ಹೊಸನಗರ: ಬೆಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಕರ್ನಾಟಕ ಮಹಿಳಾ ರತ್ನ ಪ್ರಶಸ್ತಿಯನ್ನು ಹೊಸನಗರದ ರಾಧಿಕಾ ರತ್ನಾಕರ್ ಶ್ರೇಷ್ಠಿಯವರು ಪಡೆದುಕೊಂಡಿದ್ದಾರೆ.
ಇವರು ಸಮಾಜ ಸೇವೆಯಲ್ಲಿ ಗಣನೀಯವಾಗಿ ಪಾಲ್ಗೊಳ್ಳುವುದರ ಜೊತೆಗೆ ಕಲೆ ಮತ್ತು ಸಾಂಸ್ಕೃತೀಕ ಕಾರ್ಯಕ್ರಮಗಳನ್ನು ಆಯೋಜಿಸುವುದರಲ್ಲಿ ಆಸಕ್ತಿ ಹೊಂದಿರುವುದರ ಜೊತೆಗೆ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಇವರ ಗಣನೀಯ ಸೇವೆಯನ್ನು ಗುರುತಿಸಿ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್, ಕೆ.ಎಂ.ಪಿ.ಕೆ ಚಾರೀಟೆಬಲ್ ಟ್ರಸ್ಟ್ನವರು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಆವರಣದಲ್ಲಿ ಸಮಾರಂಭವನ್ನು ನಡೆಸಿ ಸುಮಾರು ಸಾವಿರಕ್ಕೂ ಹೆಚ್ಚು ಅರ್ಜಿಗಳಲ್ಲಿ ಹೊಸನಗರದ ರಾಧಿಕಾ ರತ್ನಾಕರ್ ಶ್ರೇಷ್ಠಿಯವರನ್ನು ಗುರುತಿಸಿ ಅದ್ದೂರಿಯಾಗಿ ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸನ್ಮಾನ ಸಮಾರಂಭದಲ್ಲಿ ಬಿಬಿಎಂಪಿ ಮುಖ್ಯಸ್ಥರಾದ ಶಂಕರ್ ಚಲನಚಿತ್ರ ನಟಿಯರಾದ ಭವ್ಯ ಪದ್ಮಾವತಿ, ಕಾರ್ಯಕ್ರಮ ಸಂಘಟಕರಾದ ರೇಖಾ ಶ್ರೀನಿವಾಸ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಶಿವಮೊಗ್ಗ : ಮಲೆನಾಡೆಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕರ್ನಾಟಕ ಮಾತ್ರವಲ್ಲ ಅದರಿಂದಾಚೆಗೂ ಮಲೆನಾಡನ್ನು ಪ್ರೀತಿಸುವವರು, ಇರಲು ಇಚ್ಛಿಸುವವರು ಇದ್ದಾರೆ.…
ರಿಪ್ಪನ್ಪೇಟೆ: ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷ್ಯ ವಹಿಸಿರುವ…
ಶಿವಮೊಗ್ಗ : ಏ. 29 ಸೋಮವಾರ ನಡೆದ ಶಿವಮೊಗ್ಗ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿವಮೊಗ್ಗ ಮಾರುಕಟ್ಟೆ :ರಾಶಿ…
ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಕೃಷಿ ಹೊಂಡದಲ್ಲಿ ಮುಳುಗಿ ಸಾವು ! ಮೂಡಿಗೆರೆ : ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ…
ಚಿಕ್ಕಮಗಳೂರು: ಮಾಜಿ ಸಚಿವ ಡಾ.ಸಿ.ಟಿ.ರವಿ ವಿರುದ್ಧ ಸುಳ್ಳು ಮತ್ತು ಅಸಂಬದ್ಧವಾಗಿ ಎಫ್ಐಆರ್ ದಾಖಲಿಸುವ ಮೂಲಕ ವಿರೋಧ ಪಕ್ಷಗಳ ಮಾತನಾಡು ಹಕ್ಕು…
ಚಿಕ್ಕಮಗಳೂರು: ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ (77) ಅವರ ನಿಧನಕ್ಕೆ ಮಾಜಿ ಸಚಿವ ಡಾ.ಸಿ.ಟಿ.ರವಿ ಸೇರಿದಂತೆ ಜಿಲ್ಲಾ ಬಿಜೆಪಿ ಕಂಬನಿ…