನಾಡಿ, ಇಂತಹ ಮಾನವೀಯ ಸೇವಾ ಚಟುವಟಿಕೆಗಳನ್ನು ಜನಪ್ರತಿನಿದಿನಗಳು ಹೆಚ್ಚು ಹೆಚ್ಚು ಮಾಡಬೇಕು. ನಾವು ರಕ್ತ ಅವಶ್ಯಕತೆ ಇದ್ದಾಗ ಬ್ಲಡ್ ಬ್ಯಾಂಕ್ ಗಳಿಗೆ ಕರೆ ಮಾಡಿ ಒತ್ತಡ ಹಾಕುತ್ತೇವೆ. ಬದಲಿಗೆ ನಾವೇ ಮುಂದೆ ನಿಂತು ಇಂತಹ ಚಟುವಟಿಕೆ ಮಾಡಿದಾಗ ಜನ ಸೇವೆಯನ್ನು ಹೆಚ್ಚು ಅರ್ಥಪೂರ್ಣವಾಗಿ ಮಾಡಬಹುದು ಎಂದರು.
ಯುವ ಮುಖಂಡ ರವಿಕುಮಾರ್ ಯಡೆಹಳ್ಳಿ ಮಾತನಾಡಿ, ಶ್ರೀ ವ್ಯಾಸ ಮಹರ್ಷಿ ಗುರುಕುಲ ಮಾನವೀಯ ತರಬೇತಿಯ ಶಾಲೆಯಾಗಿದೆ. ಇಲ್ಲಿ ಕಲಿತ ಮಕ್ಕಳಲ್ಲಿ ನಾವು ಹೆಚ್ಚು ಮಾನವೀಯ ಮೌಲ್ಯ ಕಾಣುತ್ತೇವೆ. ಇದನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳು ಹೆಚ್ಚು ಹೆಚ್ಚು ಅಳವಡಿಸಿಕೊಂಡರೆ ಅರ್ಥಪೂರ್ಣ ಶಿಕ್ಷಣದ ಜೊತೆಗೆ ಮಾನವೀಯ ಸಮಾಜ ನಿರ್ಮಾಣ ಸಾಧ್ಯ ಎಂದರು.


ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ಸೇನಾನಿ ಹಾಗೂ ಗುರುಕುಲದ ಮಾರ್ಗದರ್ಶಕ ಕೆ. ಪಿ. ಕೃಷ್ಣಮೂರ್ತಿ, ಶ್ರೀ ವ್ಯಾಸ ಮಹರ್ಷಿ ಗುರುಕುಲ ತನ್ನ 13ನೇ ವರ್ಷದ ಕಾರ್ಯಕ್ರಮವನ್ನು ದುಂದು ವೆಚ್ಚ ಮಾಡಿ, ಹಣ ವ್ಯಯ ಮಾಡುವುದರ ಬದಲು ಸಮಾಜ ಸೇವಾ ಚಟುವಟಿಕೆ ನಡೆಸುತ್ತಾ ಬರುತ್ತಿದೆ. ನೇತ್ರ ಶಿಬಿರ, ರಕ್ತದಾನ ಶಿಬಿರ, ಆರೋಗ್ಯ ಶಿಬಿರ ಜೊತೆಗೆ ಮಕ್ಕಳ ಸಂಸ್ಕಾರಕ್ಕಾಗಿ ಸಾಂಸ್ಕೃತಿಕ ಚಟುವಟಿಕೆ ಶಿಕ್ಷಣದ ಜೊತೆ ಜೊತೆಗೆ ಕಳೆದ 13ವರ್ಷಗಳಿಂದಲೂ ನಿರಂತರವಾಗಿ ಮಾಡಿಕೊಂಡು ಬಂದಿದೆ. ಇದರ ಪರಿಣಾಮವಾಗಿ ಇಲ್ಲಿನ ಮಕ್ಕಳು ಕಡಿಮೆ ಅವಧಿಯಲ್ಲೇ ಇಲ್ಲಾ ರಂಗದಲ್ಲೂ ಸಾಧನೆ ಮಾಡಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.


ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ರಕ್ತ ನಿಧಿಯ ಹನುಮಂತಪ್ಪ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ರಕ್ತದ ಸಮಸ್ಯೆ ಹೆಚ್ಚಿತ್ತು. ಇಂತಹ ಸಂದರ್ಭದಲ್ಲಿ ಕೂಡ ಶ್ರೀ ವ್ಯಾಸ ಮಹರ್ಷಿ ಗುರುಕುಲ ನಮ್ಮ ಜೊತೆ ಕೈ ಜೋಡಿಸಿ ರಕ್ತದಾನ ಶಿಬಿರ ನಡೆಸಿ ರಕ್ತದ ತುರ್ತಿಗೆ ನೆರವಿಗೆ ಧಾವಿಸಿತ್ತು. ಹೀಗಾಗಿ ಪ್ರತಿ ವರ್ಷ ಈ ಸಂಸ್ಥೆಯೊಂದಿಗೆ ಎರಡರಿಂದ ಮೂರು ಶಿಬಿರಗಳನ್ನು ನಡೆಸುತ್ತಾ ಬರುತ್ತಿದ್ದೇವೆ ಎಂದರು.

ಸಭೆಯಲ್ಲಿ ಆರೋಗ್ಯಧಿಕಾರಿ ಪ್ರಭಾಕರ್, ಉದ್ಯಮಿ ಗಣಪತಿ, ವೈದ್ಯಧಿಕಾರಿ ಹೀರಾ, ಡಾ. ಗೌತಮ್, ಶ್ರೀನಿವಾಸ್ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ಕುಮಾರಿ ಸುಧಾ ಸ್ವಾಗತಿಸಿ, ರಶ್ಮಿ ಬಿ. ಹೆಚ್. ನಿರೂಪಿಸಿದರು. ನಿಧಿ ಸಂಗಡಿಗರು ಪ್ರಾರ್ಥಿಸಿ, ಸಂಸ್ಥೆ ಅಧ್ಯಕ್ಷ ಮಂಜುನಾಥ್ ಬ್ಯಾಣದ ವಂದಿಸಿದರು.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

3 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

4 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

17 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

19 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

20 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

21 hours ago