ಸರ್ಕಾರಕ್ಕೆ ನೀಡಿದ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲೆಯಲ್ಲಿ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿದ್ದು, ಬರಪೀಡಿತ ವರದಿ ಮಾತ್ರ ಅವೈಜ್ಞಾನಿಕವಾಗಿರುತ್ತದೆ. ಮಲೆನಾಡಿನ ಜಿಲ್ಲೆಯಲ್ಲಿ ಸಕಾಲದಲ್ಲಿ ಮಳೆ ಬರದಿದ್ದು, ಇದರಿಂದ ರೈತರು ತಮ್ಮ ಸಂಪೂರ್ಣ ಬೆಳೆಯನ್ನು ಕಳೆದುಕೊಂಡಿದ್ದು ಸರ್ಕಾರ ನೆಪಕ್ಕೆ ಮಾತ್ರ ಅಧಿಕಾರಿಗಳಿಂದ ವರದಿ ತರಿಸಿ ಶಿವಮೊಗ್ಗ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆಂದು ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಆರ್.ಎ.ಚಾಬುಸಾಬ್ ಆರೋಪಿಸಿದರು.

ರಿಪ್ಪನ್‌ಪೇಟೆಯಲ್ಲಿ ಇಂದು ನಾಡಕಛೇರಿಯ ಮುಂಭಾಗ ರಾಜ್ಯ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ನಾಡಕಛೇರಿಯ ಉಪತಹಶೀಲ್ದಾರ್ ಮೂಲಕ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿ, ವಿಶೇಷವಾಗಿ ಹೊಸನಗರ ತಾಲ್ಲೂಕಿನಲ್ಲೂ ಸುಮಾರು 15 ಸಾವಿರ ಹೆಕ್ಟೇರ್ ಭತ್ತದ ಬೆಳೆ 800 ಹೆಕ್ಟೇರ್ ಜೋಳದ ಬೆಳೆ ನಾಶವಾಗಿದ್ದು ಅಧಿಕಾರಿಗಳು ನೀಡಿರುವ ವರದಿ ಕೇವಲ ಅರ್ಧದಷ್ಟಿರುತ್ತದೆ. ಹೀಗೆಯೇ ತೀರ್ಥಹಳ್ಳಿ ಮತ್ತು ಸಾಗರದಲ್ಲಿ ಸಹ ಭತ್ತದ ಬೆಳೆ ಜೋಳದ ಬೆಳೆ ಸರ್ವನಾಶವಾಗಿದೆ. ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿ ಸರ್ಕಾರ ತರಿಸಿಕೊಂಡಿರುವ ವರದಿಯನ್ನು ತಿರಸ್ಕರಿಸಿ, ಸಮಗ್ರ ವರದಿಯನ್ನು ತರಿಸಿಕೊಂಡು ರೈತರಿಗೆ ಪರಿಹಾರ ನೀಡುವಲ್ಲಿ ಮಧ್ಯ ಪ್ರವೇಶ ಮಾಡಲು ಈ ಮೂಲಕ ಆಗ್ರಹಿಸುತ್ತದೆ.

ಜಿಲ್ಲೆಯಾದ್ಯಂತ ರೈತರು ಭಿತ್ತಿದ ಭತ್ತದ ಬೀಜ, ಜೋಳ, ಸಕಾಲಕ್ಕೆ ಮಳೆ ಬಾರದಿದ್ದರಿಂದ ನೆಲಕಚ್ಚಿ ಹೋಗಿರುತ್ತದೆ. ಜಾನುವಾರುಗಳಿಗೆ ಮೇವಿನ ಕೊರತೆ ಸಹ ಇದೆ. ಕುಡಿಯುವ ನೀರಿನ ಬವಣೆ ಜಾಸ್ತಿ ಆಗಿದೆ. ಈಗಾಗಲೇ ಹೊಸನಗರ ತಾಲ್ಲೂಕಿನಲ್ಲಿ ಅಧಿಕಾರಿಗಳು ನೀಡಿರುವ ವರದಿಯಲ್ಲಿ ಹೊಸನಗರ 5343 ಹೆಕ್ಟೇರ್ ಭತ್ತ, 265 ಹೆಕ್ಟೇರ್ ಜೋಳ, ತೀರ್ಥಹಳ್ಳಿಯಲ್ಲಿ 7156 ಹೆಕ್ಟೇರ್ ಭತ್ತ, ಸಾಗರ 8913 ಹೆಕ್ಟೇರ್ ಮಳೆಯಾಧಾರಿತ ಜಮೀನು, 1598 ಹೆಕ್ಟೇರ್ ನೀರಾವರಿ ಬೆಳೆ, 1723 ಹೆಕ್ಟೇರ್ ಜೋಳದ ಬೆಳೆ ಹಾಗೂ ಜಿಲ್ಲಾದ್ಯಂತ ಶೇ 33% ಕ್ಕಿಂತ ಅತಿಹೆಚ್ಚು ಬರಗಾಲವಿದ್ದು, ಬೆಳೆಗಳು ಶೇಕಡವಾರು ನಾಶವಾಗಿದೆ ಎಂದು ತಿಳಿಸಿರುತ್ತಾರೆ. ಆದರೆ ನಮ್ಮ ಪ್ರಶ್ನೆ ಸಮರ್ಪಕವಾಗಿ ಆಯಾ ಗ್ರಾಮಗಳ ಖುದ್ದು ಭೇಟಿ ನೀಡಿ ವರದಿ ತಯಾರು ಮಾಡುವ ಪ್ರಕ್ರಿಯೆ ನಡೆದಿಲ್ಲ. ಇದೊಂದು ಕಣ್ಣೊರೆಸುವ ತಂತ್ರವಾಗಿದೆ. ಜಿಲ್ಲೆಯಾದ್ಯಂತ ಅಡಿಕೆ ಮತ್ತು ಇತರ ಸಾಂಬಾರು ಬೆಳೆಗಳು ನೀರಿಲ್ಲದೆ ಬೆಳೆ ಶೇ. 40 ಕ್ಕೆ ಇಳಿಕೆಯಾಗಿದೆ. ಅದರ ಪೂರ್ಣ ವರದಿ ನೀಡಿಲ್ಲ ಹಾಗೂ ರೈತರು ಬೆಳೆದಿರುವ ಸಾಂಬಾರು ಬೆಳೆ, ಇತರೆ ಬೆಳೆಗಳು ಬರದಲ್ಲಿ ನಾಶ ಹೊಂದಿರುತ್ತದೆ.

ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದ್ದು, ಈ ರಾಜ್ಯದ ಮುಖ್ಯಮಂತ್ರಿಗಳು ಬರಗಾಲ ಇದ್ದರೂ ನೃತ್ಯ ಮಾಡುವಲ್ಲಿ ಕಾಲಕಳೆಯುತ್ತಿದ್ದಾರೆ.ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ಮಲೆನಾಡಿನ ಮುಖ್ಯ ಭಾಗವಾದ ಶಿವಮೊಗ್ಗ ಜಿಲ್ಲೆಯ ಸಮಗ್ರ ವರದಿಯನ್ನು ತರಿಸಲು ಜಂಟಿ ನೇತೃತ್ವದಲ್ಲಿ ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ಮತ್ತು ಪಶುಪಾಲನಾ ಇಲಾಖೆಯ ಅಧಿಕಾರಿಗಳಿಂದ ಸಮಗ್ರ ವರದಿ ತರಿಸಿಕೊಂಡು ಜಿಲ್ಲೆಯ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸೂಕ್ತ ಆದೇಶ ನೀಡಲು ಒತ್ತಾಯಿಸುತ್ತೇವೆ.

ಪ್ರತಿಭಟನೆಯಲ್ಲಿ ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್,ಜಿಲ್ಲಾ ಜೆಡಿಎಸ್ ಮುಖಂಡ ಆರ್.ಎನ್.ಮಂಜುನಾಥ, ದೂನ ರಾಜು (ಸೋಮಶೇಖರ), ಮಲ್ಲೇಶ್ ಆಲವಳ್ಳಿ, ಹೊಳೆಯಪ್ಪಗೌಡ, ಕುಕ್ಕಳಲೇ ಯೋಗೇಂದ್ರ, ಅಣ್ಣಪ್ಪ, ನಾಗರಾಜ, ಮಸರೂರು ಈಶ್ವರಪ್ಪ, ಗಣೇಶ ಹೊಸಮನೆ, ಮೇಲೋಜಿರಾವ್, ರೇಣುಕಪ್ಪ ನೆವಟೂರು ಇನ್ನಿತರರು ಪಾಲ್ಗೊಂಡಿದ್ದರು.

Malnad Times

Recent Posts

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

3 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

7 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

19 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

22 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

23 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

1 day ago