Categories: Hosanagara News

ಹೊಸನಗರ ; ಶಾಸಕರ ಮಾದರಿ ಶಾಲೆಯ ಮೂಲ ಸೌಕರ್ಯ ಅಭಿವೃದ್ಧಿಗೆ ಸಚಿವರು ಗಮನ ಹರಿಸಲಿ – ಅಶ್ವಿನಿಕುಮಾರ್

ಹೊಸನಗರ : ಮೂಲಸೌಕರ್ಯ ಕೊರತೆ, ಶಿಕ್ಷಕರ ಕೊರತೆಯ ನಡುವೆಯೂ ಪಟ್ಟಣದ ಶಾಸಕರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉತ್ತಮ ಸಾಧನೆ ಮಾಡುತ್ತಿದೆ. ಪೋಷಕರ ಹಾಗೂ ಶಾಲಾ ಸಮಿತಿಯ ಸಂಘಟನಾತ್ಮಕ ಹೋರಾಟದಿಂದ ಇದು ಸಾಧ್ಯವಾಗಿದೆ. ಸರಕಾರ ಶಾಲೆಗೆ ಅಗತ್ಯಅನುದಾನ ನೀಡಿದಲ್ಲಿ ಶಾಲೆ ಇನ್ನಷ್ಟು ಉತ್ತಮವಾಗಿ ಬೆಳೆಯಬಲ್ಲದು ಎಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಅಶ್ವಿನಿಕುಮಾರ ಹೇಳಿದ್ದಾರೆ.


ಅವರು ಶಾಲೆಯ ಆವರಣದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದರು. ಹತ್ತು ವರ್ಷಗಳ ಹಿಂದೆ ಈ ಶಾಲೆಯಲ್ಲಿ ಕೇವಲ 130 ವಿದ್ಯಾರ್ಥಿಗಳಿದ್ದರು. ಈಗ ಎಲ್‌ಕೆಜಿ, ಯುಕೆಯಲ್ಲಿ 50 ಹಾಗೂ ಒಂದರಿಂದ ಏಳನೇ ತರಗತಿ ವರೆಗೆ 386 ಮಕ್ಕಳು ಓದುತ್ತಿದ್ದಾರೆ. ಪ್ರತಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. ಶಾಲೆಯ ವಿದ್ಯಾಭ್ಯಾಸದ ಗುಣಮಟ್ಟ ನೋಡಿ ಜನಸಾಮಾನ್ಯರು ತಮ್ಮ ಮಕ್ಕಳನ್ನು ದಾಖಲಿಸುತ್ತಿದ್ದಾರೆ. ಶಾಲೆಯ ಈ ಸಾಧನೆಗೆ ಪೋಷಕರು, ದಾನಿಗಳು ಹಾಗೂ ಶಾಲಾಸಮಿತಿಯ ನಿರಂತರ ಸ್ಪಂದನೆಯಿಂದ ಸಾಧ್ಯವಾಗಿದೆ ಎಂದು ಅವರು ಹೇಳಿದರು.


ಶಾಲೆಯಲ್ಲಿ ಒಟ್ಟು 8 ಕೊಠಡಿಗಳು ಕೊರತೆಯಿದೆ. ಮಕ್ಕಳಿಗೆ ಕೂಳಿತುಕೊಳ್ಳಲಲು ಡೆಸ್ಕ್ ಇಲ್ಲದೇ ನೆಲದ ಮೇಲೆ ಕೂರವಂಥಾಗಿದೆ. 50 ವಿದ್ಯಾರ್ಥಿಗಳು ಬಳಸಬಹುದಾದ ಶೌಚಾಲಯವನ್ನು 400 ವಿದ್ಯಾರ್ಥಿಗಳು ಬಸಳಸುವಂತಾಗಿದೆ. ಬಿಸಿಯೂಟ ತಯಾರಿಕೆ ಸಹಾ ಇಕ್ಕಟ್ಟಿನ ಜಾಗದಲ್ಲಿ ನಿರ್ವಹಸಿಬೇಕಾಗಿದೆ. ವರ್ಷದಿಂದ ವರ್ಷಕ್ಕೆ ಶಾಲೆ ಪ್ರಗತಿ ಸಾಧಿಸಿದರೆ ಸರಕಾರ ಹಾಗೂ ಇಲಾಖೆ ಅಧಿಕಾರಿಗಳು ಸಹಾ ಅದಕ್ಕೆ ತಕ್ಕಂತೆ ಸೌಲಭ್ಯಗಳನ್ನು ಒದಗಿಸಬೇಕು. ಇನ್ನೂ ನಮ್ಮ ಶಾಲೆಯ ಐವತ್ತಕ್ಕೂ ಹೆಚ್ಚು ಮಕ್ಕಳಿಗೆ ಪಠ್ಯ ಪುಸ್ತಕವನ್ನೇ ಇಲಾಖೆ ಒದಗಿಸಿಲ್ಲ. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಶಾಲೆಯಕೊರತೆಕುರಿತು ಮನವರಿಕೆ ಮಾಡಲಾಗಿದೆ. ಆದರೆ ಶಾಲೆಯ ಪ್ರಗತಿಗೆ ಅರ‍್ಯಾರೂ ತಲೆಕಡಿಸಿಳ್ಳುತ್ತಿಲ್ಲ ಎಂದು ಆರೋಪಿಸಿದರು.


ಶಾಲಾ ಸಮಿತಿ, ಪೋಷಕರು ಹಾಗೂ ದಾನಿಗಳ ನಿರಂತರ ಕಾಳಜಿಯಿಂದ ಶಾಲೆಯಲ್ಲಿ ನಿರೀಕ್ಷೆಗೂ ಮೀರಿ ಮಕ್ಕಳ ದಾಖಲಾತಿ ಆಗುತ್ತಿದ್ದು ಸೀಮಿತ ಸೌಲಭ್ಯಗಳ ನಡುವೆಯೂ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದಿದೆ. ಎರಡು ಶಾಲಾ ವಾಹನಗಳು ಕಾರ‍್ಯನಿರ್ವಹಿಸುತ್ತಿದ್ದು ಇದರ ಸಂಪೂರ್ಣ ಖರ್ಚು ವೆಚ್ಚವನ್ನು ಪೋಷಕರೇ ಭರಿಸುತ್ತಿದ್ದಾರೆ. ಶಾಸಕರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.ಆದರೆಇದಕ್ಕೆ ಪೂರಕವಾಗಿ ಸ್ಪಂದಿಸಬೇಕಾದ ಶಿಕ್ಷಣ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ದೂರಿದರು.


ಈ ಹಿಂದಿನ ಸರಕಾರದ ಅವಧಿಯಲ್ಲಿಯೂ ಗಮನ ಸೆಳೆದಿದ್ದೇವೆ. ಏನೂ ಉಪಯೋಗ ಆಗಿಲ್ಲ. ಈಗ ಮತ್ತೊಮ್ಮೆ 1 ಕೋಟಿ ರೂ. ಅನುದಾನ ನೀಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಿದ್ದೇವೆ ಎಂದು ಅವರು ಹೇಳಿದರು.


ಗೋಷ್ಠಿಯಲ್ಲಿ ಶಾಲಾ ಸಮಿತಿ ಸದಸ್ಯರಾದ ಪ್ರದೀಪ್, ನಾಸೀರ್, ರಮಲತ್, ಶೈಲಜಾ ಸತ್ಯ ನಾರಾಯಣ, ರಾಘವೇಂದ್ರ, ಪವಿತ್ರಾ ಮತ್ತಿತರರು ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

16 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

20 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

20 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

22 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

23 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago