Categories: Hosanagara News

ಹೆಬ್ಬಿಗೆ ನ್ಯಾಯಬೆಲೆ ಅಂಗಡಿಗೆ ವಾರ್ಷಿಕೋತ್ಸವ ಸಂಭ್ರಮ


ಹೊಸನಗರ : ತಾಲೂಕಿನ ನಿಟ್ಟೂರು ಗ್ರಾ‌.ಪಂ. ವ್ಯಾಪ್ತಿಯ ಹೆಬ್ಬಿಗೆ ನ್ಯಾಯಬೆಲೆ ಅಂಗಡಿಗೆ ಒಂದು ವರ್ಷ ತುಂಬಿದ್ದು, ಜವಾಬ್ದಾರಿಯಿಂದ ವ್ಯವಸ್ಥಿತವಾಗಿ ಪಡಿತರ ವಿತರಣಾ ವ್ಯವಸ್ಥೆ ನಡೆಸುತ್ತಿರುವ ಸ್ಪಂದನಾ ಸ್ತ್ರಿ ಶಕ್ಕಿ ಸಂಘ, ಗಂಟಿಗೇಮನೆಪುರ ಇದರ ಅಧ್ಯಕ್ಷರು ಮತ್ತು ಸದಸ್ಯರನ್ನು ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ನ್ಯಾಯಬೆಲೆ ಅಂಗಡಿಯಲ್ಲಿ ಶಾಲು ಹೊದಿಸಿ,ಅಭಿನಂಧನಾ ಪತ್ರ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಹೆಬ್ಬಿಗೆ ಗ್ರಾಮವು ನಿಟ್ಟೂರು ಗ್ರಾ.ಪಂ. ಕೇಂದ್ರದಿAಹದ 15 ಕಿ.ಮೀ. ದೂರವಿದ್ದು, ಉಚಿತ ಪಡಿತರ ಪಡೆದುಕೊಳ್ಳಲು ದೂರದಿಂದ ನಡೆದುಕೊಂಡು ಬಂದು, 200, 300 ರೂ. ಆಟೋ ಬಾಡಿಗೆ ತೆತ್ತು, ಇಡೀ ದಿನ ಕಾದು ಪಡಿತರ ಒಯ್ಯಬೇಕಾಗಿತ್ತು, ಇದರಿಂದ ಹಣ ಮತ್ತು ಸಮಯ ಕೂಡ ವ್ಯರ್ಥವಾಗಿ ಪಡಿತರದಾರರಿಗೆ ಭಾರಿ ತೊಂದರೆ ಉಂಟಾಗಿತ್ತು. ಇಲ್ಲಿನ ಗ್ರಾ.ಪಂ. ಸದಸ್ಯ ಮತ್ತು ಇತರ ಸ್ಥಳೀಯ ಮುಖಂಡರ ನಿರಂತರ ಪ್ರಯತ್ನದಿಂದ ಹೆಬ್ಬಿಗೆ ಗ್ರಾಮಕ್ಕೆ ನೂತನ ನ್ಯಾಯಬೆಲೆ ಅಂಗಡಿ ಕಳೆದ ವರ್ಷ ಮಂಜೂರಾಗಿ ಗ್ರಾಮದ ಜನರ ಬವಣೆ ದೂರವಾಗಿತ್ತು. ಕೇವಲ 86 ರೇಷನ್ ಕಾರ್ಡ್‌ಗೆ ಒಂದು ಹೊಸ ನ್ಯಾಯಬೆಲೆ ಅಂಗಡಿ ಹೊಂದಿದ ರಾಜ್ಯದ ಏಕೈಕ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆಗಿನ ಶಾಸಕರಾಗಿದ್ದ ಹರತಾಳು ಹಾಲಪ್ಪನವರೇ ಬಂದು ನ್ಯಾಯಬೆಲೆ ಅಂಗಡಿ ಉದ್ಘಾಟನೆ ನಡೆಸಿದ್ದರು. ಗ್ರಾಮದ ಸ್ತ್ರೀ ಶಕ್ತಿ ಸಂಘಕ್ಕೆ ಪಡಿತರ ವಿತರಣೆ ಜವಾಬ್ದಾರಿ ನೀಡಲಾಗಿತ್ತು.


ಗ್ರಾಪಂ ಸದಸ್ಯ ಪುರುಷೋತ್ತಮ ಶಾನುಬೋಗ್ ಮತ್ತು ರಘುನಾಥ ಮರಿಗದ್ದೆ, ನಾಗಭೂಷಣ್ ಹೆಬ್ಬಿಗೆ ಹಾಗೂ ಪರಮೇಶ್ವರ ಗಂಟಿಗೇಮನೆ ಮತ್ತು ವೆಂಕಟ ಮೇಣಿ ಗಾಣಿಗಾಪುರ ಹಾಗೂ ಇತರರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

21 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago