Categories: Hosanagara News

ಹೊಸನಗರ ತಾಲ್ಲೂಕಿನಾದ್ಯಂತ ಮಳೆ ಅಬ್ಬರ ಜೋರು ; ಕೊಳಗಿ ಗ್ರಾಮದಲ್ಲಿ ಮನೆ ಕುಸಿತ !


ಹೊಸನಗರ : ತಾಲ್ಲೂಕಿನಾದ್ಯಂತ ಅಬ್ಬರದ ಮಳೆ ಆರಂಭವಾಗಿದ್ದು ಹೊಸನಗರದಲ್ಲಿ ಗುರುವಾರ ಬೆಳಿಗ್ಗೆ ವರದಿಯ ಪ್ರಕಾರ 130.2 ಮಿಲಿ ಮೀಟರ್ ಮಳೆಯಾಗಿದೆ.

ತಾಲ್ಲೂಕಿನ ಕೊಳಗಿ ಗ್ರಾಮದಲ್ಲಿ ಜ್ಯೋತಿ ಕೋಂ ಲೋಕಪ್ಪ‌ಎಂಬುವವರ ಮನೆ ಕುಸಿತ ಕಂಡಿದ್ದು ಸುಮಾರು ಅಂದಾಜು 1 ಲಕ್ಷ ರೂ. ನಷ್ಟು ನಷ್ಟ ಉಂಟಾಗಿದ್ದು ಇದನ್ನು ಬಿಟ್ಟರೆ ಬೇರೆ ಯಾವುದೇ ಅನಾಹುತವಾದ ವರದಿ ಹೊಸನಗರ ತಾಲ್ಲೂಕಿನಲ್ಲಿ ಆಗಿಲ್ಲ.

ಪರಿಶೀಲನೆ:

ಕೊಳಗಿ ಗ್ರಾಮದ ಜ್ಯೋತಿ ಲೋಕಪ್ಪನವರ ಮನೆ ಮಳೆಯ ರಭಸಕ್ಕೆ ಕುಸಿದಿದ್ದು ತಕ್ಷಣ ಸ್ಪಂದಿಸಿದ ಅಲ್ಲಿನ ಗ್ರಾಮ ಆಡಳಿತಾಧಿಕಾರಿ ಸಿದ್ದಪ್ಪನವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ತಯಾರಿಸಿ ತಾಲ್ಲೂಕು ಕಛೇರಿಯ ಗಮನಕ್ಕೆ ತಂದು ಸೂಕ್ತ ಪರಿಹಾರಕ್ಕಾಗಿ ವರದಿ ನೀಡಿದರು.

ಅಧಿಕಾರಿಗಳು ಸೂಕ್ತ ಸಂದರ್ಭದಲ್ಲಿ ಸ್ಪಂದಿಸಿ:

ತಾಲ್ಲೂಕಿನಲ್ಲಿ ಮೂರು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು ಯಾವುದೇ ಸಂದರ್ಭದಲ್ಲಿಯಾದರೂ ಅನಾಹುತವಾಗುವ ಸಂದರ್ಭದಲ್ಲಿ ತಾಲ್ಲೂಕು ಕಂದಾಯ ಇಲಾಖೆಯ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗಿದ್ದು ಯಾವುದೇ ಸಂದರ್ಭದಲ್ಲಿಯಾದರೂ ದೂರವಾಣಿ ಕರೆಗಳು ಬಂದರೇ ತಕ್ಷಣ ಸ್ಪಂದಿಸಬೇಕು ಹಾಗೂ ಸೂಕ್ತ ವರದಿಯನ್ನು ತಾಲ್ಲೂಕು ಕಛೇರಿಗೆ ತಲುಪಿಸಬೇಕೆಂದು ಹೊಸನಗರದ ತಹಶೀಲ್ದಾರ್ ಧಮಾಂತ ಗಂಗಾಧರ್ ಕೋರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago