Categories: Hosanagara News

ಹೊಸನಗರ ; ಪ.ಪಂ. ವ್ಯಾಪ್ತಿಯಲ್ಲಿ ನಲ್ಲಿ ನೀರಿನ ಕಂದಾಯ ಕಡಿಮೆ ಮಾಡಿ ಬಡವರನ್ನು ಉಳಿಸಿ


ಹೊಸನಗರ: ಇಲ್ಲಿನ ಪಟ್ಟಣ ಪಂಚಾಯತಿ ಮಟ್ಟದಲ್ಲಿ ಸುಮಾರು 1600 ಸಾವಿರ ಮನೆಗಳಿವೆ ಅದರಲ್ಲಿ ಸುಮಾರು 1149 ಮನೆಗಳಿಗೆ ಪಟ್ಟಣ ಪಂಚಾಯಿತಿಯಿಂದ ನಲ್ಲಿಯ ನೀರಿನ ಕನೆಕ್ಷನ್ ಪಡೆದಿದ್ದು ಪ್ರತಿ ವರ್ಷ 1800 ರೂಪಾಯಿಗಳನ್ನು ನೀರಿನ ಕಂದಾಯದ ರೂಪದಲ್ಲಿ ಹಣ ಪಟ್ಟಣ ಪಂಚಾಯಿತಿಗೆ ಸಂದಾಯವಾಗುತ್ತಿದೆ. ಇಷ್ಟು ವರ್ಷ ಹೇಗೋ ಕಳೆದು ಹೋಗಿದೆ ಆದರೆ ಈ ವರ್ಷ ಮಾರ್ಚ್, ಏಪ್ರಿಲ್ ತಿಂಗಳಿಂದ 11 ವಾರ್ಡ್‌ಗಳಿಗೆ ಎರಡು ದಿನಕ್ಕೂಮ್ಮೆ ನೀರು ಸರಬರಾಜು ಮಾಡುತ್ತಿದ್ದಾರೆ ಪಟ್ಟಣ ಪಂಚಾಯಿತಿ ಅಧಿಕಾರಿಗಳನ್ನು ಹಾಗೂ 11 ವಾರ್ಡ್ ಸದಸ್ಯರನ್ನು ಕೇಳಿದರೆ ಹೊಳೆಯಲ್ಲಿ ನೀರು ಇಲ್ಲದ ಕಾರಣ 11 ವಾರ್ಡ್‌ಗಳಿಗೆ ನೀರಿನ ಕೊರತೆ ಇರುವುದರಿಂದ ಎರಡು ದಿನಕ್ಕೂಮ್ಮೆ ವಾರ್ಡ್‌ಗಳಿಗೆ ನೀರು ಹಂಚಿಕೆ ಮಾಡಲಾಗುತ್ತದೆ ಎಂದು ಹೇಳುತ್ತಿದ್ದಾರೆ ಇದರ ಜೊತೆಗೆ ಹೊಸನಗರ ಪಟ್ಟಣ ವ್ಯಾಪ್ತಿಯಲ್ಲಿ ವಿದ್ಯುತ್ ಸಹ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ.

ವಿದ್ಯುತ್ ಕಣ್ಣಾಮುಚ್ಚಾಲೆಯಾದ ದಿನ ನಲ್ಲಿಯಲ್ಲಿ ನೀರು ಬರುವುದಿಲ್ಲ. ಹೊಸನಗರ ಪಟ್ಟಣದಲ್ಲಿ ನೀರಿನ ಸಮಸ್ಯೆ ಉದ್ಬವವಾಗುತ್ತಿದ್ದು ಮಳೆಗಾಲವೂ ಆರಂಭವಾಗದೇ ಇರುವುದರಿಂದ ಮುಂದಿನ ದಿನದಲ್ಲಿ ಪಟ್ಟಣದಲ್ಲಿ ಮಹಿಳೆಯರಿಂದ ಖಾಲಿ ಕೊಡ ಪ್ರದರ್ಶನವಾದರೂ ಆಶ್ಚರ್ಯಪಡಬೇಕಾಗಿಲ್ಲ.

ಹೊಸನಗರ ಪಟ್ಟಣದಲ್ಲಿ ಬಡವರು ಮತ್ತು ಮಧ್ಯಮ ವರ್ಗದವರು ಹೆಚ್ಚು ವಾಸಿಸುತ್ತಿರುವುದರಿಂದ ಒಂದು ಹೊತ್ತು ಊಟ ಮಾಡಲು ಪರದಾಟ ನಡೆಸುತ್ತಿರುವುದರಿಂದ ಜಿಲ್ಲಾಧಿಕಾರಿಗಳು, ಪಟ್ಟಣ ಪಂಚಾಯತಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಪಟ್ಟಣ ಪಂಚಾಯತಿಯ ಅಧ್ಯಕ್ಷ, ಸದಸ್ಯರುಗಳು ಹೊಸನಗರ ಪಟ್ಟಣದ ಜನತೆಯ ಪರವಾಗಿ ನಿಂತು ತಿಂಗಳಿಗೆ 14-15ದಿನಗಳು ಮಾತ್ರ ನಲ್ಲಿಯ ನೀರು ಸರಬರಾಜು ಮಾಡುತ್ತಿರುವುದರಿಂದ ಮೂರು ತಿಂಗಳ ಮಟ್ಟಿಗೆ ಅರ್ಧ ಅಂದರೆ ತಿಂಗಳಿಗೆ 90 ರೂಪಾಯಿಗಳನ್ನು ಪಡೆಯಬೇಕೆಂದು ಪಟ್ಟಣ ಪಂಚಾಯತಿಗೆ ಸಾರ್ವಜನಿಕರು ಈ ಮೂಲಕ ಮನವಿ ಮಾಡಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

6 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

6 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

8 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

9 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

16 hours ago