ಹೊಸನಗರ: ಪಟ್ಟಣದ ವೀರಶೈವ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಶುಕ್ರವಾರ ಹೊಸನಗರ ತಾಲ್ಲೂಕು ಮಲೆನಾಡು ಅಡಿಕೆ ಮತ್ತು ತೋಟಗಾರಿಕಾ ಬೆಳೆಗಳ ಖರೀದಿ ಪರಿಷ್ಕರಣೆ ಮತ್ತು ಮಾರಾಟ ಸಹಕಾರಿ ಸಂಘದ ಸಹಕಾರ ಇಲಾಖೆಯ ಇಲಾಖಾಧಿಕಾರಿಗಳಾದ ನವೀನ್ರವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು.
ಹೊಸನಗರ ತಾಲ್ಲೂಕು ಮಲೆನಾಡು ಅಡಿಕೆ ಮತ್ತು ತೋಟಗಾರಿಕಾ ಬೆಳೆಗಳ ಖರೀದಿ ಪರಿಷ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ವೀರಶೈವ ಪತ್ತಿನ ಸಹಕಾರಿ ಸಂಸ್ಥೆಯಲ್ಲಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ಸಾಕಷ್ಟು ಅನುಭವ ಹೊಂದಿರುವ ಜೊತೆಗೆ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನಂಜುಂಡಪ್ಪ ಹೆಚ್.ಪಿ ಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಟಿ.ರಾಜಪ್ಪ ಗೌಡರವರು ಆಯ್ಕೆಯಾಗಿದ್ದು ಉಳಿದಂತೆ ನಿರ್ದೇಶಕರಾಗಿ ನಾಗರಾಜ್ ಹರತಾಳು, ಸಿದ್ಧವೀರಪ್ಪ, ಶೇಖರಪ್ಪ, ಈಶ್ವರಪ್ಪ ಗೌಡ, ಶಿವಾನಂದ ಹೆಚ್, ಜ್ಯೋತಿ ಪ್ರಶಾಂತ್, ಮಮತಾ ಚಂದ್ರಶೇಖರ್, ಡಿ.ಈ ಮಧುಸೂಧನ್, ಬಿ.ಹೆಚ್. ಬಸಪ್ಪನವರು ಅವಿರೋಧವಾಗಿ ಆಯ್ಕೆಯಾದರು.
ಅಡಿಕೆ ಬೆಳೆಗಾರರ ಮತ್ತು ರೈತರ ಪರವಾಗಿ ನಮ್ಮ ಸಂಸ್ಥೆ ನಿಲ್ಲುತ್ತದೆ:
ತಾಲ್ಲೂಕಿನಲ್ಲಿ ಮಲೆನಾಡು ಭಾಗಗಳಲ್ಲಿ ಎಲೆಚುಕ್ಕಿ ರೋಗದಿಂದ ಅಡಿಕೆ ಮರಗಳು ಸತ್ತು ಹೋಗುತ್ತಿದೆ ಇದರ ಜೊತೆ ಅಡಿಕೆ ಮರಗಳಲ್ಲಿ ಅಡಿಕೆ ಕಾಯಿಗಳು ಕಡಿಮೆ ಪ್ರಮಾಣದಲ್ಲಿ ಇರುವುದರಿಂದ ಅಡಿಕೆ ಬೆಳೆಗಾರರು ಈ ವರ್ಷ ತುಂಬಾ ನಷ್ಟ ಮತ್ತು ಕಷ್ಟದಲ್ಲಿದ್ದಾರೆ. ಇವರಿಗೆ ಸೂಕ್ತ ನ್ಯಾಯ ಕೊಡಿಸುವ ಉದ್ದೇಶದಿಂದ ಈ ಸಂಸ್ಥೆಯನ್ನು ತೆರೆಯಲಾಗಿದೆ ಹೊಸನಗರ ತಾಲ್ಲೂಕಿನ ಎಲ್ಲ ಅಡಿಕೆ ಬೆಳೆಗಾರರು ಮತ್ತು ತೋಟಗಾರಿಕಾ ಬೆಳೆಗಾರರು ನಮ್ಮ ಸಂಸ್ಥೆಯ ಉಪಯೋಗವನ್ನು ಪಡೆದುಕೊಳ್ಳಬೇಕೆಂದರು.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…