Categories: Hosanagara News

ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳ & ಉಪನ್ಯಾಸಕರ ಜಟಾಪಟಿಗೆ ತಾರ್ಕಿಕ ಅಂತ್ಯ


ಹೊಸನಗರ: ಸುಮಾರು 15ದಿನಗಳಿಂದ ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕ
ಅಂಜನ್‌ಕುಮಾರ್ ಹಾಗೂ ವಿದ್ಯಾರ್ಥಿಗಳ ಮಧ್ಯೆ ಜಟಾಪಟಿ ನಡೆಯುತ್ತಿದ್ದು ಇಂದು ತಾತ್ಕಾಲಿಕ ಅಂತ್ಯಗೊಂಡಿದೆ.

ಹೊಸನಗರದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರು ತಿಂಗಳಿಂದ ಪ್ರಾಂಶುಪಾಲರಾಗಿ ಸೇವೆ
ಸಲ್ಲಿಸುತ್ತಿದ್ದ ಅಂಜನ್‌ಕುಮಾರ್‌ರವರ ವಿರುದ್ಧ ಇದೇ ಕಾಲೇಜಿನ ವಿದ್ಯಾರ್ಥಿಗಳು ಈ ಹಿಂದೆ ಇವರು ಇರುವವರೆಗೆ ನಾವುಗಳ ಕಾಲೇಜಿಗೆ ಬರುವುದಿಲ್ಲ. ಇವರನ್ನು ತಕ್ಷಣ ವರ್ಗಹಿಸಬೇಕೆಂದು ಪಟ್ಟು ಹಿಡಿದು ಧರಣಿ ನಡೆಸಿದ್ದರು
ಅಂದು ರಾಜ್ಯ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ವಿಷ್ಣುಮೂರ್ತಿ ಅಡಿಗ ಹಾಗೂ ಸಿಬ್ಬಂದಿಗಳು
ಕಾಲೇಜಿಗೆ ಆಗಮಿಸಿ ಇನ್ನೂ ಮುಂದೆ ಪ್ರಾಂಶುಪಾಲರ ಹುದ್ದೆಯಿಂದ ತೆಗೆದು ಇನ್ನೂ ಮುಂದೆ ಇವರು
ಉಪನ್ಯಾಸಕರಾಗಿ ಈ ಕಾಲೇಜಿಗೆ ಬರುವುದಿಲ್ಲ ಇಲ್ಲಿಂದ ವರ್ಗಾಯಿಸುವುದಾಗಿ ಹೇಳಿ ರಜೆಯ ಮೇಲೆ ಅಂಜನ್‌ಕುಮಾರ್ ತೆರಳಬೇಕೆಂದು ಮೌಖಿಕ ಆದೇಶ ನೀಡಿದ್ದು ಅಂದು ವಿದ್ಯಾರ್ಥಿಗಳನ್ನು ಸಮಾಧಾನ ಮಾಡಿ
ಹೋಗಿದ್ದರು ಅಲ್ಲಿಗೆ ಒಂದು ರೀತಿಯಲ್ಲಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜ್‌ನ ವಿದ್ಯಾರ್ಥಿಗಳು ತಣ್ಣಗಾಗಿದ್ದರು.

ಪುನಃ ಕಾಲೇಜಿಗೆ ಆಗಮಿಸಿದ ಅಂಜನ್‌ಕುಮಾರ್:ಜಂಟಿ ನಿರ್ದೆಶಕರವರ ಮೌಖಿಕ ಆದೇಶದ ಮೇರೆಗೆ ಸುಮಾರು 10ದಿನಗಳಿಂದ ಕಾಲೇಜಿಗೆ ಆಗಮಿಸದ ಉಪನ್ಯಾಸಕ ಅಂಜನ್‌ಕುಮಾರ್‌ರವರು ಇಂದು ಕಾಲೇಜಿಗೆ ಆಗಮಿಸುತ್ತಿದ್ದಂತೆ ವಿದ್ಯಾರ್ಥಿಗಳು ಗಲಾಟೆ ಪ್ರಾರಂಬಿಸಿದರು.

ಸಂಧಾನ ಯಶಸ್ವಿ :ರಾಜ್ಯ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ವಿಷ್ಣುಮೂರ್ತಿಯವರು ಹಿಂದಿನ ಪ್ರಾಂಶುಪಾಲರಾಗಿದ್ದ ಅಂಜನ್ ಕುಮಾರ್‌ರವರನ್ನು ತೆಗೆದು ಅದೇ ಕಾಲೇಜಿನ ಉಪನ್ಯಾಸಕರಾಗಿದ್ದ ಶ್ರೀಪತಿ ಹಳಗುಂದರವರನ್ನು ಪ್ರಾಂಶುಪಾಲರಾಗಿ ನೇಮಿಸಿ ಹೋಗಿದ್ದು ಅವರು ಗಲಾಟೆ ಮಾಡುತ್ತಿರುವ ವಿದ್ಯಾರ್ಥಿಗಳನ್ನು ತಮ್ಮ ಕೊಠಡಿಗೆ ಕರೆದು ಹಾಗೂ ಅಂಜನ್‌ಕುಮಾರ್ ಉಪನ್ಯಾಸಕ ವರ್ಗದವರೊಂದಿಗೆ ಚರ್ಚಿಸಿ ಅಂಜನ್‌ಕುಮಾರ್‌ರವರು ಇನ್ನೂ ಒಂದು ವಾರ ರಜೆಯ ಮೇಲೆ ತೆರಳಲು ಸೂಚಿಸಲಾಗಿದ್ದು ಅವರು ಪುನಃ ಈ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುವುದಿಲ್ಲ.ವರ್ಗಾವಣೆಯ ಆದೇಶ ಸದ್ಯದಲ್ಲಿಯೇ ಬರಲಿದೆ ಎಂದು ಸೂಚಿಸಿದ ನಂತರ ಗಲಾಟೆ, ಗದ್ದಲಗಳು ಮುಕ್ತಾಯಗೊಂಡಿದ್ದು ಸಂಧಾನ ಸಭೆ ಯಶಸ್ವಿಗೊಳಿಸಿದರು.


ಜಂಟಿ ನಿರ್ದೇಶಕ ಪುನಃ ಆಗಮನ: ರಾಜ್ಯ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ವಿಷ್ಣುಮೂರ್ತಿ ಅಡಿಗ ಹಾಗೂ ಸಿಬ್ಬಂದಿಗಳು ಇಂದು ಕಾಲೇಜಿಗೆ ಭೇಟಿ ನೀಡಿ ಹಿಂದಿನ ವಾರ ಬಂದಾಗ ಆದ ಗಲಾಟೆ, ಗದ್ದಲಗಳನ್ನು ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ವರದಿಯನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು ಮೇಲಾಧಿಕಾರಿಗಳ ವರದಿ ಇನ್ನೂ ಒಂದೆರಡು ದಿನಗಳಲ್ಲಿ ಬರಲಿದೆ ಅಲಿಯವರೆಗೆ ಎಲ್ಲ ವಿದ್ಯಾರ್ಥಿಗಳು ಶಾಂತ ರೀತಿಯಲ್ಲಿ ಬೋಧನೆಯನ್ನು ಕಲಿಯಿರಿ ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದರು.

ರಾಜ್ಯ ಮಟ್ಟದಲ್ಲಿ ಹೆಸರು ಗಳಿಸಲು ಪ್ರಯತ್ನ: ಶ್ರೀಪತಿ ಹಳಗುಂದ:-ಹೊಸನಗರ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು ಸಾವಿರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂನಸುಮಾರು 50ಕ್ಕಿಂತಲ್ಲೂ ಹೆಚ್ಚು ಉಪನ್ಯಾಸಕ ವೃಂದವಿದ್ದು ಉತ್ತಮ ಶಿಕ್ಷಣದ ಜೊತೆಗೆ ಆಟೋಟಗಳಲ್ಲಿ ಶಿಸ್ತು ಸಂಯಮದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿಯು ಹೆಮ್ಮೆಯ ಕಾಲೇಜ್ ಆಗಿ ಪರಿವರ್ತಿಸುವುದಾಗಿ ತಿಳಿಸಿದ್ದು ನಮಗೆ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೆಂಬಲವಾಗಿ ಯಶಸಿನಲ್ಲಿ ಸಹಕರಿಸಬೇಕೆಂದು ನೂತನ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ಶ್ರೀಪತಿ ಹಳಗುಂದರವರು ಈ ಸಂದರ್ಭದಲ್ಲಿ ಕೇಳಿಕೊಂಡರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

23 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago