ರಿಪ್ಪನ್ಪೇಟೆ: ಇಲ್ಲಿನ ಬರುವೆ ಗ್ರಾಮದ ಸರ್ವೇ ನಂ 43 ರಲ್ಲಿ ಸರ್ಕಾರಿ ಕಟ್ಟಡ ಕಟ್ಟಲು ಮೀಸಲಿಟ್ಟಿರುವ ಜಾಗವನ್ನು ಕಬಳಿಸುವ ಉದ್ದೇಶದಿಂದ ರಾತ್ರೋರಾತ್ರಿ ಅಕ್ರಮವಾಗಿ ಶೆಡ್ಗಳು ಉದ್ಬವವಾಗಿರುವ ಘಟನೆ ನಡೆದಿದ್ದು ವಿಷಯ ತಿಳಿಯುತ್ತದ್ದಂತೆ ಗ್ರಾಮಾಡಳಿತ ಅಕ್ರಮ ಶೆಡ್ಗಳನ್ನು ತೆರವುಗೊಳಿಸಿದೆ.
ಬರುವೆ ಗ್ರಾಮದ ಸರ್ವೇ ನಂ 43ರ ಸಂತೆ ಮೈದಾನದಲ್ಲಿ ಶನಿವಾರ ರಾತ್ರಿ ಏಕಾಏಕಿ ಶೆಡ್ ಹಾಗೂ ಬೇಲಿಯನ್ನು ನಿರ್ಮಿಸಿ ಸರ್ಕಾರಿ ಜಾಗವನ್ನು ಅತಿಕ್ರಮಿಸುವ ಹುನ್ನಾರ ನಡೆದಿತ್ತು ಎನ್ನಲಾಗಿದೆ. ಇಂದು ಮುಂಜಾನೆ ಹಳೇ ಸಂತೆ ಮೈದಾನದ ಮೀನು ಮಾರಾಟದ ಮಳಿಗೆ ಹಿಂಭಾಗದಲ್ಲಿ ಶೆಡ್ ಹಾಗೂ ಬೇಲಿ ಉದ್ಬವವಾಗಿತ್ತು ಇದನ್ನು ಕಂಡ ಸಾರ್ವಜನಿಕರಿಗೆ ಅಶ್ವರ್ಯವಾಗಿತ್ತು.
ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ರಿಪ್ಪನ್ಪೇಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಧನಲಕ್ಷ್ಮಿ ಹಾಗೂ ಸದಸ್ಯರು, ಪಿಡಿಒ ಮಧುಸೂದನ್ರೊಂದಿಗೆ ಸ್ಥಳಕ್ಕೆ ತೆರಳಿ ರಾತ್ರೋರಾತ್ರಿ ಅಕ್ರಮವಾಗಿ ನಿರ್ಮಿಸಲಾದ ಬೇಲಿ ಹಾಗೂ ಶೆಡ್ ಅನ್ನು ತೆರವುಗೊಳಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…