ಶ್ರೀ ಶಿವಲಿಂಗೇಶ್ವರ ಪ್ರಶಸ್ತಿಗೆ ಹೊಸನಗರದ ಡಾ. ಗುರುರಾಜ ಆಯ್ಕೆ

ರಿಪ್ಪನ್‌ಪೇಟೆ : ಕೋಣಂದೂರು ಶ್ರೀಕ್ಷೇತ್ರ ಶಿವಲಿಂಗೇಶ್ವರ ಬೃಹನ್ಮಠದವರು ಕೊಡಮಾಡುವ ಶ್ರೀ ಶಿವಲಿಂಗ ಶ್ರೀ ಪ್ರಶಸ್ತಿಗೆ  ಹೊಸನಗರದ ಡಾ.ಗುರುರಾಜರವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.

ವೈದ್ಯೋ ನಾರಾಯಣ ಹರಿ ಎಂಬುದು ದಾರ್ಶನಿಕರ ಅಭಿಪ್ರಾಯವಾಗಿದ್ದರೆ. ವೈದ್ಯರು ದೇವರಿಗೆ ಸಮಾನ ದೇವರನ್ನು ಯಾರು ಪ್ರತ್ಯಕ್ಷವಾಗಿ ಕಂಡಿಲ್ಲ. ಆದರೆ ನಮ್ಮ ಸಮಾಜದಲ್ಲಿರುವ ಕೆಲವೊಬ್ಬ ವೈದ್ಯರುಗಳು ದೇವರ ರೂಪದಲ್ಲಿ ಬಂದು ರೋಗಿಗಳಿಗೆ ಜೀವ ಉಳಿಸಿದ ಮಾನಸಿಕಧೈರ್ಯ ತುಂಬಿದ ಎಷ್ಟೋ ಉದಾಹರಣೆಗಳಿವೆ. ಅಂತಹ ಸಾಕಷ್ಟು ವೈದ್ಯರುಗಳ ಸಾಲಿನಲ್ಲಿ ಹೊಸನಗರ ಪಟ್ಟಣದ ಶ್ರೀ ಪ್ರಭು ಕ್ಲಿನಿಕ್‌ನ ಡಾ.ಗುರುರಾಜ ರವರು ಒಬ್ಬರು ತಮ್ಮ ಕರ್ತವ್ಯದ ದಿನಗಳಲ್ಲಿ ಚಾಚು ತಪ್ಪದೆ ಕಾಯಕ ನಿಷ್ಟೆಯನ್ನು ಪ್ರಾಮಾಣಿಕವಾಗಿ ಪಾಲಿಸಿದವರು.

ಕವಿ ಸಾಹಿತ್ಯ ಸಮಾಜಿಕ ಧಾರ್ಮಿಕ ನೆಲ ಜಲ ಭಾಷೆಗಳ ವಿಚಾರದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು ಹಲವು ಸಂದರ್ಭಗಳಲ್ಲಿ ಉದಾರ ದೇಣಿಗೆ ನೀಡುವುದರೊಂದಿಗೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಂತಹ ಸರಳ ವ್ಯಕ್ತಿತ್ವದ ವೈದ್ಯಾಧಿಕಾರಿ ಡಾ.ಗುರುರಾಜರವರ ಸೇವಾ ಕಾರ್ಯವನ್ನು ಗುರುತಿಸಿ ಕೋಣಂದೂರು ಶಿವಲಿಂಗೇಶ್ವರ ಪ್ರಶಸ್ತಿಗೆ ಆಯ್ಕೆಮಾಡಿರುವುದು ಸಮಯೋಚಿತವಾಗಿದೆ ಎಂದು ಹೇಳಿ, ಇದೇ ಜನವರಿ 14 ರಂದು ಏರ್ಪಡಿಸಲಾಗಿರುವ ಮಕರ ಸಂಕ್ರಾಂತಿಯ ಜಾತ್ರಾ ಮಹೋತ್ಸವದಲ್ಲಿ ಆನಂದಪುರ ಮುರುಘಾರಾಜೇಂದ್ರ ಸಂಸ್ಥಾನ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜೀ ಪ್ರಶಸ್ತಿ ಪ್ರದಾನ ಮಾಡುವರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago