Categories: Hosanagara News

ಹೊಸನಗರ ತಾಲ್ಲೂಕು ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ | ತಾಲ್ಲೂಕಿನ ಎಲ್ಲ ನಿವೃತ್ತ ನೌಕರರು ಸಂಘಕ್ಕೆ ಸೇರಿ ಸಂಘದ ಬೆಳವಣಿಗೆಗೆ ಸಹಕರಿಸಿ ; ಡಾ|| ದಿನಮಣಿ | Retired Employees


ಹೊಸನಗರ: ತಾಲ್ಲೂಕಿನಲ್ಲಿ ಸಾಕಷ್ಟು ಜನ ಸರ್ಕಾರಿ ನೌಕರಿಯಿಂದ ನಿವೃತ್ತಿ ಪಡೆದಿದ್ದು ಅದರಲ್ಲಿ 10% ನೌಕರರು ನಮ್ಮ ಸಂಘದ ಸದಸತ್ಯ ಪಡೆದಿದ್ದು ಇನ್ನೂ 80% ನಿವೃತ್ತ ನೌಕರರು ಸಂಘದ ಸದಸ್ತವ ಪಡೆದಿಲ್ಲ ಎಲ್ಲರೂ ನಿವೃತ್ತ ನೌಕರರು ಸಂಘದ ಸದಸ್ಯತ್ವ ಪಡೆದು ಸಂಘದ ಏಳಿಗೆಗಾಗಿ ಶ್ರಮಿಸಬೇಕಾಗಿದ್ದು ಎಲ್ಲರೂ ಸಂಘದ ಸದಸ್ಯತ್ವ ಪಡೆಯಬೇಕೆಂದು ನಿವೃತ್ತ ಸಂಘದ ಅಧ್ಯಕ್ಷರಾದ ಡಾ|| ದಿನಮಣಿಯವರು ಹೇಳಿದರು.


ಹೊಸನಗರ ನಿವೃತ್ತ ಸಂಘದ ಕಾರ್ಯಾಲಯದಲ್ಲಿ ವಾರ್ಷಿಕ ಮಹಾಸಭೆಯನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮತನಾಡಿ, ನಾವು ತಿಂಗಳ ಸಭೆ ಅಥವಾ ವಿಶೇಷ ಸಭೆಗಳನ್ನು ಕರೆದಾಗ ಕೇವಲ ಬೆರಳೆಣಿಕೆಯ ಸದಸ್ಯರು ಬರುತ್ತಾರೆ ನಾವು ಯಾವುದೇ ನಿರ್ಣಯಗಳನ್ನು ತೆಗೆದುಕೊಳ್ಳಲು ಸಾದ್ಯವಾಗುವುದಿಲ್ಲ ಸಂಘದ ಅಧಿನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬೆಂಬಲ ಬಲೆ ಇರುತ್ತದೆ ಆದರೆ ಸದಸ್ಯರ ಬಲ ಹೆಚ್ಚಿರಬೇಕು ನಮ್ಮ ಸಂಘದ ಸದಸ್ಯರ ಸಂಖ್ಯೆ ಹೆಚ್ಚಿಸಿದಷ್ಟು ಸರ್ಕಾರದ ಸೌಲತ್ತು ಪಡೆಯಲು ಸಾಧ್ಯ ಆದ್ದರಿಂದ ಸಂಘದ ಸದಸ್ಯರ ಬಲ ಹೆಚ್ಚಿಸಿಕೊಳ್ಳುವ ಅಗತ್ಯವಿರುವುದರಿಂದ ನಮ್ಮ ಸಂಘದ ಸದಸ್ಯರು ನಿವೃತ್ತ ನೌಕರರ ಮನೆ-ಮನೆಗೆ ಭೇಟಿ ನೀಡಿ ನಿವೃತ್ತ ನೌಕರರನ್ನು ಸೆಳೆಯುವ ಪ್ರಯತ್ನಿಸಿ ಎಂದರು.


ಈ ಸಭೆಯಲ್ಲಿ ಕೆ. ಸತ್ಯನಾರಾಯಣ, ಹೆಚ್.ಆರ್ ಶೇಷಾಚಲ, ಎನ್.ಪಿ ಶಂಕರನಾರಾಯಣ, ಹನುಮಂತಪ್ಪ, ಅನಂತಭಟ್, ಕನಕಮ್ಮ, ಕೆ. ಮಂಜಪ್ಪ, ರಾಮಚಂದ್ರರಾವ್, ಪದ್ಮಾವತಿಯವರನ್ನು ಸನ್ಮಾನಿಸಲಾಯಿತು.


ಈ ಸಮಾರಂಭವನ್ನು ಪಟ್ಟಣ ಪಂಚಾಯತಿ ಅಧ್ಯಕ್ಷೆ ಗುಲಾಬಿ ಮರಿಯಪ್ಪನವರು ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಡಿ.ಎಂ. ಚಂದ್ರಶೇಖರ, ಕಾರ್ಯದರ್ಶಿ ಬಿ.ಎನ್ ಅನಂತಪದ್ಮನಾಭ, ಶಾರದ ಗೋಖಲೆ, ಹೆಚ್.ಆರ್ ಮಹಾಬಲ, ಎನ್ ರಂಗನಾಥ್, ಕುಮಾರ ಸ್ವಾಮಿ ಇನ್ನೂ ಮುಂತಾದವರು ಆಗಮಿಸಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago