Categories: Hosanagara News

ಹೊಸನಗರ | ಕರೆಂಟ್ ಕಣ್ಣಾಮುಚ್ಚಾಲೆಯೇ ಡಬಲ್ ಎಂಜಿನ್ ಸರ್ಕಾರದ ಸಾಧನೆ ; ಬೇಳೂರು ಗೋಪಾಲಕೃಷ್ಣ


ಹೊಸನಗರ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಾ ಎಂಟು ವರ್ಷ ಕಳೆದಿದೆ ರಾಜ್ಯದಲ್ಲಿ ಇನ್ನೇರಡು ತಿಂಗಳು ದಾಟಿದರೆ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತ 5 ವರ್ಷ ಕಳೆಯುತ್ತದೆ ಆದರೆ ನಮ್ಮ ಶಾಸಕರು ನಮ್ಮದು ಡಬಲ್ ಎಂಜಿನ್ ಸರ್ಕಾರ ನಮ್ಮ ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಹೋಗುತ್ತಿದೆ ಕರ್ನಾಟಕದ ಬಗ್ಗೆ ಹೇಳುತ್ತಿದ್ದರೆಯೇ ಹೊರತು ಹೊಸನಗರ ತಾಲ್ಲೂಕು ಅಭಿವೃದ್ಧಿ ಕಾಣಲಿಲ್ಲ ಎಂದು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ವ್ಯಂಗ್ಯವಾಡಿದರು.


ಅವರು ಸುದ್ಧಿಗಾರರೊಂದಿಗೆ ಮಾತನಾಡಿ, ಹೊಸನಗರ ಪಟ್ಟಣ ಪಂಚಾಯತಿಗೆ 5ಕೋಟಿ ರೂ. ನೀಡಲಾಗಿದೆ ಎಂದು ಅಭಿವೃದ್ಧಿ ಕೆಲಸ ನೋಡಿದರೇ ಸುಮಾರು ನೂರು ವರ್ಷದ ಗಟ್ಟಿ ಮುಟ್ಟಾಗಿರುವ ಕಲ್ಲು ಚಪ್ಪಡಿಗಳನ್ನು ಕಿತ್ತು ಮೂರು ವರ್ಷವೂ ಬಾರದಂತೆ ಇರುವ ಸಿಮೆಂಟ್ ಚರಂಡಿ ಮಾಡಿಸುತ್ತಿರುವುದು ದೊಡ್ಡ ಸಾಧನೆ ಎಂದು ಬಿಂಬಿಸಿಕೊಳ್ಳುವುದೇ ಒಂದು ಸಾಧನೆಯಾಗಿದೆ. ಈಗ ಬೇಸಿಗೆ ಕಾಲ ನೀರಿನ ಸಮಸ್ಯೆ ಹಳ್ಳಿ-ಹಳ್ಳಿಗಳಲ್ಲಿ ಕಾಣುತ್ತೇವೆ ಎಲ್ಲದಕ್ಕಿಂತಲೂ ಮುಖ್ಯವಾಗಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ ಈಗ ಪಿಯುಸಿ ಪರೀಕ್ಷೆ ನಡೆಯುತ್ತಿದೆ ಎಸ್.ಎಸ್‌ಎಲ್.ಸಿ ಪರೀಕ್ಷೆಗೆ ಕೇವಲ 15ದಿನಗಳು ಉಳಿದಿದೆ ಆದರೆ ಹೊಸನಗರ ತಾಲ್ಲೂಕಿನಲ್ಲಿ ಹಗಲು ರಾತ್ರಿ ಎನ್ನದೇ ವಿದ್ಯುತ್ ಕಣ್ಣ ಮಚ್ಚಾಲೆ ನಡೆಸುತ್ತಿದೆ 10 ವರ್ಷಗಳಿಂದ ಹೊಸನಗರ ತಾಲ್ಲೂಕಿಗೆ ವಿದ್ಯುತ್ ಕಣ್ಣಾ ಮುಚ್ಚಾಲೆ ನಿಲ್ಲಿಸಲು ಇಲ್ಲಿನ ಶಾಸಕರಿಗೆ ಸಾಧ್ಯವಾಗಿಲ್ಲ ಎಂದರು.

ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತಾ ಎಂದು ಭಾಷಣದಲ್ಲಿ ಹೇಳಿದರೆ ಆಗುವುದಿಲ್ಲ ಅವರ ಕ್ಷೇತ್ರವಾದ ಹೊಸನಗರ ಯಾವ ಮಟ್ಟದಲ್ಲಿದೆ ಎಂದು ತಿಳಿದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತಾ ನಾವು ಪ್ರತಿಯೊಬ್ಬರ ಮನೆಗೂ ನೀರು ಕೊಡುತ್ತೇವೆ ರಸ್ತೆ ಮಾಡಿಸಿಕೊಟ್ಟಿದ್ದೇವೆ ಎಂದು ಹೇಳಿದರೇ ಸಾಲದು ಇವರು ರಸ್ತೆ ಮಾಡಿಸಿಕೊಟ್ಟಿದ್ದರೇ ವಸವೆ ಗ್ರಾಮದ ಗ್ರಾಮಸ್ಥರು ಆದುವಳ್ಳಿ ಗ್ರಾಮದ ಗ್ರಾಮಸ್ಥರು ತೊಗರೆ ಗ್ರಾಮದ ಗ್ರಾಮಸ್ಥರು ಹಾಗೂ ಹೊಸನಗರ ಪಟ್ಟಣಕ್ಕೆ ಸಮೀಪವಿರುವ ಗಂಗನಕೊಪ್ಪ ಗ್ರಾಮದ ಗ್ರಾಮಸ್ಥರು ರಸ್ತೆ ಮಾಡಿಕೊಡದಿದ್ದರೇ ವಿಧಾನಸಭೆಯ ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದು ಸರ್ಕಾರಕ್ಕೆ ಏಕೆ ಮನವಿ ಪತ್ರ ನೀಡುತ್ತಿದ್ದರು ಬಿಜೆಪಿ ಕಾರ್ಯಕರ್ತರ ಮನೆ ಬಾಗಿಲಿಗೆ ಒಂದೊಂದು ಮನೆಗಳಿಗೆ ಡಾಂಬರ್ ರಸ್ತೆ ಸಿಮೆಂಟ್ ರಸ್ತೆ ಮಾಡಿಕೊಂಡು ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಎಂದು ಭಾಷಣ ಮಾಡಿದರೆ ಸಾಲದು ಗ್ರಾಮ –ಗ್ರಾಮಗಳಿಗೆ ಹೋಗಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರೆ ಮಾತ್ರ ಅಭಿವೃದ್ಧಿ ಮಾಡಲು ಸಾದ್ಯ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೊಸನಗರ ಕ್ಷೇತ್ರದ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

12 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

13 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

13 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

15 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

18 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

19 hours ago