ಸೆ‌. 1ರಂದು ಹೊಸನಗರ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

0 42


ಹೊಸನಗರ: ಪಟ್ಟಣದದ ಹಳೇ ಸಾಗರ ರಸ್ತೆಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಬೃಂದಾವನದಲ್ಲಿ ಸೆಪ್ಟೆಂಬರ್ 1 ರಂದು ರಾಘವೇಂದ್ರ ಸ್ವಾಮಿಗಳವರ 352ನೇ ಆರಾಧನಾ ಮಹೋತ್ಸವವನ್ನು ಏರ್ಪಡಿಸಲಾಗಿದೆ ಎಂದು ಬೃಂದಾವನ ಸಮಿತಿಯ ಅಧ್ಯಕ್ಷರಾದ ವಿಜೇಂದ್ರ ಶೇಟ್‌ರವರು ತಿಳಿಸಿದರು.


ಅವರು ರಾಘವೇಂದ್ರ ಸ್ವಾಮಿಗಳ ಬೃಂದಾವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ಶುಕ್ರವಾರ ಬೆಳಿಗ್ಗೆ 6ಗಂಟೆಗೆ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು ಅಷ್ಟೋತ್ತರ, ಪಂಚಾಮೃತಾಭಿಶೇಕ, ಅಲಂಕಾರ ಸೇವೆ, ಹಸ್ತೋದಕ, ಮಧ್ಯಾಹ್ನ 12ಗಂಟೆಗೆ ಮಹಾ ಮಂಗಳಾರತಿ, ಮಧ್ಯಾಹ್ನ 1ಗಂಟೆಗೆ ಸಾಮೂಹಿಕ ಅನ್ನಸಂತರ್ಪಣೆ, ರಾತ್ರಿ 7 ಗಂಟೆಗೆ ಪಲ್ಲಕ್ಕಿ ಉತ್ಸವ ನಂತರ ಮಂಗಳಾರತಿ ರಾತ್ರಿ 8 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆಯಲಿದೆ.


ಶ್ರೀರಾಘವೇಂದ್ರ ಸ್ವಾಮಿಗಳ ಭಕ್ತಾರು ಹೊಸನಗರದ ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಆರಾಧನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಸಂದರ್ಭದಲ್ಲಿ ಕೇಳಿಕೊಂಡರು.


ಸುದ್ಧಿಗೋಷ್ಠಿಯಲ್ಲಿ ರಾಘವೇಂದ್ರ ಸ್ವಾಮಿಗಳವರ ಬೃಂದಾವನ ಸಮಿತಿಯ ಗೌರವಾಧ್ಯಕ್ಷರಾದ ಉಮೇಶ್ ಕಂಚುಗಾರ್, ಉಪಾಧ್ಯಕ್ಷರಾದ ಚಂದ್ರಶೇಖರ, ಕಾರ್ಯದರ್ಶಿ ರಾಧಕೃಷ್ಣ, ಸಹ ಕಾರ್ಯದರ್ಶಿ ರಂಗನಾಥ್, ಖಜಾಂಚಿಗಳಾದ ವಾಸುದೇವ ಪಿ, ನಿರ್ದೇಶಕರುಗಳಾದ ಜಿ. ವಾದಿರಾಜ್ ಭಟ್, ಸದಾಶಿವ ಶ್ರೇಷ್ಠಿ, ಸುದೇಶ್ ಕಾಮತ್, ರವಿ ಶೇಟ್, ಗಣೇಶ ಶೇಟ್, ಹರೀಶ ಕೆ.ಆರ್, ಧನುಂಜಯ ಮಂಡಾಣಿ, ಪ್ರದೀಪ್‌ಕುಮಾರ್, ಹೆಚ್.ಎಂ ನಿತ್ಯಾನಂದ, ನಾಯಕ್, ಶ್ರೀಧರ ಮಂಡಾಣಿ, ಪ್ರಧಾನ ಅರ್ಚಕರಾದ ಟಿ.ಆರ್ ಪ್ರಸನ್ನಭಟ್, ನಾಡ ಹಬ್ಬಗಳ ಸಮಿತಿಯ ಸದಸ್ಯರಾದ ಶ್ರೀಧರ ಉಡುಪ, ಶ್ರೀನಿವಾಸ್ ಕಾಮತ್, ರಾಜಮೂರ್ತಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!