Categories: Hosanagara News

ಶಿಸ್ತು, ಸಮಯ ಪಾಲನೆ, ರಾಷ್ಟ್ರ ಪ್ರೇಮ ಮತ್ತು ಸೇವಾ ಮನೋಭಾವ ಬೆಳೆಸುವುದೇ NSS ನ ಉದ್ದೇಶ ; ಪ್ರೊ. ಅಂಜನ್ ಕುಮಾರ್


ಹೊಸನಗರ: ಇಲ್ಲಿನ ಮುಂಬಾರು (ಮಾವಿನಕಟ್ಟೆ)ಯಲ್ಲಿ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 & 2 ರ ವಾರ್ಷಿಕ ವಿಶೇಷ ಶಿಬಿರವು ಆರು ದಿನಗಳ ಕಾಲ ನಡೆಯಲಿದ್ದು, ಉದ್ಘಾಟನಾ ಸಮಾರಂಭವು ಮಂಗಳವಾರ ರಂದು ಜರುಗಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಿನ್ಸಿಪಲ್ ಅಂಜನ್ ಕುಮಾರ್, ಶಿಸ್ತು, ಸಮಯ ಪಾಲನೆ, ರಾಷ್ಟ್ರ ಪ್ರೇಮ ಮತ್ತು ಸೇವಾ ಮನೋಭಾವ ಬೆಳೆಸುವುದೇ ಎನ್ ಎಸ್ ಎಸ್ ನ ಉದ್ದೇಶ ಎಂದು ಹೇಳಿದರು.

ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ, ಶ್ರಮದಾನ, ಪ್ರಗತಿಪರ ಚಿಂತನೆ, ರಾಷ್ಟ್ರೀಯ ಜಾಗೃತಿ ಮೂಡಿಸುವದೇ ಎನ್ ಎಸ್ ಎಸ್ ನ ಗುರಿಯಾಗಿದೆ. ಎನ್ ಎಸ್ ಎಸ್ ಸೇರುವುದರಿಂದ ವಿದ್ಯಾರ್ಥಿಗಳಲ್ಲಿ ಸಮಯ ಪಾಲನೆ, ಸಹಬಾಳ್ವೆ, ಶ್ರಮದ ಮಹತ್ವ, ಪರಿಣಾಮಕಾರಿ ಭಾಷಣಾ ಕಲೆ, ಸಭಾ ಕಂಪನ ನಿವಾರಣೆ, ವ್ಯಕ್ತಿತ್ವ ವಿಕಸನ, ಆತ್ಮ ವಿಶ್ವಾಸ, ರಾಷ್ಟ್ರೀಯ ಭಾವೈಕ್ಯ ಮತ್ತು ಜೀವನ ಪ್ರೀತಿಯನ್ನು ಕಲಿಸುತ್ತದೆ ಎಂದರು.

ಮಾಜಿ ಸೈನಿಕರೊಂದಿಗೆ ಸಂವಾದ ಕಾರ್ಯಕ್ರಮಗಳು, ಜೀವನ ಕೌಶಲ್ಯ ತರಬೇತಿ, ಸರ್ಕಾರಿ ಸೌಲಭ್ಯಗಳು,ಆರೋಗ್ಯ, ಮಹಿಳೆ ಮತ್ತು ಆರೋಗ್ಯ ಕುರಿತ ಉಪನ್ಯಾಸಗಳು,ಆದಾರ್ ಕಾರ್ಡ್, ಪಾನ್ ಕಾರ್ಡ್ ಮತ್ತು ಇತರೆ ಅಂಚೆ ಸೇವೆಗಳ ಮೇಳ, ದಂತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರಗಳು ನೆಡೆಯಲಿದ್ದು ಗ್ರಾಮಸ್ಥರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಶ್ರೀಧರ ಉಡುಪ, ಕಾಲೇಜಿಗೆ ಉತ್ತಮ ಹೆಸರು ತರಲು ವಿದ್ಯಾರ್ಥಿ ಗಳಿಗೆ ಕರೆ ನೀಡಿದರು.


ಮುಖ್ಯ ಅಥಿತಿಗಳಾಗಿ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ ಪರಿಸರ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೆಚ್ ಆರ್, ಪ್ರಾ.ಶಾ.ಶಿ ಸಂಘದ ಅಧ್ಯಕ್ಷ ಸುರೇಶ, ಎಂ ಗುಡ್ಡೆಕೊಪ್ಪ ಗ್ರಾ.ಪಂ ಅಧ್ಯಕ್ಷರಾದ ಸವಿತಾ, ಉಪಾಧ್ಯಕ್ಷರಾದ ರಶ್ಮಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಕಾಂತ್, ಸಹ ಶಿಬಿರಾಧಿಕಾರಿ ಸಾದನಾ ಪಿ ನಾಯ್ಕ್, ಡಾ.ಕೆ ಶ್ರೀಪತಿ, ಡಾ.ಲೋಕೇಶಪ್ಪ, ಉಪನ್ಯಾಸಕ ಶಶಿ ಕುಮಾರ್ ಉಪಸ್ಥಿತರಿದ್ದರು.

ಶಿಬಿರಾಧಿಕಾರಿ ದೊಡ್ಡಯ್ಯ ಹೆಚ್ ಸ್ವಾಗತಿಸಿದರು, ವಿದ್ಯಾರ್ಥಿನಿ ಪ್ರೀತಿ ಬಿ ಎಸ್ ನಿರೂಪಿಸಿದರು. ಶಿಬಿರಾಧಿಕಾರಿ ಡಾ.ಬಸವರಾಜಪ್ಪ ಎಂ ಟಿ ವಂದಿಸಿದರು.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

17 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

18 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

18 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

20 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

22 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

24 hours ago