Ripponpet | ಗಿಳಿಶಾಸ್ತ್ರ ಹೇಳುತ್ತಿದ್ದ ಇಬ್ಬರ ಬಂಧನ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ

ರಿಪ್ಪನ್‌ಪೇಟೆ : ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ವಿನಾಯಕ್ ರವರ ನೇತೃತ್ವದಲ್ಲಿ ದಾಳಿ ನಡೆಸಿ ಜ್ಯೋತಿಷಿಗಳು ಬಳಸುತ್ತಿದ್ದ ಗುಲಾಬಿ ಉಂಗುರದ ಗಿಳಿ (Rose-ringed parakeet) ಹಿಡಿದು ರಕ್ಷಿಸಿದ್ದು, ಈ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ದಾವಣಗೆರೆ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿರುವ‌ ಮಂಜುನಾಥ್ ಮತ್ತು ಯಲ್ಲಪ್ಪ ಬಂಧಿತ ಆರೋಪಿಗಳು.

ಸೋಮವಾರ ಮಧ್ಯಾಹ್ನ ಅಳಿವಂಚಿನಲ್ಲಿರುವ ಗುಲಾಬಿ ಉಂಗುರದ ಗಿಳಿ (Rose-ringed parakeet) ನ್ನು ಬಳಸಿ ರಿಪ್ಪನ್‌ಪೇಟೆಯ ಕೆರೆಹಳ್ಳಿ ಕ್ರಾಸ್ ಬಳಿಯಲ್ಲಿ ಜ್ಯೋತಿಷ್ಯ ಹೇಳುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಗುಲಾಬಿ ಉಂಗುರದ ಗಿಳಿಗಳು ಅಳಿವಿನಂಚಿನಲ್ಲಿರುವ ಪಕ್ಷಿಯಾಗಿದ್ದು ಸಾಮಾನ್ಯವಾಗಿ ಕಾಡುಗಳಿಂದ ಹಿಡಿಯಲ್ಪಡುತ್ತವೆ. ಅದರ ನಂತರ ಅವುಗಳ ರೆಕ್ಕೆಗಳನ್ನು ಕತ್ತರಿಸಲಾಗುತ್ತದೆ ಮತ್ತು ಕೊಕ್ಕುಗಳನ್ನು ಮೊಂಡು ಮಾಡಲಾಗುತ್ತದೆ. ಗಿಳಿಗಳಿಗೆ ಥಳಿಸಿ ಮತ್ತು ಪಂಜರದಲ್ಲಿ ಉಳಿಯಲು ತರಬೇತಿ ನೀಡಲಾಗುತ್ತದೆ. ಸಿಗ್ನಲ್ ನೀಡಿದಾಗ ಹೊರಬರಲು, ಜ್ಯೋತಿಷ್ಯ ಕಾರ್ಡ್ ಅನ್ನು ಆರಿಸಿ ಮತ್ತು ಕಾರ್ಡ್ ಅನ್ನು ಮಾಲೀಕರಿಗೆ ನೀಡಿದ ನಂತರ ಮತ್ತೆ ಪಂಜರಕ್ಕೆ ಹೋಗುತ್ತದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ ಅಳಿವಿನಂಚಿನಲ್ಲಿರುವ ಗುಲಾಬಿ ಉಂಗುರದ ಗಿಳಿಗಳನ್ನು ಹಿಂಸಿಸುವುದು ಇತ್ಯಾದಿಗಳು ಕಾನೂನಿನ ಪ್ರಕಾರ ಅಪರಾಧಗಳಾಗಿವೆ.

ಸಾವಿರಾರು ಜನರಿಗೆ ಜ್ಯೋತಿಷ್ಯ ಹೇಳುವ ಗಿಳಿ ಶಾಸ್ತ್ರ ಜ್ಯೋತಿಷ್ಯರಿಗೆ ಕೊನೆಗೂ ಗೊತ್ತಾಗಲಿಲ್ಲ ಜೈಲಿಗೆ ಹೋಗಬೇಕೆಂದು. ಹೇಗಿದೆ ಜ್ಯೋತಿಷ್ಯರ ವಿಧಿ ವಿಪರ್ಯಾಸ.

ಈ ಕಾರ್ಯಾಚರಣೆಯಲ್ಲಿ ಸಾಗರ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಪ್ರಮೋದಿನಿ,  ಗಣೇಶ್, ಗಿರೀಶ್, ವಿಶ್ವನಾಥ, ಕೃಷ್ಣ, ದಿನೇಶ, ಮಹೇಶ್ ಪಾಲ್ಗೊಂಡಿದ್ದರು.

Malnad Times

Recent Posts

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

5 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

6 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

7 hours ago

ಹೊಸನಗರ ಪಟ್ಟಣದ ಮತಗಟ್ಟೆ ಸಂಖ್ಯೆ 258 ರಲ್ಲಿ ಮತಯಂತ್ರ ದೋಷ, ಅರ್ಧ ಗಂಟೆ ಸ್ಥಗಿತಗೊಂಡ ಮತದಾನ

ಹೊಸನಗರ: ಪಟ್ಟಣದ ಹೈಸ್ಕೂಲ್‌ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…

8 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆಯಾಗಿದೆ.…

9 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಈವರೆಗಿನ ಶೇಕಡಾವಾರು ಮತದಾನದ ವಿವರ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…

10 hours ago