ಹೊಸನಗರ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳವರ ರಾಮ ರಾಜ್ಯದ ಕನಸು ನನಸಾಗಲು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಮಕ್ಕಳು ಪೋಷಕರನ್ನು ಮನವೊಲಿಸುವ ಯತ್ನ ಮಾಡಬೇಕೆಂದು ಲೇಖಕಿ ಸಾಹಿತಿ ಜಿಲ್ಲಾ ಜನಜಾಗೃತಿ ವೇದಿಕೆಯ ಶಶಿಕಲಾ ಮಕ್ಕಳಿಗೆ ಕರೆ ನೀಡಿದರು.
ಅವರು ಇಂದು ಪಟ್ಟಣದ ಮಲೆನಾಡು ಪ್ರೌಢ ಶಾಲೆಯಲ್ಲಿ ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಸಂಯುಕ್ತ ಆಶಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿ, ತಂಬಾಕು ಉತ್ಪನ್ನಗಳಿಂದ ವಿವಿಧ ರೀತಿಯ ಕ್ಯಾನ್ಸರ್ ಕಾಯಿಲೆಗಳು ಮನುಷ್ಯರ ಅವನತಿಗೆ ಕಾರಣವಾಗುತ್ತಿದ್ದ ಸಲುವಾಗಿ ಅವುಗಳ ಉತ್ಪನ್ನಗಳ ಸೇವನೆಯನ್ನು ಹಂತ ಹಂತವಾಗಿ ಕಡಿಮೆ ಮಾಡುವುದರ ಮೂಲಕ ಕ್ಯಾನ್ಸರ್ ಮುಕ್ತ ದೇಶವನ್ನಾಗಿಸಲು ಪಣತೊಡಬೇಕೆಂದು ಮಕ್ಕಳಿಗೆ ಪ್ರತಿಸಾಮಾನ್ಯ ಹತ್ತು ಜನರಲ್ಲಿ ಒಬ್ಬರಿಗೆ ಹೃದ್ರೋಗ ಉಂಟಾದರೆ ಇನ್ನೊಂದೆಡೆ ಪ್ರತಿ 10 ಧೂಮಪಾನಗಳಲ್ಲಿ ನಾಲ್ವರಿಗೆ ಎದೆ ರೋಗ ಉಂಟಾಗುತ್ತಿದೆ ಎಂದು ತಿಳಿಸಿದ ಅವರು, ಎಲ್ಲ ರೀತಿಯ ತಂಬಾಕು ಉತ್ಪನ್ನಗಳು ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬೇಬಿ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆ ಅವರ ಹಿರಿತನದಲ್ಲಿ ಧಾರ್ಮಿಕತೆಗೆ ಆರೋಗ್ಯಕ್ಕೆ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಅವರ ರಾಮ ರಾಜ್ಯದ ಕನಸನ್ನು ನನಸು ಮಾಡುವ ಕಾರ್ಯದಲ್ಲಿ ಎಲ್ಲರೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದರು.
ಈಗಾಗಲೇ ಶ್ರೀ ಹೆಗ್ಗಡೆ ಯವರು ಕೆರೆಗಳ ಪುನರುತ್ಥಾನ ದೇವಸ್ಥಾನ ಜೀರ್ಣೋದ್ಧಾರ ರುದ್ರಭೂಮಿಗಳ ನಿರ್ಮಾಣ ಮೊದಲಾದ ಸತ್ಕಾರ್ಯಗಳಲ್ಲಿ ತೊಡಗಿಕೊಂಡಿರುವುದು ಎಲ್ಲರ ಸೌಭಾಗ್ಯವೆಂದರು.
ಮಲೆನಾಡು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸುಧಾಕರ ಅಧ್ಯಕ್ಷತೆ ವಹಿಸಿದ ಸಮಾರಂಭವನ್ನು ಹಿರಿಯ ಪತ್ರಕರ್ತ ಉಡುಪಿ ಎಸ್ ಸದಾನಂದರವರು ಉದ್ಘಾಟಿಸಿದರು
ಮೇಲ್ವಿಚಾರಕ ಸುಭಾಷ್ ಸ್ವಾಗತಿಸಿದರು ಸೇವಾ ಪ್ರತಿನಿಧಿ ಶೃತಿ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕ ಚಂದ್ರು ಅಭಾರ ಮನ್ನಿಸಿದರು
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…