Categories: Hosanagara News

ಹೊಸನಗರ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ರಣ ಮಳೆ ; ಸಂಪರ್ಕಕ್ಕೆ ಸಿಗದ ಬಿಇಒ ! ಎಲ್ಲಿದ್ದೀರಿ ಸರ್..!?

ಹೊಸನಗರ : ಮಲೆನಾಡಿನ ತವರು ಹೊಸನಗರ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಪ್ರಮಾಣದ ಮಳೆ ಬೀಳುತ್ತಿದ್ದು ಭಾನುವಾರ ಸಹ ಎಡಬಿಡದೆ ಮಳೆ ಸುರಿಯತ್ತಿದ್ದು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇನ್ನು ಐದು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಆದರೆ ಹೊಸನಗರ ಶಿಕ್ಷಣಾಧಿಕಾರಿಗಳು ಮಕ್ಕಳ ಹಿತ ದೃಷ್ಟಿಯಿಂದ ಈವರೆಗೂ ಅಂದರೆ ಭಾನುವಾರ ಸಂಜೆ 6 ಗಂಟೆವರೆಗೂ ಸೋಮವಾರದ ಶಾಲೆಗೆ ರಜೆ ಘೋಷಿಸದೆ ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದು, ಕೇಂದ್ರ ಸ್ಥಾನದಲ್ಲಿ ಇರದೆ ಇತ್ತ ದೂರವಾಣಿ ಸಂಪರ್ಕಕ್ಕೂ ಸಿಗದೆ ಇದ್ದು ಕಚೇರಿ ವ್ಯವಸ್ಥಾಪಕರು, ಬಿ.ಆರ್.ಸಿ, ಸಿ.ಆರ್.ಪಿ ಗಳು ಸಂಪರ್ಕಿಸಿದರು ಅವರು ಸಹ ಶಿಕ್ಷಣಾಧಿಕಾರಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಹೇಳುತ್ತಿದ್ದು, ಆದ ಕಾರಣ ನಮಗೆ ಯಾವುದೇ ಮಾಹಿತಿ ನೀಡಲು ಆಗುತ್ತಿಲ್ಲವೆಂದು ಅವರು ತಮ್ಮ ಸಹಾಯಕತೆಯನ್ನು ತೋಡಿಕೊಂಡಿದ್ದ ಕಾರಣ ತಾಲೂಕು ದಂಡಾಧಿಕಾರಿಗಳನ್ನು ‘ಮಲ್ನಾಡ್ ಟೈಮ್ಸ್’ ಸಂಪರ್ಕಿಸಿದಾಗ ಅವರು ಸಹ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ತಿಳಿಸಿದ್ದು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಬಗ್ಗೆ ಆತಂಕ ತೋಡಿಕೊಂಡಿದ್ದಾರೆ.

ಕೃಷ್ಣಮೂರ್ತಿ, ಹೊಸನಗರ ಬಿಇಒ

ತಹಶೀಲ್ದಾರ್ ಸೇರಿದಂತೆ ಮತ್ಯಾರಿಗೂ ಮಧ್ಯಾಹ್ನದಿಂದ ದೂರವಾಣಿಗೆ ಕರೆಗೆ ಸಿಗದೆ ನಾಪತ್ತೆಯಾಗಿರುವ ಹೊಸನಗರ ಬಿಇಒ ಸಾಹೇಬ್ರೆ ಎಲ್ಲಿದ್ದೀರಿ…? ದಯವಿಟ್ಟು ಉತ್ತರಿಸಿ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago