ಸಂವಿಧಾನ ಜಾಗೃತಿ ಜಾಥಾ |  ಪ್ರತಿಯೊಬ್ಬ ನಾಗರೀಕನ್ನು ಸಂವಿಧಾನವನ್ನು ಗೌರವಿಸಬೇಕು

ರಿಪ್ಪನ್‌ಪೇಟೆ: ಸಂವಿಧಾನ ಜಾಗೃತಿ ಎಂಬುದು ಇಡೀ ರಾಜ್ಯ ದೇಶದ ಪ್ರತಿಯೊಬ್ಬರಿಗೂ ವಿಸ್ತರಿಸಬೇಕಾಗಿದೆ ಎಂದು ತಾಲ್ಲೂಕ್ ಪಂಚಾಯ್ತಿ ಇಓ ನರೇಂದ್ರಕುಮಾರ ಹೇಳಿದರು.

ರಿಪ್ಪನ್‌ಪೇಟೆಗೆ ಸಂವಿಧಾನ ಜಾಗೃತಿ ಜಾಥಾ ರಥವನ್ನು ಗ್ರಾಮ ಪಂಚಾಯ್ತಿಯಿಂದ ಸ್ವಾಗತಿಸಿ ನಂತರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿ, ಭಾರತ ವಿವಿಧ ಧರ್ಮ ಸಂಸ್ಕೃತಿಯನ್ನು ಹೊಂದಿದ ದೇಶವಾಗಿದ್ದು ಈ ದೇಶಕ್ಕೆ ಅನುಗುಣವಾದಂತಹ ಸಂವಿಧಾನವನ್ನು ಪ್ರತಿಯೊಬ್ಬ ನಾಗರೀಕರ ಅರಿಯಬೇಕು. ಸಂವಿಧಾನಕ್ಕೆ ಗೌರವ ನೀಡುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಿದೆ. ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಬಾಬು ರಾಜೇಂದ್ರಪ್ರಸಾದ್ ಕರಡು ಸಮಿತಿ ಅಧ್ಯಕ್ಷರಾಗಿ ಡಾ.ಬಿ.ಆರ್.ಅಂಬೇಡ್ಕರ್ ನೇಮಕ ಗೊಳ್ಳುತ್ತಾರೆ.1946 ರ ಡಿಸೆಂಬರ್ 9 ರಂದು ಆರಂಭವಾದ ಸಂವಿಧಾನ ರಚನಾ ಪ್ರಕ್ರಿಯೆ ಬಹು ಸಂಸ್ಕೃತಿ ಜಾತಿ ಧರ್ಮ ಪ್ರಾದೇಶಿಕ ಭಿನ್ನತೆ ಇರುವಂತಹ ನಮ್ಮ ದೇಶದಲ್ಲಿ ಸಂವಿಧಾನ ರೂಪುಗೊಳ್ಳಲು 2 ವರ್ಷ 11 ತಿಂಗಳು 18 ದಿನಗಳನ್ನು ತಗೆದುಕೊಂಡಿದೆ. 1949 ಜನವರಿ 26 ರಂದು ಸಂಪೂರ್ಣವಾಗಿ ಸಂವಿಧಾನ ರಚನೆಗೊಂಡು 1950 ಜನವರಿ 26 ರಂದು ಅಂಗೀಕಾರಗೊಳ್ಳುತ್ತದೆ. ಭಾರತೀಯ ಪ್ರಜೆಗಳಾದ ನಾವು ಎಂಬ ಶಬ್ದವು ಸಂವಿಧಾನದ ಮೂಲ ಮಂತ್ರವಾಗಿದ್ದು ಪ್ರತಿ ದಿನವೂ ಪ್ರತಿಯೊಬ್ಬರು ಬಳಸುತ್ತಿದ್ದೇವೆ. ಸ್ವಾತಂತ್ರ್ಯ ಸಮಾನತೆ ಭ್ರಾತೃತ್ವ ಎಂಬ ಮೂರು ಆಧಾರ ಸ್ತಂಭಗಳಿಂದ ರಚಿತವಾದ ಸಂವಿಧಾನದಿಂದಲೇ ಉನ್ನತ ಹುದ್ದೇಗೇರಲು ಸಾದ್ಯವಾಗಿದೆ ಪ್ರತಿಯೊಬ್ಬ ನಾಗರೀಕನ್ನು ಸಂವಿಧಾನವನ್ನು ಗೌರವಿಸಬೇಕಿದೆ ಎಂದರು.

ಎಡಿ ರಾಜೇಂದ್ರ ಕುಮಾರ್,ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಸದಸ್ಯರಾದ ಮಂಜುಳಾ ಕೇತಾರ್ಜಿರಾವ್, ನಿರೂಫ್‌ಕುಮರ್, ಜಿ.ಡಿ.ಮಲ್ಲಿಕಾರ್ಜುನ, ಗಣಪತಿ, ಡಿ.ಈ.ಮಧುಸೂಧನ್, ಪಿ.ರಮೇಶ್, ಸುಂದರೇಶ್, ಎನ್.ಚಂದ್ರೇಶ್, ಪ್ರಕಾಶ ಪಾಲೇಕರ್, ಸಾರಾಭಿ, ವೇದಾವತಿ, ವನಮಾಲ, ದಾನಮ್ಮ, ಮಹಾಲಕ್ಷ್ಮಿ, ಅಶ್ವಿನಿ, ಅನುಪಮ, ದೀಪಾ ಸುಧೀರ್, ವಿನೋಧ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಧುಸೂದನ್, ಇನ್ನಿತರ ಸಿಬ್ಬಂದಿವರ್ಗ ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

19 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

23 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

23 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago