Categories: Hosanagara News

ಹೆಬ್ಬಿಗೆ ಗ್ರಾಮಸ್ಥರಿಂದ ಹೊಸನಗರ ತಾಲೂಕು ಕಚೇರಿ ಎದುರು ಹಕ್ಕೊತ್ತಾಯ ಧರಣಿ ; ಯಾಕೆ ?

ಹೊಸನಗರ : ಬಗರ್ ಹುಕುಂ ಪಹಣಿ ಹಾಗೂ 94ಸಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಇಂದು ನಿಟ್ಟೂರು ಗ್ರಾಪಂ ವ್ಯಾಪ್ತಿಯ ಹೆಬ್ಬಿಗೆ ಗ್ರಾಮಸ್ಥರು ಹೊಸನಗರ ತಾಲೂಕು ಕಚೇರಿ ಮುಂದೆ ಧರಣಿ ನಡೆಸಿ ಹಕ್ಕೊತ್ತಾಯ ಮಾಡಿದರು.

ಹಕ್ಕುಪತ್ರ ನೀಡುವ ತನಕ ಇಲ್ಲೇ ವಾಸ್ತವ್ಯ ಮಾಡುವ ಯೋಚನೆ ಇದೆ. ಹೆಬ್ಬಿಗೆ ಗ್ರಾಮದ ಕಂದಾಯ ಭೂಮಿಯನ್ನು ನಿವೃತ್ತ ಮಿಲಿಟರಿಯವರಿಗೆ ಮಂಜೂರು ಮಾಡಲು ಹೊರಟ ಕಂದಾಯ ಇಲಾಖೆ ಮೇಲೆ ಧಿಕ್ಕಾರ ಕೂಗಿ, ಮಿಲಿಟರಿ ಯೋಧರ ಬಗ್ಗೆ ನಮಗೆ ಅಪಾರ ಗೌರವ ಇದ್ದು, ಅವರಿಗೆ ಭೂಮಿ ಕೊಡುವ ಬಗ್ಗೆ ನಮ್ಮ ಸದಾಭಿಪ್ರಾಯವಿದ್ದರೂ ಸಹ ಶರಾವತಿ ಸಂತ್ರಸ್ತ ನಮ್ಮ ಗ್ರಾಮದ ಭೂಮಿ ಕೊಡಲು ವಿರೋಧವಿದೆ. ಈಗಾಗಲೇ ಶರಾವತಿ ಯೋಜನೆಯಲ್ಲಿ ನಮ್ಮ ಫಲವತ್ತಾದ ಭೂಮಿ ಕಳೆದುಕೊಂಡಿದ್ದು ಮತ್ತೆ ನಮ್ಮ ಭೂಮಿ ಬೇರೆಯವರಿಗೆ ಕೊಡದಂತೆ ಈ ಸಂದರ್ಭದಲ್ಲಿ ಧರಣಿ ನಿರತ ಪ್ರತಿಭಟನಾಕಾರರು ಮನವಿ ಮಾಡಿದರು.

ತಹಶೀಲ್ದಾರ್ ವಿ.ಎಸ್ ರಾಜೀವ್ ರವರು ಇದೆ ಫೆ.15 ರೊಳಗೆ ಬಗರ್ ಹುಕುಂ ಪಹಣಿ ಮತ್ತು 94ಸಿ ಹಕ್ಕುಪತ್ರ ನೀಡುವ ಭರವಸೆ ನೀಡಿದ ಮೇಲೆ ತಾತ್ಕಾಲಿಕ ಪ್ರತಿಭಟನೆ ವಾಪಾಸ್ ಪಡೆದರು. ಫೆ. 15 ರೊಳಗೆ ನಮ್ಮ ಹಕ್ಕು ನಮಗೆ ನೀಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ಪ್ರತಿಭಟನಾಕಾರರು ನೀಡಿದರು. ನಂತರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲು ಹೆಬ್ಬಿಗೆ ಗ್ರಾಮದ ನಿಯೋಗ ಶಿವಮೊಗ್ಗಕ್ಕೆ ಹೊರಟಿತು.

ಹೆಬ್ಬಿಗೆ ನಾಗರಿಕ ಸಮಿತಿ ಅಧ್ಯಕ್ಷ ಕೆ.ಪಿ ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಪುರುಷೋತ್ತಮ ಶಾನುಬೋಗ್ ಸೇರಿದಂದೆ 20 ಜನರ ನಿಯೋಗ ಈ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡಿದ್ದರು.

Malnad Times

Recent Posts

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

50 mins ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

3 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

5 hours ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

8 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

12 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

1 day ago