ಹೊಸನಗರ : ಪಟ್ಟಣದ ಹೊರವಲಯ ಮಾವಿನಕೊಪ್ಪದ ನಿವಾಸಿ ಯಶೋದಮ್ಮ (62) ಎಂಬುವರು ಶುಕ್ರವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ತಮ್ಮ ಮನೆಯ ಹಿಂದಿನ ಬಾವಿಗೆ ಹಾರಿದ್ದು ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳ ಬಾವಿಯಿಂದ ಸಾಹಸದಿಂದ ಮೇಲೆ ಎತ್ತಿ ಪುನರ್ಜನ್ಮ ನೀಡಿದ ಘಟನೆ ಸಂಭವಿಸಿದೆ.
ಯಶೋದಮ್ಮ ಮಾನಸಿಕವಾಗಿ ದುರ್ಬಲರಾಗಿದ್ದು ಮನೆಯಲ್ಲಿ ಸೊಸೆ ಮತ್ತು ಮೊಮ್ಮಕ್ಕಳ ಮಾತ್ರ ಇದ್ದಿದ್ದು ಮನೆಯಲ್ಲಿ ಅತ್ತೆ ಕಾಣದಾದಾಗ ಸೊಸೆ ಮನೆ ಹಿಂಭಾಗವೆಲ್ಲ ಹುಡುಕಿ ಮನೆ ಹಿಂಭಾಗದ ಬಾವಿಗೆ ಮುಚ್ಚಿದ ಕಬ್ಬಿಣದ ಗ್ರಿಲ್ ತೆರೆದಿದ್ದನ್ನು ಕಂಡ ಸೊಸೆ ಬಾವಿ ಬಗ್ಗಿ ನೋಡಿದಾಗ ಅತ್ತೆ ಯಶೋದಮ್ಮ ಬಾವಿಯೊಳಗೆ ಪೈಪ್ ಹಿಡಿದು ನಿಂತಿರುವುದ ಕಂಡು ಭಯಭೀತರಾಗಿ ಆಸುಪಾಸಿನವರನ್ನು ಕೂಗಿ ಕರೆದಿದ್ದು ನಂತರ ತಕ್ಷಣ ಅಗ್ನಿಶಾಮಕದಳಕ್ಕೆ ಫೋನು ಮಾಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು ಯಶೋದಮ್ಮನನ್ನು ಸಾಹಸದಿಂದ ಮೇಲಕ್ಕೆತ್ತಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಬಗ್ಗೆ ತಿಳಿದು ಬಂದಿದೆ.
ಈ ಹಿಂದೆ ಯಶೋದಮ್ಮನ ಪತಿ ದಿನಸಿ ವ್ಯಾಪಾರಿ ಶಂಕರನಾರಾಯಣ ಶೇಟ್ ರವರು ಸಹ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ಕೆ.ಟಿ ರಾಜಪ್ಪ, ಎಚ್.ಡಿ ಸುರೇಶ, ಕೆ. ರವೀಂದ್ರ, ಶಂಕರೇಗೌಡ ಹಾನಗಳ್ಳಿ, ಬಿ.ಸಿ ಆಂಜನೇಯ, ಭೀಷ್ಮಚಾರಿ ಕಮ್ಮಾರ್, ಆರ್. ಮಣಿ ಮತ್ತಿತರರು ಯಶೋದಮ್ಮನನ್ನು ಉಳಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…