Categories: Hosanagara News

ಸರ್ಕಾರದ ಯೋಜನೆಗಳ ಯಶಸ್ಸು ಅಧಿಕಾರಿ ವರ್ಗದ ಕಾರ್ಯ ವೈಖರಿಯನ್ನು ಅವಲಂಬಿಸಿದೆ ; ಮಧು ಬಂಗಾರಪ್ಪ

ಹೊಸನಗರ : ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯ. ಜನಪ್ರತಿನಿಧಿಗಳಲು ಹಾಗೂ ಅಧಿಕಾರಿ ವರ್ಗದ ನಡುವೆ ಸಂವಹನದ ಕೊರತೆ ಆದರೆ ಯೋಜನೆ ಹಳ್ಳ ಹಿಡಿಯುತ್ತದೆ. ಜನಪರ ಕಾಳಜಿಯಿಂದ ಕೆಲಸ ಮಾಡಿಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಇತ್ತೀಚೆಗೆ ಭೂ ಒತ್ತುವರಿ ತೆರವು ಪ್ರಕರಣಗಳ್ಲಿ ಅಧಿಕಾರಿಗಳು ಬೆಳೆಯನ್ನು ನಾಶ ಮಾಡಿರುವ ಘಟನೆಗಳು ಗಮನಕ್ಕೆ ಬಂದಿದೆ. ತೆರವು ಕಾರ್ಯ ನಡೆಸುವ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಮಾನವೀಯತೆ ಮರೆತು ಕೆಲಸ ಮಾಡುತ್ತಿರುವುದು ದುರದೃಷ್ಠಕರ. ರೈತರ ಕಷ್ಟದ ಕುರಿತು ಅರಿವು ಇರಬೇಕು ಇಲ್ಲಿನ ಜಾಗ ಒತ್ತುವರಿ ಪ್ರಕರಣಗಳಲ್ಲಿ ಜಾಗವನ್ನು ಇಲಾಖೆ ಮರಳಿ ಪಡೆಯಲು ಟ್ರಂಚ್ ತೆಗೆಯಬಹುದು. ಬೇಲಿ ನಿರ್ಮಾಣ ಮಾಡಬಹುದು. ಆದರೆ ರೈತ ಬೆಳೆದ ಬೆಳೆಗಳನ್ನು ನಾಶ ಮಾಡಲು ಅಧಿಕಾರಿಗಳಿಗೆ ಅಧಿಕಾರವಿಲ್ಲ. ನ್ಯಾಯಾಲಯ ಸಹಾ ಇಂತಹ ಒಂದು ಪ್ರಕರಣದಲ್ಲಿ ಅರಣ್ಯ ಇಲಾಖೆಗೆ ನೋಟೀಸ್ ಜಾರಿ ಮಾಡಿದೆ. ರೈತನಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎನ್ನುವುದನ್ನು ಮರೆಯಬಾರದು ಎಂದರು.


ತಾಲೂಕಿನ ಕೆಲ ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ದೊರೆಯದಿರುವುದು ಗಂಭೀರ ವಿಷಯ. ಪುಸ್ತಕಗಳ ಕೊರತೆ ಇಲ್ಲ. ಮಕ್ಕಳಿಗೆ ದೊರಕಿಸುವ ವ್ಯವಸ್ಥೆಯನ್ನು ಮಾಡಿ ಎಂದ ಅವರು ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಕಾರ್ಯದ ಪ್ರಗತಿ ಕುಂಠಿತವಾಗಿದೆ ಎಂದು ಅತೃಪ್ತಿ ವ್ಯಕ್ತಪಡಿಸಿದರು.


ಉತ್ತರಿಸಲು ತಡವರಿಸಿದ ತಹಸೀಲ್ದಾರ್:
ಬಗರ್‌ಹುಕುಂ ಹಾಗೂ 94ಸಿ ಅರ್ಜಿಗಳ ವಿಲೇ ಕುರಿತು ಮಾಹಿತಿ ಪಡೆದ ಸಚಿವರು ಸಲ್ಲಿಕೆಯಾದ 16 ಸಾವಿರ 94ಸಿ ಅರ್ಜಿಗಳ ಪೈಕಿ ಬಹುತೇಕ ಅರ್ಜಿಗಳನ್ನು ವಜಾಗೊಳಿಸಿದ್ದೀರಿ. ಇನ್ನುಳಿದ 300 ಅರ್ಜಿಗಳನ್ನೂ ವಜಾಗೊಳಿಸಿ ಬಿಡಿ. ಇದೇನಾ ಸಾಧನೆ ಎಂದು ತಹಸೀಲ್ದಾರ್ ಅವರನ್ನು ಪ್ರಶ್ನಿಸಿದರು. ಇದಕ್ಕೆ ಸೂಕ್ತ ಸಮಜಾಯಿಸಿ ಕೊಡಲು ತಹಸೀಲ್ದಾರ್ ತಡಬಡಿಸಿದಾಗ, ಮಧ್ಯ ಪ್ರವೇಶಿಸಿದ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ಅರಣ್ಯ ಭೂಮಿಗೆ ಸಂಬಂಧಿಸಿದ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದರು.


ಬೆಳಕು ಕೊಟ್ಟ ಹೊಸನಗರ ಜನತೆ ಇಂದು ಕತ್ತಲೆಯಲ್ಲಿ ಕೂರುವಂತಾಗಿದೆ. ಪರಿವರ್ತಕ ಸುಟ್ಟು ವಾರವಾದರೂ, ದುರಸ್ತಿ ಆಗುತ್ತಿಲ್ಲ ಎನ್ನುವ ದೂರು ಬಂದಿದೆ. ಎಂದು ಮೆಸ್ಕಾಂ ಎಇಇ ಅವರನ್ನು ಶಾಸಕ ಗೋಪಾಲಕೃಷ್ಣ ತರಾಟೆಗೆ ತೆಗೆದುಕೊಂಡರು. ಹೊಸನಗರಕ್ಕೆ 110/11ಕೆವಿ ಸ್ಥಾವರ ಇಲ್ಲದಿರುವುದು ಹಾಗೂ ಪರಿವರ್ತಕಗಳನ್ನು ಸಾಗರದಿಂದ ಸಾಗಿಸಿ ತರಬೇಕಾಗಿರುವುದರಿಂದ ಸಮಸ್ಯೆಯಾಗುತ್ತಿದೆ ಎಂದರು.


ಜೆಜೆಎಂ ಯೋಜನೆಯಡಿ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವಂತೆ ಇಲಾಖೆಯ ಇಂಜಿನಿಯರ್‌ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ನೀಡಿದರು. ಎಲೆಚುಕ್ಕಿ ರೋಗ ಹೆಚ್ಚು ಕಂಡು ಬಂದಿರುವ ತಾಲೂಕಿನ ನಿಟ್ಟೂರು ಹಾಗೂ ಸಾಗರ, ತುಮರಿಯಲ್ಲಿ ರೈತರಿಗೆ ಮಾಹಿತಿ ಕಾರ‍್ಯಾಗಾರ ಏರ್ಪಡಿಸುವಂತೆ ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಇಓ ನರೇಂದ್ರಕುಮಾರ್, ಆಡಳಿತ ಅಧಿಕಾರಿ ಜಯಲಕ್ಷ್ಮಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಮತ್ತಿತರರು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago