ಹೊಸನಗರ : ಕಾಲೇಜು ಉಪನ್ಯಾಸಕರೊಬ್ಬರ ಮನೆಯ ಕಾಂಪೌಂಡ್ ಆವರಣಕ್ಕೆ ಸಮಾರು 15 ಜನರ ಗುಂಪು ಅತಿಕ್ರಮಣ ಪ್ರವೇಶ ಮಾಡಿ, ಬೆದರಿಕೆ ಹಾಕಿದ ಘಟನೆ ಪಟ್ಟಣದ ಕ್ರಿಸ್ಟಿಯನ್ ಕಾಲೋನಿಯಲ್ಲಿ ನಡೆದಿದೆ.
ಇಲ್ಲಿನ ಕೊಡಚಾದ್ರಿ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಜನ್ಕುಮಾರ್ ಎಂಬವವರಿದ್ದ ಬಾಡಿಗೆ ಮನೆಯ ಆವರಣಕ್ಕೆ ಶನಿವಾರ ತಡರಾತ್ರಿ ಪ್ರವೇಶಿಸಿ, ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾರೆ. ಮನೆ ಒಳಗಡೆ ಅನ್ಯಕೋಮಿನ ಮಹಿಳೆಯನ್ನು ಇರಿಸಿಕೊಂಡಿದ್ದೀಯ, ನಾವು ತಪಾಸಣೆ ಮಾಡಬೇಕು. ಬಾಗಿಲು ತೆಗೆಯದಿದ್ದರೆ, ಬಾಗಿಲು ಒಡೆದು ಒಳ ಪ್ರವೇಶಿಸುವುದಾಗಿ ತಿಳಿಸಿ ಜೀವ ಬೆದರಿಕೆ ಹಾಕಿದ್ದಾರೆ.
ವಿಷಯ ತಿಳಿದು ಪೊಲೀಸರು ಹಾಗೂ ಮನೆಯ ಮಾಲಿಕರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಯಾವುದೇ ಅನೈತಿಕ ಚಟುವಟಿಕೆ ಕಂಡು ಬಾರದ ಹಿನ್ನೆಲೆಯಲ್ಲಿ ಈ ರೀತಿಯ ನಡವಳಿಕೆ ಸರಿಯಲ್ಲ ಎಂದು ಯುವಕರ ಗುಂಪಿಗೆ ಬುದ್ದಿ ಹೇಳಿದ್ದಾರೆ.
ಅಂಜನ್ಕುಮಾರ್ ನೀಡಿರುವ ದೂರಿನ ಮೇರೆಗೆ ಪಟ್ಟಣದ ನಿವಾಸಿ ಮಂಜುನಾಥ್ ಶೆಟ್ಟಿ ಹಾಗೂ ಇತರರ ವಿರುದ್ಧ ಐಪಿಸಿ 1860 (143,447,504,506,149) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…