Categories: Hosanagara News

ಹೊಸನಗರ : ಗೋಮೂತ್ರ, ಸಗಣಿ ನೀರು ಮೈ ಮೇಲೆ ಸುರಿದುಕೊಂಡು ಗ್ರಾ.ಪಂ ಅಧ್ಯಕ್ಷನಿಂದ ವಿಭಿನ್ನ ಪ್ರತಿಭಟನೆ

ಹೊಸನಗರ: ಗೋಮೂತ್ರ, ಸಗಣಿ ನೀರು ಮೇಲೆ ಸುರಿದುಕೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ ವಿನೂತನವಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ತಾಲೂಕಿನ ಮೂಡುಗೊಪ್ಪ (ನಗರ) ಗ್ರಾ.ಪಂ ಅಧ್ಯಕ್ಷ ಕರುಣಾಕರ ಶೆಟ್ಟಿ ಪ್ರತಿಭಟನೆ ನಡೆಸಿದ ಗ್ರಾಪಂ ಅಧ್ಯಕ್ಷನಾಗಿದ್ದು, ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಹಿನ್ನೆಲೆ ಟ್ಯಾಂಕರ್ಗಳಲ್ಲಿ ಹಳ್ಳಿಹಳ್ಳಿಗೆ ನೀರು ಸೌಕರ್ಯಗಳನ್ನ ಒದಗಿಸಲಾಗುತ್ತಿದೆ. ಅದರ ಬಿಲ್ ಮಂಜೂರಾತಿ ಆಗುತ್ತಿಲ್ಲ ಎಂದು ಹೊಸನಗರ ತಾಲ್ಲೂಕು ಪಂಚಾಯಿತಿ ಮುಂಭಾಗ ಸಗಣಿ ಮತ್ತು ಗೋ ಮೂತ್ರದ ನೀರನ್ನು ಮೈಮೇಲೆ ಎರಚಿಕೊಂಡು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಕೆಲ ತಿಂಗಳ ಹಿಂದೆ ತಾಲ್ಲೂಕು ಪಂಚಾಯಿತಿಯಲ್ಲಿ ಕಸಗುಡಿಸಿ ಪ್ರತಿಭಟಿಸಿದ್ದ ಗಮನ ಸೆಳೆದಿದ್ದ ಕರುಣಾಕರ ಶೆಟ್ಟಿ, ತಾಲ್ಲೂಕಿಗೆ ಕುಡಿಯುವ ನೀರಿನ ಸೌಕರ್ಯ ಒದಗಿಸಲು, ಹಣ ಮಂಜೂರು ಏಕೆ ಮಾಡುತ್ತಿಲ್ಲ ? ಹೊಸನಗರಕ್ಕೆ ಮಾತ್ರವೇ ಈ ನಿರ್ಲಕ್ಷ್ಯವೇಕೆ ? ಎಂದು ಪ್ರಶ್ನಿಸಿದ ಕರುಣಾಕರಶೆಟ್ಟಿ, ಜನರು ಕುಡಿಯುವ ನೀರು ಒದಗಿಸಿ ಎಂದು ಪ್ರಶ್ನಿಸುತ್ತಾರೆ. ಆದರೆ ಪಂಚಾಯಿತಿಗಳಿಗೆ ಹಣ ಒದಗಿಸುತ್ತಿಲ್ಲ. ನೀರಿನ ಟ್ಯಾಂಕರ್ಗಳ ಮೂಲಕ ನೀರು ಒದಗಿಸಲು ಸಾಧ್ಯವಾಗದೇ ಜನರಿಂದ ಮಾತು ಕೇಳಬೇಕಾದ ಸನ್ನಿವೇಶವಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನೂ ಕರುಣಾಕರ ಶೆಟ್ಟಿ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಉಪವಿಭಾಗೀಯ ಅಧಿಕಾರಿಯವರು ಹೊಸನಗರ ತಾಲ್ಲೂಕಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲು 20 ಲಕ್ಷ ರೂಪಾಯಿ ಬಿಡುಗಡೆಯಾಗಿದೆ. ಈ ಪೈಕಿ 10 ಲಕ್ಷ ರೂಪಾಯಿ ಅನುದಾನ ಮೊದಲ ಕಂತಿನಲ್ಲಿ ಬಂದಿದೆ. ನಗರ ಪಂಚಾಯ್ತಿಯಿಂದಲೇ ಮೊದಲು ಹಣ ಬಿಡುಗಡೆ ಮಾಡಿ, ಕುಡಿಯುವ ನೀರಿನ ಸೌಕರ್ಯಕ್ಕೆ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಕರುಣಾಕರ ಶೆಟ್ಟಿ ಪ್ರತಿಭಟನೆಯನ್ನ ಕೈ ಬಿಟ್ಟಿದ್ದಾರೆ.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

16 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

17 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

17 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

19 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

21 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

22 hours ago