ಹೊಸನಗರ: ತಾಲ್ಲೂಕಿನಲ್ಲಿ ಒಟ್ಟು 30 ಗ್ರಾಮ ಪಂಚಾಯತಿಗಳಿವೆ ಆದರೆ ಮೂರು ಕ್ಷೇತ್ರಗಳಲ್ಲಿ ನಗರ ಮತ್ತು ರಿಪ್ಪನ್ಪೇಟೆ ನಾಡ ಕಛೇರಿಗಳಲ್ಲಿ ಆಧಾರ್ ಕಾರ್ಡ್ ನೋಂದಣಿ ಮತ್ತು ಲೋಪಗಳನ್ನು ಸರಿಪಡಿಸುತ್ತಿದ್ದರೂ ನೆಟ್ವರ್ಕ್ ಸೇವೆ ಇಲ್ಲದೆ ಹೊಸನಗರ ತಾಲ್ಲೂಕು ಕಛೇರಿಗೆ ಜನರು ಬರುತ್ತಿದ್ದಾರೆ.
ತಾಲ್ಲೂಕು ಕಛೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಆಧಾರ್ ಕಾರ್ಡ್ ಲೋಪ ಸರಿಪಡಿಸುತ್ತಿದ್ದರೂ ಸಂಜೆಯವರೆಗೆ 25 ಆಧಾರ್ ಕಾರ್ಡ್ ಲೋಪ ಸರಿಪಡಿಸುವುದು ಕಷ್ಟಕರವಾಗಿದೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಸುಮಾರು ನೂರಾರು ಜನ ಆಧಾರ್ ಕಾರ್ಡ್ ಸರಿಪಡಿಸಲು ಜನರು ಕಾದು-ಕಾದು ಸುಸ್ತಾಗಿ ಮನೆಗೆ ಮರಳುತ್ತಿದ್ದಾರೆ. ಇದರಿಂದ ಜನರಿಗೆ ಬಹಳ ತೊಂದರೆಯಾಗುತ್ತಿದೆ ಆದ್ದರಿಂದ ಈ ಸಮಸ್ಯೆಯನ್ನು ಬಗೆಹರಿಸಬೇಕಾದರೆ ಹೊಸನಗರ ತಾಲ್ಲೂಕಿನ 30 ಗ್ರಾಮ ಪಂಚಾಯತಿ ಮಟ್ಟದಲ್ಲಿ 30 ಆಧಾರ್ ನೋಂದಣಿ ಆರಂಭಿಸಿ ತಾಲ್ಲೂಕಿನ ಜನರ ಕಷ್ಟಗಳನ್ನು ಬಗೆ ಹರಿಸಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಸಿಂಧೂ:
ಹೊಸನಗರ ತಾಲ್ಲೂಕು ಕಛೇರಿಯಲ್ಲಿ ಆಧಾರ್ ಕಾರ್ಡ್ ನೋಂದಣಿ ನಡೆಸುತ್ತಿರುವ ಸಿಂಧೂರವರು ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಒಂದೊಂದು ದಿನ ಮಧ್ಯಾಹ್ನದ ಊಟವನ್ನು ಸಹ ಮಾಡದೆ ಬಂದವರಿಗೆ ತಾಳ್ಮೆಯಿಂದ ಉತ್ತರ ನೀಡುತ್ತಾ ಸೇವೆ ಸಲ್ಲಿಸುತ್ತಿದ್ದಾರೆ ಇವರ ತಾಳ್ಮೆ ಪರೀಕ್ಷೆಗೆ ಸಾರ್ವಜನಿಕರು ಮೆಚ್ಚಲೇಬೇಕಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…