ಹೊಸನಗರ (ಮ.ಟೈ): ರಾಜ್ಯದಲ್ಲೇ ಅತ್ಯಧಿಕ ಮಳೆ ಬೀಳುವ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಮಂಗಳವಾರ ಬೆಳಗ್ಗೆಯಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಳೆ ಬಿರುಸುಗೊಂಡಿರುವುದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಭತ್ತ ನಾಟಿ ಮಾಡಲು ಸಸಿ ಮಡಿ ಸಿದ್ಧಪಡಿಸುವುದು, ಗೊಬ್ಬರ ಹಾಕುವ ಕಾರ್ಯದಲ್ಲಿ ರೈತರು ನಿರತರಾಗಿದ್ದಾರೆ.
ತಾಲೂಕಿನ ಮಾಣಿಯಲ್ಲಿ ಬುಧವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ 142 ಮಿಲಿ ಮೀಟರ್ ಅತ್ಯಧಿಕ ಮಳೆ ದಾಖಲಾಗಿದೆ.
ಉಳಿದಂತೆ ಹುಲಿಕಲ್ಲಿನಲ್ಲಿ 127, ಸಾವೆಹಕ್ಲುವಿನಲ್ಲಿ 120, ಚಕ್ರಾನಗರದಲ್ಲಿ 118, ಮಾಸ್ತಿಕಟ್ಟೆಯಲ್ಲಿ 116, ಯಡೂರಿನಲ್ಲಿ 100, ನಗರದಲ್ಲಿ 87 ಮತ್ತು ಹೊಸನಗರದಲ್ಲಿ 48 ಮಿಲಿ ಮೀಟರ್ ಮಳೆ ದಾಖಲಾಗಿದೆ.
1819 ಅಡಿ ಗರಿಷ್ಠ ನೀರಿನ ಮಟ್ಟ ಹೊಂದಿರುವ ಲಿಂಗನಮಕ್ಕಿ ಜಲಾಶಯದ ಇಂದಿನ ನೀರಿನ ಮಟ್ಟ 1742.65 ಅಡಿ ತಲುಪಿದೆ. ಕಳೆದ ವರ್ಷಕ್ಕಿಂತ 20 ಅಡಿ ನೀರು ಸಂಗ್ರಹ ಕಡಿಮೆ ಇದೆ. ಜಲಾಶಯಕ್ಕೆ 9237 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…