ರಿಪ್ಪನ್ಪೇಟೆ: ಇಲ್ಲಿನ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕಳೆದ 18 ವರ್ಷದಿಂದ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡಿರುವ ಮುಖ್ಯಶಿಕ್ಷಕಿ ಲಕ್ಷ್ಮಿದೇವಿ ಮತ್ತು ಸಹ ಶಿಕ್ಷಕಿ ಜುಲೇಕಾಭಿ ಇವರಿಗೆ ಶಾಲಾ ಎಸ್.ಡಿ.ಎಂ.ಸಿ ಸಮಿತಿಯವರು ಮತ್ತು ಶಿಕ್ಷಕ ವೃಂದ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿದ್ದರು.
ಸಮಾರಂಭದ ಆಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.ಆಧ್ಯಕ್ಷ ಮೊಹಮ್ಮದ್ ವಹಿಸಿದ್ದರು.
ಮುಖ್ಯ ಆತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನಾಗರಾಜ್, ಕಛೇರಿಯ ಸಿಬ್ಬಂದಿ ಕರಿಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರ ಸಂಘದ ನಿರ್ದೇಶಕ ಜಗದೀಶ ಕಾಗಿನಲಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಉಮೇಶ್, ಮಹ್ಮದ್ಅಲಿ, ಅಸ್ಮಭಾನು, ಇನ್ನಿತರರು ಭಾಗವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ವರ್ಗಾವಣೆಗೊಂಡಿರುವ ಶಾಲಾ ಮುಖ್ಯೋಪಾಧ್ಯಾಯನಿ ಲಕ್ಷ್ಮಿದೇವಿ ಹಾಗೂ ಜುಲೇಕಾಭಿ ಇವರನ್ನು ಶಾಲಾ ಸಮತಿಯವರು ಸನ್ಮಾನಿಸಿ ಆಭಿನಂದಿಸಿದರು.
ಮುಖ್ಯ ಶಿಕ್ಷಕಿ ಲೀಲಾವತಿ ಸ್ವಾಗತಿಸಿ ನಿರೂಪಿಸಿದರು. ಸಾಜಿದಬೇಗಂ ವಂದಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…