Categories: Hosanagara News

ಹಸಿರುಮಕ್ಕಿ ಸೇತುವೆ ವೀಕ್ಷಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ; ಇನ್ನೊಂದು ವರ್ಷದೊಳಗೆ ಕಾಮಗಾರಿ ಪೂರ್ಣ

ಹೊಸನಗರ: 2024ರ ಜೂನ್ ಅಂತ್ಯದೊಳಗಾಗಿ ಹಸಿರುಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.


ಅವರು ಸೋಮವಾರ ಹಸಿರುಮಕ್ಕಿ ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಳುಗಡೆಯಿಂದ ನಲುಗಿರುವ ಈ ಭಾಗದಜನತೆಗೆ ಸಂಪರ್ಕ ಸಮಸ್ಯೆ ದಶಕಗಳಿಂದಲೂ ಇದೆ. ಇದನ್ನು ಮನಗಂಡು ಜನರ ಒತ್ತಾಸೆಯಂತೆ ಹಿರಿಯರಾದ ಕಾಗೋಡು ತಿಮ್ಮಪ್ಪ ಅವರು ಸಚಿವರಾಗಿದ್ದ ವೇಳೆ 116 ಕೋಟಿ ರೂ. ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಸಿದ್ದರು.

ಆದರೆಅವರಅವಧಿ ಮುಗಿದ ಬಳಿಕ ಹಿಂದಿನ ಶಾಸಕರುಕಾಮಗಾರಿಯ ಪ್ರಗತಿಗೆ ಆಸಕ್ತಿ ತೋರಲಿಲ್ಲ. ಈವರೆಗೆ ಕೇವಲ 53 ಕೋಟಿರೂ. ವೆಚ್ಚದಕಾಮಗಾರಿಯಷ್ಟೇ ಮುಕ್ತಾಯಗೊಂಡಿದೆ. ಆದರೆ ಈಗ ಒಂದು ವಾರದ ಈಚೆಗೆ ಕಾಮಗಾರಿಗೆ ಮರು ಚಾಲನೆ ದೊರೆತಿದೆ. ನೂತನತಂತ್ರಜ್ಞಾನ ಬಳಸಿ ಪಿಲ್ಲರ್‌ಗಳನ್ನು ನಿರ್ಮಾಣ ಮಾಡಲಾಗುತಿದೆ. ಇನ್ನೊಂದು ವರ್ಷದಲ್ಲಿಕಾಮಗಾರಿ ಮುಕ್ತಾಯಗೊಂಡು ಸೇತುವೆ ಸಂಚಾರಕ್ಕೆ ಮುಕ್ತವಾಗುವ ವಿಶ್ವಸವಿದೆ ಎಂದರು.

ನಮಗೆ ಡಬಲ್ ಎಂಜಿನ್ ಸರಕಾರದ ಅವಶ್ಯತೆಯೇ ಇಲ್ಲ, ನಮ್ಮದು ಸಿಂಗಲ್ ಎಂಜಿನ್ ಸರಕಾರ ಆದರೂ, ಅದು ಗಟ್ಟಿಮುಟ್ಟಾಗಿದೆ. ರಾಜ್ಯದಲ್ಲಿಜನಪರ ಆಡಳಿತ ನೀಡುವ ಮೂಲಕ ಬದ್ಧತೆ ತೋರುತ್ತೇವೆ ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಿದೆ. ಜನಪರ ಕಾಳಜಿಯ ಹಲವು ಕೆಲಸಗಳು ಬಿಜೆಪಿ ಸರಕಾರದ ಅವಧಿಯಲ್ಲಿ ನೆನೆಗುದಿಗೆ ಬಿದ್ದಿವೆ. ಜನರ ಶಾಪದ ಫಲವಾಗಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಈಗ ಶಾಪ ವಿಮೋಚನೆ ಆಗಿದೆ. ನೂತನ ಸರ್ಕಾರದ ಮೇಲೆ ಜನತೆ ಇಟ್ಟಿರುವ ಭರವಸೆಗಳು ಹುಸಿಯಾಗದು ಎಂದರು.


ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಐದು ವರ್ಷ ಏನೂ ಮಾಡದೇ ಸುಮ್ಮನಿದ್ದ ಹಿಂದಿನ ಶಾಸಕರು ಚುನಾವಣೆ ಸಮೀಪಿಸುತ್ತಿದ್ದಂತೆ, ಗುತ್ತಿಗೆದಾರನ ಬಳಿ ಸೇತುವೆ ನಿರ್ಮಾಣ ಮಾಡುವ ಕೌಶಲ್ಯವೇ ಇಲ್ಲ ಎಂದು ಸಬೂಬು ಹೇಳಿದರು.

ಕೇವಲ ಸಿಗಂದೂರು ಸೇತುವೆ ನಿರ್ಮಾಣಕ್ಕೆ ಮಾತ್ರ ಮಹತ್ವ ನೀಡಿದರು. ಅಪ್ಪಿತಪ್ಪಿ ಸಹಾ ಈ ಭಾಗಕ್ಕೆ ಒಮ್ಮೆಯೂ ಭೇಟಿ ನೀಡಲಿಲ್ಲ. ಒಂದು ವೇಳೆ ತಾಂತ್ರಿಕ ಸಮಸ್ಯೆ ಇದ್ದರೆ, ಅದನ್ನು ಸರಿಪಡಿಸಿಕೊಂಡು ಕಾಮಗಾರಿ ಪೂರ್ಣಗೊಳಿಸಬಹುದಾಗಿತ್ತು. ಮುಳುಗಡೆಯಿಂದ ಸಮಸ್ಯೆಯಲ್ಲಿ ನಲುಗಿದ ಈ ಭಾಗದ ಜನರ ಕಷ್ಟ ಅರ್ಥವಾಗಲಿಲ್ಲ. ಈಗ ನೂತನ ತಂತ್ರಜ್ಞಾನದ ಯಂತ್ರಗಳನ್ನು ತರಿಸಲಾಗಿದ್ದು, ಅದೇ ಗುತ್ತಿಗೆದಾರ ಕಾಮಗಾರಿ ಮರುಚಾಲನೆ ಮಾಡಿದ್ದಾನೆ. ಮಾಡಬೇಕೆನ್ನುವ ಮನಸ್ಸಿದ್ದರೇ ಏನನ್ನಾದರೂ ಮಾಡಬಹುದು ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಅವರ ಹೆಸರು ಹೇಳದೆ ಪರೋಕ್ಷವಾಗಿ ಟೀಕಿಸಿದರು.


ಗೋಷ್ಠಿಯಲ್ಲಿ ಪ್ರಮುಖರಾದ ಬಿ.ಜಿ.ನಾಗರಾಜ್, ಎರಗಿ ಉಮೇಶ್, ಎ.ಓ.ರಾಮಚಂದ್ರರಾವ್, ವಿಶ್ವನಾಥ್ ನಾಗೋಡಿ, ಚಂದಯ್ಯ ಜೈನ್, ಸುರೇಶ್, ರವೀಶ್ ನಿಟ್ಟೂರು, ಅಶ್ವಿನಿಕುಮಾರ್, ನಾಸೀರ್, ಕೆಆರ್‌ಡಿಸಿಎಲ್ ಎಇಇ ಲಿಂಗರಾಜ್ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಹಾಜರಿದ್ದರು.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

6 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

7 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

7 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

9 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

11 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

13 hours ago