ಹೊಸನಗರ: ತಾಲೂಕಿನಲ್ಲಿ ಸತತ ಎರಡನೇ ಬಾರಿ ಅದ್ದೂರಿ ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನ ಆಯೋಜನೆ ಮಾಡಿದ್ದು, ಈ ಕ್ರೀಡಾಕೂಟದಲ್ಲಿ ರಾಜ್ಯ ಹಾಗೂ ರಾಷ್ಟ ಮಟ್ಟದ ಆಟಗಾರರು ಭಾಗವಹಿಸುತ್ತಿರುವುದು ಕ್ರೀಡಾಕೂಟಕ್ಕೆ ಮತ್ತಷ್ಟು ಮೆರಗು ನೀಡಿದೆ.
ಪಂದ್ಯಾವಳಿಯು ಹೊನಲು ಬೆಳಕಿನ ವ್ಯವಸ್ಥೆಯಲ್ಲಿ ನಡೆಯಲಿದ್ದು, ಪಂದ್ಯಾಟದ ನೇರ ಪ್ರಸಾರವನ್ನ ರಾಜ್ಯದ ಪ್ರಸಿದ್ಧ ಕ್ರೀಡಾ ಯೂಟ್ಯೂಬ್ ಚಾನೆಲ್ M sports ನಲ್ಲಿ ನೇರ ವೀಕ್ಷಣೆ ಮಾಡಬಹುದಾಗಿದೆ.
ಪಂದ್ಯಾವಳಿಯೂ ಫೆಬ್ರವರಿ 23 ರಿಂದ 4 ದಿನಗಳ ಕಾಲ ತಾಲೂಕಿನ ನೆಹರು ಮೈದಾನದಲ್ಲಿ ಜರುಗಲಿದ್ದು ಉದ್ಘಾಟನಾ ಪಂದ್ಯಾಟವನ್ನ ಹೊಸನಗರದ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಭಾರತಿ ತೀರ್ಥ ಮಹಾಸ್ವಾಮಿಗಳು ಹಾಗೂ ಮಳಲಿ ಮಠದ ಶ್ರೀಗಳು ನೆರವೇರಿಸಲಿದ್ದಾರೆ.
ಸೆಲೆಬ್ರಿಟಿಗಳಿಂದ ಶುಭಾಶಯಗಳ ಮಹಾಪೂರ:
ದಿಯಾ ಸಿನಿಮಾ ಖ್ಯಾತಿಯ ಖುಷಿ ರವಿ, ಕಾಂತಾರಾ ಸಿನಿಮಾದ ದೀಪಕ್ ರೈ, ಪವರ್ ಟಿವಿ ನಿರೂಪಕಿ ಮೊದಲಾದವರು ಕ್ರೀಡಾಕೂಟಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಕ್ರೀಡಾರಸಿಕರ ನೆಚ್ಚಿನ ವೀಕ್ಷಕ ವಿವರಣೆ:
ವಿಶೇಷವಾಗಿ ವೀಕ್ಷಕ ವಿವರಣೆಯಲ್ಲಿ ರಾಜ್ಯಮಟ್ಟದಲ್ಲಿ ಹೆಸರು ವಾಸಿಯಾದ ಪ್ರಶಾಂತ್ ಅಂಬಲಪಾಡಿ, ವಿನಯ್ ಉದ್ಯವಾರ್ ಪ್ರವೀಣ್ ಆಚಾರ್ ಅವರ ಮೋಹಕ ಮಾತಿನ ವೈಖರಿ ಕ್ರೀಡಾಕೂಟಕ್ಕೆ ಇನ್ನಷ್ಟು ಕೂತೂಹಲ ಹೆಚ್ಚಿಸಿದೆ.
ಪ್ರೇಕ್ಷಕರ ಅಚ್ಚು ಮೆಚ್ಚಿನ ಸೆಲೆಬ್ರಿಟಿ ತೀರ್ಪುಗಾರ:
ತನ್ನ ವಿಶಿಷ್ಟ ಶೈಲಿಯಿಂದ ಕ್ರೀಡಾಂಗಣ ತೀರ್ಪುಗಾರರಾಗಿ ಕ್ರಿಕೆಟ್ ರಸಿಕರ ಪ್ರೇಕ್ಷಕರ ಗಮನ ಸೆಳೆಯುವ ಮದನ್ ಮಡಿಕೇರಿ ಅವರು ಭಾಗವಹಿಸುತ್ತಿರುವುದು ಗಮನಾರ್ಹ ಸಂಗತಿ ಆಗಿದೆ. ಇವರೊಟ್ಟಿಗೆ ಪ್ರಶಾಂತ್ ಗೋಪಾಡಿ, ಭರತ್ ಶೆಟ್ಟಿ ಸಹ ಭಾಗವಹಿಸುತ್ತಿದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
ಹೊಸನಗರ ಬ್ರದರ್ ಎರಡನೇ ವರ್ಷ ಸಹ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜನೆ ಮಾಡಿದ್ದು ರಾಜ್ಯ ಮಟ್ಟದ ಮುಕ್ತ ಟೆನ್ನಿಸ್ ಕ್ರಿಕೆಟ್ ಪಂದ್ಯದಲ್ಲಿ ರಾಜ್ಯದ ಅಗ್ರಗಣ್ಯ ತಂಡಗಳು ಭಾಗವಹಿಸಲಿದ್ದು ಕ್ರೀಡಾಭಿಮಾನಿಗಳು ಕ್ರಿಕೆಟ್ ಪ್ರೇಮಿಗಳು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಆಯೋಜಕರು ತಿಳಿಸಿದ್ದಾರೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…