ಹೊಸನಗರ: ಸಹಕಾರ ಸಂಸ್ಥೆಗಳಲ್ಲಿ ಸಂಸ್ಥೆಯ ಷೇರುದಾರರೆ ನಿಜವಾದ ಮಾಲೀಕರು. ಷೇರುದಾರರು ಇದು ನಮ್ಮ ಸಂಸ್ಥೆ ಎಂದು ವ್ಯವಹರಿಸಿದರೆ ಸಂಸ್ಥೆ ಬಲುಬೇಗ ಉಚ್ರಾಯ ಸ್ಥಿತಿಗೆ ತಲುಪುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಲಗೋಡು ರತ್ನಾಕರ್ ಹೇಳಿದರು.
ತಾಲ್ಲೂಕಿನ ಮುಂಬಾರು ಗ್ರಾಮದ ಪ್ರಾಥಮಿಕ ಕೃಷಿ ಮತ್ತು ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ತುರುಗೋಡು ನಾಗರಾಜ್ ಅವರ ಅಭಿನಂದನಾ ಸಭೆಯಲ್ಲಿ ಮಾತನಾಡಿದರು.
ಒಂದು ಸಂಸ್ಥೆ ಆರ್ಥಿಕವಾಗಿ ಹೆಮ್ಮರವಾಗಿ ಬೆಳೆದು ನಿಂತರೆ ಷೇರುದಾರರು ಕೂಡ ಆರ್ಥಿಕವಾಗಿ ಸದೃಢವಾಗಿ ಬೆಳೆಯಬಹುದಾಗಿದೆ. ಸಹಕಾರ ಸಂಘಗಳು ಆರ್ಥಿಕವಾಗಿ ಸದೃಢವಾಗಿರಬೇಕು. ವ್ಯವಹಾರಿಕವಾಗಿ ಸಂಘ ಸಂಸ್ಥೆಗಳು ಪ್ರಬಲವಾಗಿರಬೇಕು. ಸಂಸ್ಥೆಯನ್ನು ಸೋಲಲು ಬಿಡಬಾರದು. ಒಮ್ಮೆ ಸಂಸ್ಥೆ ಸೋತರೆ ಮತ್ತೆ ಕಟ್ಟಲು ಸಾಧ್ಯವಿಲ್ಲ ಎಂದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ತುರಗೋಡು ನಾಗರಾಜ್ ಅವರನ್ನು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸನ್ಮಾನಿಸಿದರು.
ಡಿಸಿಸಿ ಬ್ಯಾಂಕ್ ಪ್ರತಿನಿಧಿ ಪರಮೇಶ್ವರಪ್ಪ, ಪ್ರಮುಖರಾದ ಬಿ.ಜಿ. ನಾಗರಾಜ್, ಎರಗಿ ಉಮೇಶ್, ಬಿ.ಜಿ.ಚಂದ್ರಮೌಳಿ ಗೌಡ, ಅಬ್ಬಿ ಈಶ್ವರಪ್ಪ, ಲೋಕನಾಯ್ಕ, ತಿಮ್ಮನಾಯ್ಕ, ಶೇಖರಪ್ಪ ಇದ್ದರು.
ಹುಲುಗಾರು ಕೃಷ್ಣಮೂರ್ತಿ ಕಾರ್ಯಕ್ರಮ ನಿರ್ವಹಿಸಿದರು.
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…