ಹೊಸನಗರ : ಶಿಸ್ತು ಹಾಗೂ ಸಮಯ ಪರಿಪಾಲನೆ ನೀಡುವ ಸರಕಾರಿ ನೌಕರರು ತಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸುತ್ತಾರೆ ಎಂದು ಪಿಡಿಒ ಉಮೇಶ್ ಹೇಳಿದರು.
ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯಲ್ಲಿ ಅವರಿಗೆ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಬೀಳ್ಕೊಡುಗೆ ಗೌರವ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಹಲವು ರೀತಿಯ ಒತ್ತಡಗಳು, ಆಮಿಷಗಳು ಬರುತ್ತವೆ. ಆದರೆ ಅದ್ಯಾವುದಕ್ಕೂ ಮಣಿಯದೇ, ನಿಯತ್ತಿನಿಂದ ಕೆಲಸ ಮಾಡಬೇಕು. ಒಮ್ಮೆ ವೃತ್ತಿ ಜೀವನದಲ್ಲಿ ಕಪ್ಪುಚುಕ್ಕೆ ಬಿದ್ದರೆ, ಇಡೀ ಸೇವಾವಧಿಯಲ್ಲಿ ಅದು ಕಾಡುತ್ತದೆ. ಕಾನೂನು ಕ್ರಮ ಎದುರಿಸುವಂತಹ ಹೀನ ಸ್ಥಿತಿಗೆ ನೌಕರರು ಹೋಗಬಾರದು. ಅಧಿಕಾರಿ ಸರಿಯಾಗಿ ಕರ್ತವ್ಯ ನಿರ್ವಹಿಸಿದಲ್ಲಿ ಆತನ ಕೈಕೆಳಗೆ ಕೆಲಸ ಮಾಡುವವರು ತಾನಾಗಿಯೇ ಶಿಸ್ತು ರೂಢಿಸಿಕೊಳ್ಳುತ್ತಾರೆ. ಆಗ ಆಡಳಿತ ವ್ಯವಸ್ಥೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತದೆ ಎಂದರು.
ಗ್ರಾಪಂ ಅಧ್ಯಕ್ಷ ಎಚ್.ಬಿ.ಚಿದಂಬರ್ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿದಲ್ಲಿ ಯಶಸ್ಸು ಲಭಿಸುತ್ತದೆ. ಶಿಸ್ತು ಪರಿಪಾಲಿಸುವ ಅಧಿಕಾರಿ ವಿರುದ್ಧ ದೂರುಗಳು ಬರುವುದು ಸಹಜ. ಆದರೆ ವೃಥಾ ಆರೋಪ ಮಾಡುವ ಬದಲು ಅವರ ಹಿಂದಿನ ಕರ್ತವ್ಯ ಬದ್ಧತೆಯನ್ನು ಅರಿತು ವ್ಯವಹರಿಸಬೇಕು ಎಂದರು.
ಪ್ರಭಾರ ಪಿಡಿಓ ಚೇತನ್, ಉಪಾಧ್ಯಕ್ಷೆ ಜಯಮ್ಮ, ಸದಸ್ಯರಾದ ಕಲಾವತಿ, ದೀಪಿಕಾ, ಸುಮಾ, ಭಾನುಮತಿ, ಸುವರ್ಣ, ಶಂಕರಶೆಟ್ಟಿ, ಗಣೇಶ್, ಪ್ರಕಾಶ್, ನಾರಾಯಣಪ್ಪ, ಇಂದ್ರೇಶ್, ಚಂದ್ರಪ್ಪ, ಸಿಬ್ಬಂದಿ ಕಿರಣ್, ಸುಮಂತ, ಶ್ರೀದೇವಿ, ಬಾಬಣ್ಣ, ಗೋಪಾಲ್, ಜಗದೀಶ್ ಮತ್ತಿತರರು ಇದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…