ಹೊಸನಗರ ; ಸೇತುವೆ ಮೇಲಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ !
ಹೊಸನಗರ: ಹೊಸನಗರ-ಜಯನಗರ ಮಧ್ಯೆ ಇರುವ ಕಲ್ಲುಹಳ್ಳ ಸೇತುವೆ ಮೇಲಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.
ಪಟ್ಟಣದ ದ್ಯಾವರ್ಸ ಸಮೀಪದಲ್ಲಿ ವಾಸವಾಗಿದ್ದ ಮೀನು ರಾಘವೇಂದ್ರ (28) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಎ.ಎಸ್.ಐ ಸುರೇಶ್ ಹಾಗೂ ಸಿಬ್ಬಂದಿಗಳು ಹಾಗೂ ಆಗ್ನಿಶಾಮಕ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ಕಾರ್ಯ ಆರಂಭಿಸಿದ್ದಾರೆ.
ಮೃತರ ತಾಯಿ ಸುಮಿತ್ರಾರವರು ಹೊಸನಗರ ಪೊಲೀಸ್ ಠಾಣೆಯಲ್ಲಿ ನನ್ನ ಮಗನಿಗೆ ಮೂರ್ಛೆ ಕಾಯಿಲೆ ಇದ್ದು ಅದರಿಂದ ಗುಣಮುಖರಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.