Categories: Hosanagara News

ಹೊಸನಗರ ; ಮಳೆ ಅಬ್ಬರ ಜೋರು, ಕೈಕೊಟ್ಟ ಕರೆಂಟ್ !

ಹೊಸನಗರ: ಕಳೆದ ಕೆಲ ದಿನಗಳಿಂದ ಚುರುಕು ಕಾಣದ ಮಳೆ ಮಂಗಳವಾರದಿಂದ ತಾಲೂಕಿನಾದ್ಯಂತ ಭರ್ಜರಿಯಾಗಿ ಸುರಿಯುತ್ತಿದ್ದು ರೈತರು ಹೊಸ-ಗದ್ದೆಗಳತ್ತ ಮುಖ ಮೂಡಿದ್ದು ಭತ್ತದ ನಾಟಿ ಕಾರ್ಯ ಚುರುಕುಗೊಂಡಿದೆ.

ನಿನ್ನೆ ಸಂಜೆಯಿಂದ ಮತ್ತಷ್ಟು ಮಳೆ ಜೋರಾಗಿ ಸುರಿಯುತ್ತಿದ್ದು ತಾಲ್ಲೂಕಿನ ಘಟ್ಟ ಪ್ರದೇಶವಾದ ನಗರ ಹೋಬಳಿ ಮತ್ತು ಹುಂಚ ಹೋಬಳಿಯಲ್ಲಿ ಶೀತಗಾಳಿಯೊಂದಿಗೆ ದೋ… ಎಂದು ಒಂದೇ ಸಮನೆ ಮಳೆ ಸುರಿಯುತ್ತಿದೆ. ತಾಲ್ಲೂಕಿನ ಜಲಾನಯನ ಪ್ರದೇಶವಾದ ಮಾಣಿ, ಯಡೂರು, ಸಾವೇಹಕ್ಲು, ಚಕ್ರಾ, ಹುಲಿಕಲ್ಲುವಿನಲ್ಲಿ ಮಳೆಯ ಬಿರುಸು ಹೆಚ್ಚಿದೆ.

ತಾಲ್ಲೂಕಿನ ಯಡೂರು, ಹುಲಿಕಲ್, ನಗರ, ನಿಟ್ಟೂರು, ಮಾಸ್ತಿಕಟ್ಟೆ, ಸಂಪೆಕಟ್ಟೆ, ಕಾರಣಗಿರಿ, ಸೊನಲೆ, ಕೋಡೂರು, ಹಿಲ್ಕುಂಜಿ, ತ್ರಿಣಿವೆ ಗರ್ತಿಕೆರೆ, ಹುಂಚ, ರಿಪ್ಪನ್‌ಪೇಟೆ ಭಾಗದಲ್ಲಿ ಉತ್ತಮ ಮಳೆ ಆಗಿದೆ.

ನಗರ ಹೋಬಳಿ ಪ್ರದೇಶದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಜಲಾಶಯಗಳ ಒಳಹರಿವು ಹೆಚ್ಚುತ್ತಿದೆ. ಮಾಣಿ, ಸಾವೇಹಕ್ಲು, ಚಕ್ರಾ ಜಲಾಶಯಗಳ ನೀರಿನ ಮಟ್ಟ ಏರುತ್ತಿದೆ.

ತಾಲ್ಲೂಕಿನಲ್ಲಿ ಗಾಳಿ, ಮಳೆಯಿಂದಾಗಿ 150ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. 5 ವಿದ್ಯುತ್ ಪರಿವರ್ತಕಗಳಿಗೆ ಹಾನಿ ಆಗಿದೆ. ಗ್ರಾಮೀಣ ಭಾಗಗಳಲ್ಲಿ ಕಳೆದೆರಡು ದಿನಗಳಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago