Categories: Hosanagara News

ಹೊಸನಗರ ; ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್


ಹೊಸನಗರ: ತಾಲ್ಲೂಕು ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಲೆಯ ಎಸ್‌ಡಿಎಂಸಿಯವರು ತೊಂದರೆ ನೀಡುತ್ತಿದ್ದಾರೆ ಹಾಗೂ ಹಿರೇಮೈಥೆ ಶಾಲೆಯಲ್ಲಿ ಬಿಸಿಯೂಟ ಕಾರ್ಯಕರ್ತೆಯನ್ನು ವಜಾ ಮಾಡಿದ್ದಾರೆ ಎಂಬ ಕಾರಣದಿಂದ ಜೂ.16 ರಂದು ಪಟ್ಟಣದ ನೆಹರು ಮೈದಾನದಿಂದ ಶಿಕ್ಷಣಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನೆ ಹಾಗೂ ಶಿಕ್ಷಣಾಧಿಕಾರಿಗಳ ಕಛೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದು ಆದರೆ ಮುಂದೆ ಬಿಸಿಯೂಟ ಕಾರ್ಮಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಅಧಿಕಾರಿಗಳ ತಂಡ ನೋಡಿಕೊಳ್ಳುವ ಆಶ್ವಾಸನೆ ಮೇರೆಗೆ ಪ್ರತಿಭಟನೆ ಮತ್ತು ಧರಣಿಯನ್ನು ವಾಪಸ್ ಪಡೆಯಲಾಗಿದೆ ಎಂದು ಜಿಲ್ಲಾ ಅಧ್ಯಕ್ಷೆ ಅಕ್ಕಮ್ಮ ಜಿ.ಜಿ ಹಾಗೂ ಪ್ರದಾನ ಕಾರ್ಯದರ್ಶಿ ಪರಮೇಶ್ವರ ಕೆ ಹೊಸಕೊಪ್ಪರವರು ತಿಳಿಸಿದ್ದಾರೆ.


ಅವರು ಸುದ್ಧಿಗಾರರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕು ಪಂಚಾಯತಿ ಆವರಣದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು ಅಕ್ಷರ ದಾಸೋಹ ನೋಡಲ್ ಅಧಿಕಾರಿ ಅನ್ಸಾರಿ ಬೇಗಂ, ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ತಾಲ್ಲೂಕು ಅಕ್ಷರ ದಾಸೋಹ ಸಂಯೋಜನಾಧಿಕಾರಿ ಅಧಿಕಾರಿ ನಾಗರಾಜ್ ಸಿ ಇವರು ಸಂಘಟನೆಯೊಂದಿಗೆ ಸಭೆ ನಡೆಸಿ ಕಾನೂನಾತ್ಮಕವಾಗಿ ಯಾವುದೇ ತಪ್ಪಿರದ ಕಾರಣ ಏಕಾಏಕಿ ಬಿಯೂಟ ಕಾರ್ಮಿಕರನ್ನು ನಾವು ತೆಗೆಯುವುದಿಲ್ಲ ಹಾಗೂ ಎಸ್‌ಡಿಎಂಸಿಯವರಿಗೆ ಅಧಿಕಾರಿ ಮಟ್ಟದಲ್ಲಿ ತಿಳಿ ಹೇಳುವುದಾಗಿ ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುತ್ತೇವೆ ಎಂಬ ಭರವಸೆಯ ಮೇರೆಗೆ ಧರಣಿ ಹಾಗೂ ಪ್ರತಿಭಟನೆಯನ್ನು ವಾಪಸ್ಸು ಪಡೆದಿರುವುದಾಗಿ ತಿಳಿಸಿದರು.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

12 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

13 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

13 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

15 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

17 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

19 hours ago