ಹೊಸನಗರ: ಪಟ್ಟಣದ ಹಳೇ ಸಾಗರ ರಸ್ತೆಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಬೃಂದಾವನದಲ್ಲಿ ಇಂದು ರಾಘವೇಂದ್ರ ಸ್ವಾಮಿಗಳವರ 352ನೇ ಆರಾಧನಾ ಮಹೋತ್ಸವವನ್ನು ಅದ್ದೂರಿ ನಡೆಯಿತು..
ಬೆಳಿಗ್ಗೆ 6ಗಂಟೆಗೆ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗಿದ್ದು ಅಷ್ಟೋತ್ತರ, ಪಂಚಾಮೃತಾಭಿಷೇಕ, ಅಲಂಕಾರ ಸೇವೆ, ಹಸ್ತೋದಕ, ಮಧ್ಯಾಹ್ನ 12ಗಂಟೆಗೆ ಮಹಾ ಮಂಗಳಾರತಿ, 1ಗಂಟೆಗೆ ಸಾಮೂಹಿಕ ಅನ್ನ ಸಂತರ್ಪಣೆ ಕಾರ್ಯಕ್ರಮವು ನಡೆಸಲಾಯಿತು.
ಪಾರ್ವತಿ ಗಣಪತಿ ಮಹೇಶ್ವರ ಸಮಿತಿಯ ಅಧ್ಯಕ್ಷರಾದ ಕನಕರಾಜುರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ರಾತ್ರಿ 7ಗಂಟೆಗೆ ಪಲ್ಲಕ್ಕಿ ಉತ್ಸವ ನಂತರ ಮಂಗಳಾರತಿ ರಾತ್ರಿ 8ಗಂಟೆಗೆ ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆಯಿತು.
ಶ್ರೀರಾಘವೇಂದ್ರ ಸ್ವಾಮಿಗಳ ಭಕ್ತಾರು ಹೊಸನಗರದ ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಆರಾಧನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಟ್ಟರು.
ದೇವಸ್ಥಾನದ ಆವರಣದಲ್ಲಿ ಹೂವಿನ ಅಲಂಕಾರ ಮಾಡಲಾಗಿದ್ದು ರಾಘವೇಂದ್ರ ಸ್ವಾಮಿಗಳಿಗೆ ಪ್ರಿಯವಾದ ತುಳಸಿ ಹಾರವನ್ನು ದೇವರ ಮೂರ್ತಿಗೆ ಹಾಕಲಾಗಿತ್ತು.
ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕಾರಣರಾದ ದೇವರ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಬೃಂದಾವನ ಸಮಿತಿಯ ಅಧ್ಯಕ್ಷರಾದ ವಿಜೇಂದ್ರ ಶೇಟ್ರವರು ಅಭಿನಂದಿಸಿದರು.
ರಾಘವೇಂದ್ರ ಸ್ವಾಮಿಗಳವರ ಬೃಂದಾವನ ಸಮಿತಿಯ ಗೌರವಾಧ್ಯಕ್ಷರಾದ ಉಮೇಶ್ ಕಂಚುಗಾರ್, ಉಪಾಧ್ಯಕ್ಷರಾದ ಚಂದ್ರಶೇಖರ, ಕಾರ್ಯದರ್ಶಿ ರಾಧಾಕೃಷ್ಣ, ಸಹ ಕಾರ್ಯದರ್ಶಿ ರಂಗನಾಥ್, ಖಜಾಂಚಿಗಳಾದ ವಾಸುದೇವ ಪಿ, ನಿರ್ದೇಶಕರುಗಳಾದ ಜಿ. ವಾದಿರಾಜ್ ಭಟ್, ಹಿರಿಯರಾದ ಎನ್.ಆರ್. ದೇವಾನಂದ್, ಬಾಬುರಾವ್, ನವಶಕ್ತಿ ರಮೆಶ್, ಸದಾಶಿವ ಶ್ರೇಷ್ಠಿ, ಸುದೇಶ್ ಕಾಮತ್, ರವಿ ಶೇಟ್, ಗಣೇಶ ಶೇಟ್, ಹರೀಶ ಕೆ.ಆರ್, ಧನಂಜಯ ಮಂಡಾನಿ, ಪ್ರದೀಪ್ಕುಮಾರ್, ಹೆಚ್.ಎಂ ನಿತ್ಯಾನಂದ, ನಾಯಕ್, ಶ್ರೀಧರ ಮಂಡಾನಿ, ಪ್ರಧಾನ ಅರ್ಚಕರಾದ ಟಿ.ಆರ್ ಪ್ರಸನ್ನಭಟ್, ನಾಡ ಹಬ್ಬಗಳ ಸಮಿತಿಯ ಸದಸ್ಯರಾದ ಶ್ರೀಧರ ಉಡುಪ, ಶ್ರೀನಿವಾಸ್ ಕಾಮತ್, ರಾಜಮೂರ್ತಿ ಇನ್ನೂ ಮುಂತಾದವರು ಶ್ರೀ ರಾಘವೇಂದ್ರ ಸ್ವಾಮಿಗಳವರ ಆರಾಧನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…
ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ ! ಚಿಕ್ಕಮಗಳೂರು : ತೋಟದ ಕೆಲಸಕ್ಕೆ…
ಬೆಂಗಳೂರು : ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…
ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…
ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…