Categories: Hosanagara News

ಸಪೋಟ, ಮಾವಿನ ಮರಗಳ ಕಡಿತಲೆ ; ಹೊಸನಗರ ತೋಟಗಾರಿಕಾ ಇಲಾಖೆ ಸ್ಪಷ್ಟೀಕರಣ

ಹೊಸನಗರ : ‘ಹೊಸನಗರ ತೋಟಗಾರಿಕಾ ಇಲಾಖೆಯಲ್ಲಿ ಸಪೋಟ, ಮಾವಿನ ಮರಗಳ ಮಾರಣ ಹೋಮ – ಪರಿಸರ ಪ್ರೇಮಿಗಳೇ ಎಲ್ಲಿದ್ದೀರಿ?’ ಎಂಬ ಶೀರ್ಷಿಕೆ ಅಡಿಯಲ್ಲಿ ಮೇ 12 ರಂದು ‘ಮಲ್ನಾಡ್ ಟೈಮ್ಸ್’ ಸುದ್ದಿ ಮಾಡಿತ್ತು. ಈ ಸುದ್ದಿಯ ಕುರಿತಂತೆ ಹೊಸನಗರ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಟಿ.ಸಿ ಪುಟ್ಟನಾಯ್ಕ್ ಸುದ್ದಿ ಸಂಸ್ಥೆಗೆ ಸ್ಪಷ್ಟನೆ ನೀಡಿದ್ದಾರೆ. ಅದು ಈ ಕೆಳಗಿನಂತಿದೆ.

ತಾವು ನೀಡಿರುವ ಪ್ರಕಟಣೆಯು ವೈಜ್ಞಾನಿಕ ಹಿನ್ನೆಲೆಯನ್ನು ಅರಿಯದೆ ಪ್ರಕಟಿಸಿರುವುದು ವಿಷಾದನೀಯ. ಕಾರಣ, ಗಂಗನಕೊಪ್ಪ ತೋಟಗಾರಿಕೆ ಕ್ಷೇತ್ರದಲ್ಲಿರುವ ಸಪೋಟ ಮರಗಳು 47-55 ವರ್ಷ ವಯಸ್ಸಾದ ಮರಗಳಾಗಿರುತ್ತವೆ. ಅವುಗಳಿಂದ ನಿರೀಕ್ಷಿತ ಗುಣಮಟ್ಟದ ಇಳುವರಿ ಬರುತ್ತಿಲ್ಲ, ಆದ್ದರಿಂದ ಪುನಶ್ಚೇತನ (Rejuvenation) ಎಂಬ ತಾಂತ್ರಿಕತೆಯಿಂದ ಅವುಗಳ ಇಳುವರಿ ಹೆಚ್ಚಿಸಲು ಪ್ರತಿ ಮರದಲ್ಲಿ, ಒಂದು ಆರೋಗ್ಯವಂತ ಹಸಿರು ಕೊಂಬೆಯನ್ನು ಬಿಟ್ಟು ಉಳಿದ ಕೊಂಬೆಗಳನ್ನು ತೆರವುಗೊಳಿಸಲಾಗಿದೆ. ಕಾರಣ ಉಳಿಸಿರುವ ಕೊಂಬೆಯಿಂದ ಆಹಾರ ಉತ್ಪಾದನೆಯಾಗಿ ಮರ ಸಾಯದೇ ಇರಲಿ ಎಂಬುದಾಗಿದೆ ಹಾಗೂ ಕತ್ತರಿಸಿರುವ ಭಾಗದಿಂದ ಹೊಸ ಚಿಗುರು ಬಂದು ಕೊಂಬೆಗಳು ಶೀಘ್ರವಾಗಿ ಬೆಳೆದು ಅವುಗಳಲ್ಲಿ ಇಳುವರಿಯನ್ನು ಪಡೆಯಬಹುದಾಗಿದೆ. ಈ ವಿಧಾನ ಅನುಸರಿಸಲು ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯ Farms and nursery ವಿಭಾಗದಿಂದ ಅನುಮತಿ ಪಡೆದುಕೊಂಡು ತಾಂತ್ರಿಕತೆಯನ್ನು ಅಳವಡಿಸಲಾಗಿದೆ.

ಮಾವಿನ ಮರಗಳ ಬಗ್ಗೆ ಹೇಳುವುದಾದರೆ, ಮಾವಿನ ತಳಿಯನ್ನು ಕಾಯ್ದಿರಿಸಿ ಅವುಗಳಿಂದ ಕಸಿ ಕೊಂಬೆಯನ್ನು ಪಡೆದು ಕಸಿ ಸಸಿ ಉತ್ಪಾದಿಸಲು ಅನುವು ಆಗುವಂತೆ ನೆಲಮಟ್ಟದಿಂದ 3-4 ಅಡಿ ಎತ್ತರದಲ್ಲಿ ಕತ್ತರಿಸಿ ಇವುಗಳಲ್ಲಿ ಬರುವ ಕಸಿ ಕೊಂಬೆಯನ್ನು ಮಾವಿನ ಕಸಿ ಸಸ್ಯೋತ್ಪಾದನೆಗಾಗಿ ಉಪಯೋಗಿಸಿಕೊಳ್ಳಲು ಕಾಯ್ದಿರಿಸಲಾಗಿದೆ. ಇವುಗಳಿಂದ ಯಾವುದೇ ಇಳುವರಿ ಪಡೆದುಕೊಳ್ಳಲು ಅವಕಾಶ ಇರುವುದಿಲ್ಲ. ಇವುಗಳ ಎತ್ತರವನ್ನು ಕೈಗೆ ಸಿಗುವಹಾಗೆ ನಿರ್ವಹಿಸಬೇಕಾಗಿರುತ್ತದೆ. ಆದ್ದರಿಂದ ಈ ವಿಷಯವನ್ನು ಸಾರ್ವಜನಿಕರ ಗಮನಕ್ಕೆ ತರುವಂತೆ ಈ ಮೂಲಕ ವಿನಂತಿಸಿದೆ ಎಂದು ತಿಳಿಸಿದ್ದಾರೆ.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

4 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

6 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

7 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

7 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

8 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

11 hours ago