Categories: Hosanagara News

ಹೊಸನಗರ ; ಗ್ರಾಪಂ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಿಗೆ ಭರ್ಜರಿ ಜಯ

ಹೊಸನಗರ : ವಿವಿಧ ಕಾರಣಗಳಿಂದ ತೆರವಾಗಿದ್ದ ಹೆದ್ದಾರಿಪುರ ಗ್ರಾಪಂ ತಳಲೆ ಮತ್ತು ನಿಟ್ಟೂರು ಗ್ರಾಪಂನ ಹೆಬ್ಬಿಗೆ ವಾರ್ಡ್‌ನ ಮೂರು ಸ್ಥಾನಗಳಿಗೆ ಶನಿವಾರ ಮತದಾನ ನಡೆದಿತ್ತು‌. ಇಂದು ನಡೆದ ಮತ ಎಣಿಕೆಯಲ್ಲಿ ಬಿಜೆಪಿ ಬೆಂಬಲಿತ ಮೂವರು ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

ತಳಲೆ ವಾರ್ಡ್‌ನ ಶ್ರೇಯಸ್ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸುರೇಶ್ ಬೇಕರಿ ಅವರಿಗಿಂತ 87 ಮತಗಳನ್ನು ಹೆಚ್ಚು ಪಡೆದು ಗೆಲುವು ಪಡೆದುಕೊಂಡಿದ್ದಾರೆ.

ಚುನಾವಣೆಯಲ್ಲಿ ಒಟ್ಟು 594 ಮತ ಚಲಾವಣೆ ಆಗಿತ್ತು. ಈ ಪೈಕಿ ಶ್ರೇಯಸ್ ಅವರು 279 ಮತಗಳನ್ಮು ಪಡೆದುಕೊಂಡರೆ ಸುರೇಶ್ ಬೇಕರಿ ಅವರು 192 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಮಂಜಣ್ಣ 120 ಮತಗಳನ್ನು ಪಡೆದಿದ್ದಾರೆ‌. 3 ಮತಗಳು ಅಸಿಂಧುಗೊಂಡಿತ್ತು.

ಇನ್ನೂ ನಿಟ್ಟೂರು ಗ್ರಾಮ ಪಂಚಾಯಿತಿಯ ಹೆಬ್ಬಿಗೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪುರುಷೋತ್ತಮ ಶಾನುಬೋಗ್ ಹಾಗೂ ಕೋಟೆಶಿರೂರು ಸ್ವರೂಪ ಉಡುಪ ಭರ್ಜರಿ ಗೆಲುವು ಸಾಧಿಸಿದ್ದಾರೆ‌.
ಪುರುಷೋತ್ತಮ್ ರವರು ಚಲಾವಣೆ ಆದ 293 ಮತಗಳಲ್ಲಿ 236 (81%) ಮತ ಪಡೆದರೆ ಎದುರಾಳಿ ವಾಸುದೇವ ರವರು 52 ಮತ ಪಡೆದಿದ್ದಾರೆ.

ಕೋಟೆಶಿರೂರು ಸ್ವರೂಪ ಉಡುಪ ರವರು ಚಲಾವಣೆ ಆದ 204 ಮತಗಳಲ್ಲಿ 121 ಮತ ಪಡೆದರೆ, ಎದುರಾಳಿ ಲಕ್ಷ್ಮೀ 40 ಮತ್ತು ವಿಜಯಲಕ್ಷ್ಮಿ 39 ಮತ ಪಡೆದಿದ್ದಾರೆ.

ಮಂಗಳವಾರ ಹೊಸನಗರ ತಾಲೂಕು ಪಂಚಾಯತ್ ನಲ್ಲಿ ಮತ ಎಣಿಕೆ ಮಾಡಲಾಯಿತು. ವಿಜಯಶಾಲಿ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

Malnad Times

Recent Posts

ಗೀತಾ ಶಿವರಾಜ್‌ಕುಮಾರ್ ರವರಿಗೆ ಒಂದು ಅವಕಾಶ ಕೊಡಿ ; ಸಾ.ರಾ. ಗೋವಿಂದು

ಶಿವಮೊಗ್ಗ: ಗೀತಾ ಶಿವರಾಜ್‌ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…

3 hours ago

ಗೀತಾ ಗ್ರಾ.ಪಂ. ಚುನಾವಣೆ ಕೂಡ ಗೆಲ್ಲಲ್ಲ ; ಕುಮಾರ್ ಬಂಗಾರಪ್ಪ

ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

4 hours ago

ಮೇ 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…

6 hours ago

ವಕೀಲರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಚಿಕ್ಕಮಗಳೂರು: ಇಲ್ಲಿನ ವಕೀಲರ ಸಂಘದ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಸುಜೇಂದ್ರ, ಉಪಾಧ್ಯಕ್ಷರಾಗಿ ಶರತ್‌ಚಂದ್ರ, ಕಾರ್ಯದರ್ಶಿ ಅನಿಲ್‌ಕುಮಾರ್, ಖಜಾಂಚಿ ದೀಪಕ್,…

6 hours ago

Chikkamagaluru | ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ

ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ (ಸಂತೆ ಮೈದಾನ) ಶ್ರೀ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ…

6 hours ago

ಕಾದ ಕಾವಲಿಯಂತಾದ ಮಲೆನಾಡು, ಬಿಸಿಲಿನ ಜಳಕ್ಕೆ ಜನ ಸುಸ್ತೋ ಸುಸ್ತು

ಶಿವಮೊಗ್ಗ : ಮಲೆನಾಡೆಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕರ್ನಾಟಕ ಮಾತ್ರವಲ್ಲ ಅದರಿಂದಾಚೆಗೂ ಮಲೆನಾಡನ್ನು ಪ್ರೀತಿಸುವವರು, ಇರಲು ಇಚ್ಛಿಸುವವರು ಇದ್ದಾರೆ.…

10 hours ago