ಹೊಂಬುಜದಲ್ಲಿ ಹೊಸವರ್ಷದ ಪ್ರಯುಕ್ತ ವಿಶೇಷ ಪೂಜೆ | ವಾತ್ಸಲ್ಯಮಯಿ ಸೌಹಾರ್ದ ವರ್ಷವಾಗಲಿ ನೂತನ ವರ್ಷ ; ಶ್ರೀಗಳು

ರಿಪ್ಪನ್‌ಪೇಟೆ : ಶಾಂತಿ-ನೆಮ್ಮದಿಯ ಸಂಘರ್ಷರಹಿತ ನೂತನ ವರ್ಷ 2024 ಎಂಬ ಶುಭ ಭಾವನೆ ಮೂಡಬೇಕು. ಜನವರಿ 1ರಂದು ಶುಭ ಸಂಕಲ್ಪ ಮಾಡುವ ಮೂಲಕ ನವವರ್ಷಾಚರಣೆ ನವೋಲ್ಲಾಸ ತರಲಿ. ಸರ್ವರೂ ತಮ್ಮ ತಮ್ಮ ಪರಿಸರದ, ನಾಡಿನ, ರಾಷ್ಟ್ರದ ಅಭ್ಯುದಯದ ಯೋಜನೆಗಳಿಗೆ ಸಹಕಾರ ನೀಡಬೇಕು. ಆಂತರಿಕವಾಗಿ ಭಾರತೀಯರಾದ ನಾವು ಸೌಹಾರ್ದಯುತ ದಿನಚರಿಗೆ ಬದ್ಧರಾಗಬೇಕು. ನೂತನ ವರ್ಷ 2024ರಲ್ಲಿ ಸರ್ವರೂ ವೈಯುಕ್ತಿಕರಾಗಿ ಯಶಸ್ಸಿನತ್ತ ಮುನ್ನಡೆಯುವ ಸದ್ಭಾವನೆಯ ದಾರಿಯನ್ನು ಅನುಸರಿಸಬೇಕು ಎಂದು ಹೊಂಬುಜ ಜೈನ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಚನ ನೀಡಿದರು.

ವಾಸ್ತವ ವಿದ್ಯಾಮಾನದಲ್ಲಿ ಉತ್ತಮ ವಿದ್ಯಾಭ್ಯಾಸಕ್ಕಾಗಿ ಶ್ರೇಷ್ಠ ಗುಣಮಟ್ಟದ ಶಿಕ್ಷಣಾಲಯಗಳಲ್ಲಿ ವಿದ್ಯಾರ್ಜನೆ ಮಾಡಿ ವಿಶ್ವದಲ್ಲಿ ರಾಷ್ಟ್ರವನ್ನು ಅಗ್ರಪಂಕ್ತಿಯಲ್ಲಿ ಮನ್ನಣೆ ದೊರೆಯಲಿ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಕೃಷಿ-ಕ್ಷೇತ್ರಗಳಲ್ಲಿ ಯಶಸ್ಸು ಲಭಿಸುವಂತಾಗಲೆಂದು ಅಪೇಕ್ಷಿಸುತ್ತಾ ಅಹಿಂಸಾತ್ಮಕ ವಾತ್ಸಲ್ಯಮಯಿ ಜೀವನ ಧ್ಯೇಯವೇ ಭಾರತೀಯ ಮಾನವ ಧರ್ಮ ಎಂದು ಹರಸಿದ್ದಾರೆ.


ಸಾವಿರಾರು ಭಕ್ತರು ತಮಿಳುನಾಡು, ಮಹಾರಾಷ್ಟ್ರ, ಗುಜರಾತ, ದಿಲ್ಲಿ, ಮಧ್ಯಪ್ರದೇಶ, ಉತ್ತರಪ್ರದೇಶ, ಹೊರರಾಜ್ಯಗಳಿಂದ ಆಗಮಿಸಿದ್ದರು. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago