Categories: Hosanagara News

ಹೊಸನಗರ ತಾಲ್ಲೂಕು ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ | ತಾಲ್ಲೂಕಿನ ಎಲ್ಲ ನಿವೃತ್ತ ನೌಕರರು ಸಂಘಕ್ಕೆ ಸೇರಿ ಸಂಘದ ಬೆಳವಣಿಗೆಗೆ ಸಹಕರಿಸಿ ; ಡಾ|| ದಿನಮಣಿ | Retired Employees


ಹೊಸನಗರ: ತಾಲ್ಲೂಕಿನಲ್ಲಿ ಸಾಕಷ್ಟು ಜನ ಸರ್ಕಾರಿ ನೌಕರಿಯಿಂದ ನಿವೃತ್ತಿ ಪಡೆದಿದ್ದು ಅದರಲ್ಲಿ 10% ನೌಕರರು ನಮ್ಮ ಸಂಘದ ಸದಸತ್ಯ ಪಡೆದಿದ್ದು ಇನ್ನೂ 80% ನಿವೃತ್ತ ನೌಕರರು ಸಂಘದ ಸದಸ್ತವ ಪಡೆದಿಲ್ಲ ಎಲ್ಲರೂ ನಿವೃತ್ತ ನೌಕರರು ಸಂಘದ ಸದಸ್ಯತ್ವ ಪಡೆದು ಸಂಘದ ಏಳಿಗೆಗಾಗಿ ಶ್ರಮಿಸಬೇಕಾಗಿದ್ದು ಎಲ್ಲರೂ ಸಂಘದ ಸದಸ್ಯತ್ವ ಪಡೆಯಬೇಕೆಂದು ನಿವೃತ್ತ ಸಂಘದ ಅಧ್ಯಕ್ಷರಾದ ಡಾ|| ದಿನಮಣಿಯವರು ಹೇಳಿದರು.


ಹೊಸನಗರ ನಿವೃತ್ತ ಸಂಘದ ಕಾರ್ಯಾಲಯದಲ್ಲಿ ವಾರ್ಷಿಕ ಮಹಾಸಭೆಯನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತನಾಡಿ, ನಾವು ತಿಂಗಳ ಸಭೆ ಅಥವಾ ವಿಶೇಷ ಸಭೆಗಳನ್ನು ಕರೆದಾಗ ಕೇವಲ ಬೆರಳೆಣಿಕೆಯ ಸದಸ್ಯರು ಬರುತ್ತಾರೆ ನಾವು ಯಾವುದೇ ನಿರ್ಣಯಗಳನ್ನು ತೆಗೆದುಕೊಳ್ಳಲು ಸಾದ್ಯವಾಗುವುದಿಲ್ಲ ಸಂಘದ ಅಧಿನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬೆಂಬಲ ಬಲೆ ಇರುತ್ತದೆ ಆದರೆ ಸದಸ್ಯರ ಬಲ ಹೆಚ್ಚಿರಬೇಕು ನಮ್ಮ ಸಂಘದ ಸದಸ್ಯರ ಸಂಖ್ಯೆ ಹೆಚ್ಚಿಸಿದಷ್ಟು ಸರ್ಕಾರದ ಸೌಲತ್ತು ಪಡೆಯಲು ಸಾಧ್ಯ ಆದ್ದರಿಂದ ಸಂಘದ ಸದಸ್ಯರ ಬಲ ಹೆಚ್ಚಿಸಿಕೊಳ್ಳುವ ಅಗತ್ಯವಿರುವುದರಿಂದ ನಮ್ಮ ಸಂಘದ ಸದಸ್ಯರು ನಿವೃತ್ತ ನೌಕರರ ಮನೆ-ಮನೆಗೆ ಭೇಟಿ ನೀಡಿ ನಿವೃತ್ತ ನೌಕರರನ್ನು ಸೆಳೆಯುವ ಪ್ರಯತ್ನಿಸಿ ಎಂದರು.


ಈ ಸಭೆಯಲ್ಲಿ ಕೆ. ಸತ್ಯನಾರಾಯಣ, ಹೆಚ್.ಆರ್ ಶೇಷಾಚಲ, ಎನ್.ಪಿ ಶಂಕರನಾರಾಯಣ, ಹನುಮಂತಪ್ಪ, ಅನಂತಭಟ್, ಕನಕಮ್ಮ, ಕೆ. ಮಂಜಪ್ಪ, ರಾಮಚಂದ್ರರಾವ್, ಪದ್ಮಾವತಿಯವರನ್ನು ಸನ್ಮಾನಿಸಲಾಯಿತು.


ಈ ಸಮಾರಂಭವನ್ನು ಪಟ್ಟಣ ಪಂಚಾಯತಿ ಅಧ್ಯಕ್ಷೆ ಗುಲಾಬಿ ಮರಿಯಪ್ಪನವರು ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಡಿ.ಎಂ. ಚಂದ್ರಶೇಖರ, ಕಾರ್ಯದರ್ಶಿ ಬಿ.ಎನ್ ಅನಂತಪದ್ಮನಾಭ, ಶಾರದ ಗೋಖಲೆ, ಹೆಚ್.ಆರ್ ಮಹಾಬಲ, ಎನ್ ರಂಗನಾಥ್, ಕುಮಾರ ಸ್ವಾಮಿ ಇನ್ನೂ ಮುಂತಾದವರು ಆಗಮಿಸಿದ್ದರು.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

10 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

11 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

12 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

13 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

15 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

17 hours ago