Categories: Hosanagara News

ಹೊಸನಗರವನ್ನು ಮಾದರಿ ತಾಲೂಕನ್ನಾಗಿ ಮಾಡುವುದೇ ನನ್ನ ಮುಖ್ಯ ಗುರಿ ; ಶಾಸಕ ಬೇಳೂರು ಗೋಪಾಲಕೃಷ್ಣ


ಹೊಸನಗರ: ಇನ್ನೂ ಐದು ವರ್ಷದಲ್ಲಿ ಹೊಸನಗರ ತಾಲ್ಲೂಕನ್ನು ಮಾದರಿ ತಾಲ್ಲೂಕನ್ನಾಗಿ ಮಾಡುವುದೇ ನನ್ನ ಮುಖ್ಯ ಗುರಿಯಾಗಿದ್ದು ಈ ತಾಲ್ಲೂಕಿನ ಜನರು ಯಾವುದೇ ಮೂಲಭೂತ ಸಮಸ್ಯೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವ ಗುರಿ ನನ್ನ ಜವಾಬ್ದಾರಿಯಾಗಿದೆ ಎಂದು ಹೊಸನಗರ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಹೇಳಿದರು.

ಪಟ್ಟಣದ ಆರ್ಯ ಈಡಿಗರ ಸಭಾಭವನದ ಆವರಣದಲ್ಲಿ ತಾಲ್ಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದ್ದು ಅಭಿನಂದನೆ ಸ್ವೀಕರಿಸಿ ಮಾತನಾಡಿ, ಹೊಸನಗರದಲ್ಲಿ ಕುಂಠಿತವಾಗಿರುವ ಕಾಮಗಾರಿಗಳನ್ನು ತಕ್ಷಣದಿಂದಲೇ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದ್ದು 94ಸಿ, 94ಸಿಸಿ ಬಗರ್‌ಹುಕುಂ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ರೈತರ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆ ಹರಿಸಲಾಗುವುದು ಎಂದರು.


ನಾನು ದ್ವೇಷ ರಾಜಕೀಯ ಮಾಡುವವನಲ್ಲ:

ದ್ವೇಷ ರಾಜಕೀಯ ಮಾಡುವವನು ನಾನಲ್ಲ. ಎಲ್ಲ ವರ್ಗದ ಜನರನ್ನು ಒಂದು ಮಾಡಿಕೊಂಡು ಜನ ಸೇವೆ ಮಾಡುವ ಗುಣವನ್ನು ನಾನು ಹೊಂದಿದ್ದು ಎಲ್ಲ ಪಕ್ಷದ ಕಾರ್ಯಕರ್ತರನ್ನು ಒಂದುಗೂಡಿಸಿಕೊಂಡು ಅಣ್ಣ-ತಮ್ಮಂದಿರಂತೆ ಒಟ್ಟಾಗಿ ಜನರ ಸೇವೆ ಮಾಡೋಣ. ನಾನು ಮತ್ತು ನಮ್ಮ ಕಾರ್ಯಕರ್ತರು ದ್ವೇಷ ರಾಜಕೀಯ ಮಾಡುವುದಿಲ್ಲ ನಮ್ಮ ವಿರೋಧಿಗಳು ದ್ವೇಷ ಸಾಧನೆ ಮಾಡದೇ ನಮ್ಮೊಂದಿಗೆ ಕೈ ಜೋಡಿಸಿದರೆ ಅಭಿವೃದ್ಧಿ ಕೆಲಸ ಮಾಡುವುದು ಸುಲಭವಾಗುತ್ತದೆ. ನಾನು ಹೊಸನಗರ-ಸಾಗರ ಕ್ಷೇತ್ರದ ಜನರ ಸೇವಕನಾಗಿ ನಾನು ಜನರ ಸೇವೆ ಮಾಡಲು ಸಿದ್ಧರಿದ್ದು ನನ್ನ ಜೊತೆ ಕೆಲಸ ಮಾಡಿಸಿಕೊಳ್ಳಲು ಯಾವುದೇ ಮಧ್ಯವರ್ತಿಗಳ ಅವಶ್ಯಕತೆಯಿಲ್ಲ. ನೆರವಾಗಿ ನನ್ನ ಜೊತೆಗೆ ಮಾತನಾಡಿಕೊಂಡು ನಿಮ್ಮ ಸಮಸ್ಯೆಯನ್ನು ಹೇಳಿಕೊಳ್ಳಿ ನನ್ನ ಕೈಯಲ್ಲದ ಸಹಾಯ ಮಾಡುವುದಾದರೆ ಮಾಡಿಕೊಡಕೊಡುತ್ತೇನೆ ಎಂದರು.



ಜನ ಸೇವೆ ಮಾಡಲೆಂದೆ ಬೇಳೂರುರನ್ನು ಜನ ಗೆಲ್ಲಿಸಿದ್ದಾರೆ: ಕಾಗೋಡು ತಿಮ್ಮಪ್ಪ


ಅಭಿನಂದನಾ ಸಮಾರಂಭಕ್ಕೆ ಆಗಮಿಸಿದ ಮಾಜಿ ಕಂದಾಯ ಸಚಿವ ಹಾಗೂ ಬೇಳೂರು ಗೋಪಾಲಕೃಷ್ಣರವರ ಮಾವ ಕಾಗೋಡು ತಿಮ್ಮಪ್ಪನವರು ಮಾತನಾಡಿ, ಆ ದೇವರು ಜನರ ಕಷ್ಟಗಳನ್ನು ಅರಿತು ಬೇಳೂರು ಗೋಪಾಲಕೃಷ್ಣರವರನ್ನು ಜನರ ಸೇವೆ ಮಾಡಲು ಕಳುಹಿಸಿದ್ದಾರೆ ಜನರ ಸುಖ ದುಃಖಗಳನ್ನು ಇವರೊಂದಿಗೆ ಹಂಚಿಕೊಂಡು ಅಭಿವೃದ್ಧಿ ಕೆಲಸ ಮಾಡಲು ಸಹಕರಿಸಿರಿ ಎಂದರು.


ಅಭಿವೃದ್ಧಿಯಲ್ಲಿ ಹೊಸನಗರ ಕ್ಷೇತ್ರ ಮೂಲೆಗುಂಪು: ಹಾಲಗದ್ದೆ ಉಮೇಶ್
ಹೊಸನಗರ ತಾಲ್ಲೂಕನ್ನು ಸಾಗರಕ್ಕೆ ಅರ್ಧ ತೀರ್ಥಹಳ್ಳಿಗೆ ಅರ್ಧ ಸೇರಿಸಿಕೊಂಡು ನಮ್ಮ ಹೊಸನಗರ ಕ್ಷೇತ್ರವನ್ನು ಇಬ್ಬಾಗ ಮಾಡಲಾಗಿದ್ದು ಅಲ್ಲಿಂದ ಇಲ್ಲಿಯವರೆಗೆ ಹೊಸನಗರ ಕ್ಷೇತ್ರವನ್ನು ಮಲತಾಯಿ ಧೋರಣೆಯಿಂದ ನಮ್ಮ ಕ್ಷೇತ್ರ ಹಾಳಾಗಿ ಹೋಗಿದೆ ಸರ್ಕಾರದ ಯಾವುದೇ ಅನುದಾನ ತಂದರೂ ನಮ್ಮ ಕ್ಷೇತ್ರಕ್ಕೆ ಶೂನ್ಯವಾಗಿದ್ದು ಅಭಿವೃದ್ಧಿಯಾಗಿದ್ದು ತಾವು ನೂತನ ಶಾಸಕರಾಗಿ ಆಯ್ಕೆಯಾಗಿದ್ದೀರಿ ನಮ್ಮ ಕ್ಷೇತ್ರಕ್ಕೆ ಮಲತಾಯಿ ಧೋರಣೆ ತೊರಿಸದೇ ಸಮನವಾಗಿ ಅಭಿವೃದ್ಧಿ ಪಡಿಸಿ ಎಂದು ಪಟ್ಟಣ ಪಂಚಾಯತಿ ಸದಸ್ಯರಾದ ಹಾಲಗದ್ದೆ ಉಮೇಶ್‌ರವರು ಸಭೆಯಲ್ಲಿ ಹೇಳಿದರು.

ಈ ಅಭಿನಂದನ ಸಮಾರಂಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್, ತಾಲ್ಲೂಕ್ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಮೌಳಿ ಗೌಡ, ಎರಗಿ ಉಮೇಶ್, ಹರಿದ್ರಾವತಿ ಅಶೋಕ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಟೌನ್ ಘಟಕದ ಅಧ್ಯಕ್ಷ ಗುರುರಾಜ್, ಹಿರಿಯರಾದ ಶ್ರೀನಿವಾಸ್ ಕಾಮತ್, ಅಶ್ವಿನಿಕುಮಾರ್, ಸಿಂಥಿಯಾ ಸೆರಾವೋ, ಮಹಾಬಲರಾವ್, ಜಯಶೀಲಪ್ಪ ಗೌಡ, ಎಂ.ಪಿ ಸುರೇಶ್, ಬೃಂದಾವನ ಪ್ರವೀಣ್, ಜಯನಗರ ಗುರು, ಸಣ್ಣಕ್ಕಿ ಮಂಜು, ಜಯನಗರ ಗೋಪಿ, ಮಂಜುನಾಥ್ ಶ್ರೇಷ್ಠಿ, ಚೇತನ್ ದಾಸ್   ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

11 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

14 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

15 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

17 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

17 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago