Categories: Hosanagara News

ಹೊಸನಗರ ಜೆಸಿಐ ಪದಾಧಿಕಾರಿಗಳಿಂದ ಮಹತ್ಕಾರ್ಯ ; ಏನದು ?

ಹೊಸನಗರ: ಪಟ್ಟಣದಲ್ಲಿಂದು ಬೆಳ್ಳಂಬೆಳಗ್ಗೆ ಕೊಡಚಾದ್ರಿ ಜೆಸಿಐ ಪದಾಧಿಕಾರಿಗಳು ಪಕ್ಷಿಗಳು ಚಿಲಿಪಿಲಿಗುಟ್ಟುವ ಸಮಯದಲ್ಲಿ ಪಕ್ಷಿಗಳ ಆಹಾರ ಹಾಗೂ ನೀರಡಿಕೆ ನೀಗಿಸುವ ಸಾಧನಗಳನ್ನು ತೆಗೆದುಕೊಂಡು ಬಂದು ಚೌಡಮ್ಮ ರಸ್ತೆಯಲ್ಲಿರುವ ಮರಗಳ ಕೊಂಬೆಗಳಿಗೆ ಕಟ್ಟುವ ಕಾರ್ಯದಲ್ಲಿ ತೊಡಗಿದ್ದರು.

ಅವರ ಕಾರ್ಯಗಳನ್ನು ವೀಕ್ಷಿಸಿದ ಸಾರ್ವಜನಿಕರು ಇವರುಗಳು ಏನು ಮಾಡ್ತಾರೆ ಎಂದು ಆಶ್ಚರ್ಯ ಚಕಿತರಾಗಿ ನೋಡಿದಾಗ ಮಲೆನಾಡಿನ ತವರುರಾದ ಹೊಸನಗರದಲ್ಲೂ ಕುಡಿಯುವ ನೀರು ತತ್ವಾರ ಉಂಟಾದ ಕಾರಣ ಪಕ್ಷಿ ಸಂಕುಲಗಳಿಗಾಗಿ ನೀರು ಹಾಗೂ ಆಹಾರ ಒದಗಿಸುವ ಕಾರ್ಯದಲ್ಲಿ ತೊಡಗಿದ್ದುದನ್ನು ಕಂಡು ಆಶ್ಚರ್ಯ ಚಕಿತರಾದರು.

ಉದ್ಘೋಷದೊಂದಿಗೆ ಮಲೆನಾಡಿನ ತವರಿನಲ್ಲೇ ತಾಪಮಾನ 40 ಡಿಗ್ರಿ ಸಮೀಪ ದಾಖಲಾಗುತ್ತಿದ್ದ ಕಾರಣ ಕ್ಷೀಣಿಸುತ್ತಿರುವ ಪಕ್ಷಿ ಸಂಕುಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಜನರ ಸಂಕಲ್ಪ ಕೈಗೊಳ್ಳುವ ಮೂಲಕ ಪಕ್ಷಿ ಸಂಕುಲದ ರಕ್ಷಣೆಯಲ್ಲಿ ಎಲ್ಲ ಜನರು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೊಡಚಾದ್ರಿ ಜೆಸಿಐನ ಪೂರ್ಣೇಶ್ ಮಲೆಬೈಲು, ಡಾ. ವಿನಯ್, ಪ್ರದೀಪ್, ಬಿ ಎಸ್ ಸುರೇಶ್, ರಾಧಾಕೃಷ್ಣ, ಮನು, ಕೇಶವ, ಸಂತೋಷ್, ಜ್ಯೋತಿ, ಸುಶೀಲಾ, ಸುಜಾತ, ಶೈಲಾ, ಡಾ. ಪುನೀತ್ ರಾಜ್‍ಕುಮಾರ್ ಕನ್ನಡ ಸಂಘದ ಗೌರವಾಧ್ಯಕ್ಷ ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.

Malnad Times

Recent Posts

ಕಾದ ಕಾವಲಿಯಂತಾದ ಮಲೆನಾಡು, ಬಿಸಿಲಿನ ಜಳಕ್ಕೆ ಜನ ಸುಸ್ತೋ ಸುಸ್ತು

ಶಿವಮೊಗ್ಗ : ಮಲೆನಾಡೆಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕರ್ನಾಟಕ ಮಾತ್ರವಲ್ಲ ಅದರಿಂದಾಚೆಗೂ ಮಲೆನಾಡನ್ನು ಪ್ರೀತಿಸುವವರು, ಇರಲು ಇಚ್ಛಿಸುವವರು ಇದ್ದಾರೆ.…

2 hours ago

ಅಭಿವೃದ್ಧಿ ಮಾಡದೇ ಮತದಾರರಿಗೆ ಮುಖ ತೋರಿಸಲು ಆಗದೇ ಮೋದಿ ಹೆಸರಿನಲ್ಲಿ ಮತ ಕೇಳಲು ನಾಚಿಕೆಯಾಗಬೇಕು ; ಬಿ.ವೈ.ಆರ್. ವಿರುದ್ಧ ಹರಿಹಾಯ್ದ ಬೇಳೂರು

ರಿಪ್ಪನ್‌ಪೇಟೆ: ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷ್ಯ ವಹಿಸಿರುವ…

5 hours ago

Arecanut Price | ಏಪ್ರಿಲ್ 29ರ ಶಿವಮೊಗ್ಗ ಮಾರುಕಟ್ಟೆಯ ಅಡಿಕೆ ರೇಟ್

ಶಿವಮೊಗ್ಗ : ಏ. 29 ಸೋಮವಾರ ನಡೆದ ಶಿವಮೊಗ್ಗ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿವಮೊಗ್ಗ ಮಾರುಕಟ್ಟೆ :ರಾಶಿ…

8 hours ago

ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಕೃಷಿ ಹೊಂಡದಲ್ಲಿ ಮುಳುಗಿ ಸಾವು !

ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಕೃಷಿ ಹೊಂಡದಲ್ಲಿ ಮುಳುಗಿ ಸಾವು ! ಮೂಡಿಗೆರೆ : ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ…

9 hours ago

ಸಿ.ಟಿ.ರವಿ ವಿರುದ್ಧ ಸುಳ್ಳು ಎಫ್‌ಐಆರ್ | ಸರ್ಕಾರದಿಂದ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಯತ್ನ, ಖಂಡನೆ

ಚಿಕ್ಕಮಗಳೂರು: ಮಾಜಿ ಸಚಿವ ಡಾ.ಸಿ.ಟಿ.ರವಿ ವಿರುದ್ಧ ಸುಳ್ಳು ಮತ್ತು ಅಸಂಬದ್ಧವಾಗಿ ಎಫ್‌ಐಆರ್ ದಾಖಲಿಸುವ ಮೂಲಕ ವಿರೋಧ ಪಕ್ಷಗಳ ಮಾತನಾಡು ಹಕ್ಕು…

20 hours ago

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಮಾಜಿ ಸಚಿವ ಸಿ.ಟಿ.ರವಿ ಸಂತಾಪ

ಚಿಕ್ಕಮಗಳೂರು: ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ (77) ಅವರ ನಿಧನಕ್ಕೆ ಮಾಜಿ ಸಚಿವ ಡಾ.ಸಿ.ಟಿ.ರವಿ ಸೇರಿದಂತೆ ಜಿಲ್ಲಾ ಬಿಜೆಪಿ ಕಂಬನಿ…

20 hours ago