Categories: Hosanagara News

ಹೊಸನಗರ ; ಚಿರತೆ ದಾಳಿಗೆ ಹಸು ಬಲಿ, ಮುಂಜಾಗ್ರತಾ ಕ್ರಮಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಆಗ್ರಹ


ಹೊಸನಗರ: ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಭಯದಲ್ಲಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸುವನ್ನು ಹಿಡಿದಿದೆ ಇದರಿಂದ ಚಿರತೆ ಓಡಾಟ ನಡೆಸುತ್ತಿರುವುದು ದೃಢಪಟ್ಟಿದೆ.

ತಾಲ್ಲೂಕಿನ ತ್ರಿಣಿವೆ, ಜಕ್ಕನಗದ್ದೆ, ಮುಡ್ರಳ್ಳಿ, ಇಟ್ಟಕ್ಕಿ, ತೊಗರೆಗಳಲ್ಲಿ ಸುಮಾರು ನೂರಕ್ಕಿಂತ ಹೆಚ್ಚು ಮನೆಗಳಿವೆ. ಅವರು ದನ, ಎಮ್ಮೆಗಳನ್ನು ಕಟ್ಟಿಕೊಂಡು ಹೊಲ-ಗದ್ದೆಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಅವರು ಪಟ್ಟಣಕ್ಕೆ ಬರಬೇಕೆಂದರೆ ಸುಮಾರು 20 ಕಿ.ಮೀ. ಬರಬೇಕು ಹತ್ತಿರ ಹತ್ತಿರ ಮನೆಗಳಿಲ್ಲ. ಈ ಚಿರತೆ ಕಾಟದಿಂದ ಮನೆಯಿಂದ ಹೊರಬರುವುದೇ ಕಷ್ಟಕರವಾಗಿದ್ದು ಅಲ್ಲಿನ ಜನರು ಮನೆಯಿಂದ ಹೊರಬರುತ್ತಿಲ್ಲ. ವಿದ್ಯಾರ್ಥಿಗಳು ಭಯದಿಂದ ಪರೀಕ್ಷೆಗೆ ಬರುತ್ತಿದ್ದಾರೆ‌. ತಕ್ಷಣ ಅರಣ್ಯ ಇಲಾಖೆಯವರು ಈ ಭಾಗದಲ್ಲಿ ಸಂಚರಿಸಿ ಚಿರತೆಯನ್ನು ಹಿಡಿದರೆ ಅಲ್ಲಿನ ಗ್ರಾಮಸ್ಥರ ಮನಸ್ಸು ತಿಳಿಯಾಗಲಿದೆ.

ತ್ರಿಣಿವೆ ಗ್ರಾಮ ಪಂಚಾಯತಿಯ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಈ ಭಾಗದಲ್ಲಿ ಚಿರತೆ ಇರುವುದು ಹಸು ಹಿಡಿದಿರುವುದರಿಂದ ದೃಢಪಟ್ಟಿದೆ. ಈ ಭಾಗದ ಜನರು ಮುಗ್ದರು ದಿನನಿತ್ಯ ಕೆಲಸ ಮಾಡಿ ಜೀವನ ಸಾಗಿಸುವವರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಈ ಭಾಗದಲ್ಲಿ ಬೀಡುಬಿಟ್ಟು ತಕ್ಷಣ ಚಿರತೆಯನ್ನು ಸೆರೆ ಹಿಡಿಯದಿದ್ದರೆ ಮುಂದಿನ ದಿನದಲ್ಲಿ ಭಾರೀ ಅನಾಹುತ ಸಂಭವಿಸಲಿದೆ. ತಕ್ಷಣ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಚಿರತೆಯನ್ನು ಸೆರೆ ಹಿಡಿಯಲು ಮುಂದಾಗಲಿ ಎಂದರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

9 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

12 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

12 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

13 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

14 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

16 hours ago