Hosanagara | ಭೀಕರ ಅಪಘಾತ, ಅಕ್ಕನ ಮನೆಗೆ ಮಜ್ಜಿಗೆ ಮೆಣಸು ಕೊಡಲು ಹೋಗುತ್ತಿದ್ದ ಯುವಕ ಸ್ಥಳದಲ್ಲೇ ಸಾವು !

0 5,804

ಹೊಸನಗರ : ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ.

ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೈಕ್ ಸವಾರ ಗರ್ತಿಕೆರೆಯ ಕಮ್ಮಚ್ಚಿ ರಸ್ತೆ ನಿವಾಸಿ ಸುಮಂತ್ (25) ಎಂದು ಗುರುತಿಸಲಾಗಿದೆ‌. ಕಳೆದ ಒಂದೂವರೆ ವರ್ಷದ ಹಿಂದೇ ತನ್ನ ಅಕ್ಕಳನ್ನು ಮಾರುತಿಪುರ ಗ್ರಾಪಂ ವ್ಯಾಪ್ತಿಯ ಚಿಕ್ಕಮಣತಿ ಗ್ರಾಮದ ಮುತ್ತೂರಿಗೆ ಮದುವೆ ಮಾಡಿ ಕೊಟ್ಟಿದ್ದು, ಆಕೆಯ ಮನೆಗೆ ಮಜ್ಜಿಗೆ ಮೆಣಸಿನಕಾಯಿ ಕೊಟ್ಟು ಹೋಗುವುದಕ್ಕೆ ಬರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ‌ ಎಂದು ತಿಳಿದುಬಂದಿದೆ‌‌.

ಕಳೆದ ಹಲವು ವರ್ಷಗಳ ಹಿಂದೆ ಅಪ್ಪನನ್ನು ಕಳೆದುಕೊಂಡ ಈತ ತಾಯಿಯೊಂದಿಗೆ ಗರ್ತಿಕೆರೆಯಲ್ಲಿ ವಾಸಿಸುತ್ತಿದ್ದನು. ಇದ್ದೋರ್ವ ಮಗನನ್ನು ಕಳೆದುಕೊಂಡ ತಾಯಿ ಅನಾಥಳಾಗಿದ್ದಾಳೆ‌.

ಹೊಸನಗರ ಪಿಎಸ್‌ಐ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!