Categories: Hosanagara News

12 ರಿಂದ 18 ವರ್ಷದ ಹೆಣ್ಣು ಮಕ್ಕಳನ್ನು ಪೋಷಕರು ಜಾಗೃತಿ ವಹಿಸಬೇಕು ; ನ್ಯಾಯಾಧೀಶೆ ಪುಷ್ಪಲತಾ ಕೆ


ಹೊಸನಗರ: ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸುಗಳು ಹೆಚ್ಚಾಗುತ್ತಿದ್ದು ಇದನ್ನು ನಿಯಂತ್ರಣ ಮಾಡಬೇಕಾದರೆ 12ರಿಂದ 18ವರ್ಷದ ಹೆಣ್ಣು ಮಕ್ಕಳ ಪೋಷಕರು ತಮ್ಮ ಮಕ್ಕಳ ಚಲನ-ವಲನಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡುವುದರ ಜೊತೆಗೆ ಜಾಗೃತಿವಹಿಸಬೇಕೆಂದು ಹಿರಿಯ ವ್ಯವಹಾರ ನ್ಯಾಯಾಲಯದ ನ್ಯಾಯಧೀಶೆ ಪುಷ್ಪಲತಾ ಕೆ. ಹೇಳಿದರು.


ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹೊಸನಗರ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಅಂತರಾಷ್ಟೀಯ ಮಹಿಳಾ ದಿನಾಚರಣೆಯ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಹೆಣ್ಣು ಮಕ್ಕಳ ಕೈಗೆ ಹೆಚ್ಚಾಗಿ ಮೊಬೈಲ್ ಕೊಡಬೇಡಿ ಶಾಲೆ ಕಾಲೇಜಿಗೆ ಹೋಗಿ ಬಂದ ನಂತರ ಪೋಷಕರು ಹೆಣ್ಣು ಮಕ್ಕಳ ಚಲನ-ವಲನಗಳನ್ನು ಗಮನಿಸಬೇಕು 12ರಿಂದ ಸುಮಾರು ಇಪ್ಪತ್ತು ವರ್ಷದವರೆವಿಗೆ ಹೆಣ್ಣು ಮಕ್ಕಳ ಪೋಷಣೆ ಪೂರ್ಣ ಪ್ರಮಾಣದಲ್ಲಿ ಪೋಷಕರು ಜವಾಬ್ದಾರಿ ಹೊಣೆಯನ್ನು ತೆಗೆದುಕೊಂಡು ಉತ್ತಮ ಭವಿಷ್ಯ ರೂಪಿಸುವ ಹೊಣೆ ಪೋಷಕ ವರ್ಗದವರದ್ದಾಗಿರುತ್ತದೆ ಮಹಿಳೆಯರಿಗಾಗಿ ಹಾಗೂ ಹೆಣ್ಣು ಮಕ್ಕಳಿಗಾಗಿ ಸಾಕಷ್ಟು ಕಾನೂನುಗಳನ್ನು ಜಾರಿಗೊಳಿಸಲಾಗಿದೆ ಹೆಣ್ಣು ಮಕ್ಕಳಿಗೆ ತೊಂದರೆಯಾದರೆ ಕಾನೂನು ಪ್ರಾಧಿಕಾರ ನೇಮಿಸಿದ ವಕೀಲರನ್ನು ಸಂಪರ್ಕಿಸಿದರೆ ಫೀಜ್ ಇರುವುದಿಲ್ಲ ಕಾನೂನು ಪ್ರಾಧಿಕಾರದ ಮೂಲಕ ಕಾನೂನು ಸಲಹೆಗಳನ್ನು ಪಡೆಯಬಹುದು ಇದರ ಜೊತೆಗೆ ಮಹಿಳಾ ಸಾಂತ್ವಾನಗಳನ್ನು ಮಹಿಳೆಯರ ನೆರವಿಗೆ ಬರುತ್ತದೆ ಈ ಕಾನೂನು ಸಲಹೆಗಳನ್ನು ಅಂಗನವಾಡಿ ಮಹಿಳೆಯರು ಪಡೆದುಕೊಂಡು ಮನೆ-ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಪ್ರತಿಯೊಬ್ಬ ಮಹಿಳೆಗೂ ತಿಳಿಸಬೇಕು ಕಾನೂನಿನ ಅರಿವು ಮೂಡಿಸಬೇಕು ಎಂದರು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶಶಿರೇಖಾರವರು ವಹಿಸಿ ಮಾತನಾಡಿ, ನಮ್ಮ ಭಾರತ ದೇಶಕ್ಕೆ ಮಹಿಳೆಯರ ಪಾತ್ರ ಬಹು ಮುಖ್ಯವಾಗಿದ್ದು ಈ ದೇಶಕ್ಕೆ ಅಗೌರವ ತರುವ ರೀತಿಯಲ್ಲಿ ನಡೆದುಕೊಳ್ಳಬಾರದು ಮನೆಯಲ್ಲಿ ಕೆಲಸದಲ್ಲಿ ಶಿಸ್ತು ಸಂಯಮದಿಂದ ವರ್ತಿಸಿದರೆ ಮಾತ್ರ ಸುಖ-ಶಾಂತಿ ನೆಮ್ಮದಿಯಿಂದ ಬದುಕಬಹುದೆಂದರು.


ಕಾನೂನು ಸಲಹೆಯ ಬಗ್ಗೆ ವಕೀಲರ ಸಂಘದ ಅಧ್ಯಕ್ಷರಾದ ವಾಲೆಮನೆ ಶಿವಕುಮಾರ್ ಕಾರ್ಯದರ್ಶಿ ಚಂದ್ರಪ್ಪನವರು ಮಹಿಳೆಯರಿಗೆ ಕಾನೂನು ಸಲಹೆಯನ್ನು ನೀಡಿದರು.
ಮುಖ್ಯ ಅತಿಥಿಯಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಶಿಶು ಅಭಿವೃದ್ಧಿ ಇಲಾಖೆಯ ರಾಜು, ನ್ಯಾಯಲಯದ ಶ್ರೀಮತಿ ರೇಖಾ ಹರೀಶ್, ಗುರುರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಹೊಸನಗರ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಕಾನೂನು ಸಲಹೆಯನ್ನು ಪಡೆದರು.


ಪ್ರಾರ್ಥನೆ: ಶ್ರೀಮತಿ ನಾಗರತ್ನ, ಸ್ವಾಗತ ಶ್ರೀಮತಿ ವೀರಮ್ಮ,ವಂದನೆಯನ್ನು ಶ್ರೀಮತಿ ವನಮಾಲರವರು ಮಾಡಿದರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

11 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

13 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

14 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

15 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

16 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

18 hours ago