ರಿಪ್ಪನ್ಪೇಟೆ: ಮಾರ್ಚ್ 25 ರಿಂದ ಆರಂಭವಾಗುವ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಗೆ ರಿಪ್ಪನ್ಪೇಟೆಯ ಎರಡು ಪರೀಕ್ಷಾ ಕೇಂದ್ರದಲ್ಲಿ ಸಕಲ ಸಿದ್ದತೆಗಳು ನಡೆಯುತ್ತಿದ್ದು ಈ ಬಾರಿ 483 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆಂದು ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾದ ಬಂಡಿ ಸೋಮಶೇಖರ್ ಮತ್ತು ಮುಖ್ಯ ಅಧೀಕ್ಷಕಿ ಸರಿತಾ ಮಾಧ್ಯಮದವರಿಗೆ ವಿವರಿಸಿದರು.
ಸರ್ಕಾರದ ನಿಯಮದಂತೆ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯ ಕೇಂದ್ರವು ಸರ್ಕಾರಿ ಪ್ರೌಢಶಾಲಾ ಕೊಠಡಿಯಲ್ಲಿಯೇ ನಡೆಸಬೇಕು ಎಂಬ ಕಟ್ಟುನಿಟ್ಟಿನ ಆದೇಶದಂತೆ ರಿಪ್ಪನ್ಪೇಟೆಯ ಸಾಗರ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜ್, ಪ್ರೌಢಶಾಲೆಯಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದ್ದು ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ 206 ವಿದ್ಯಾರ್ಥಿಗಳಲ್ಲಿ ಬಾಲಕರು 110 ಬಾಲಕಿಯರು 96 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪದವಿ ಪೂರ್ವ ಕಾಲೇಜ್ನ ಎಸ್.ಎಸ್.ಎಲ್.ಸಿ.ಪರೀಕ್ಷಾ ಕೇಂದ್ರದಲ್ಲಿ 277 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುತ್ತಿದ್ದು ಈ ಎರಡು ಪರೀಕ್ಷಾ ಕೇಂದ್ರಕ್ಕೆ ಸರ್ಕಾರಿ ಪ್ರೌಢಶಾಲೆಗಳಾದ ರಿಪ್ಪನ್ಪೇಟೆ, ಅರಸಾಳು, ಬೆಳ್ಳೂರು, ಹೆದ್ದಾರಿಪುರ, ಗರ್ತಿಕೆರೆ, ಚಿಕ್ಕಜೇನಿ, ಖಾಸಗಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಗಳಾದ ಶ್ರೀಬಸವೇಶ್ವರ ಶಾಲೆ, ಮೇರಿಮಾತಾ, ಶಾರದಾ ರಾಮಕೃಷ್ಣ, ಕಲ್ಲುಹಳ್ಳ ಮಲೆನಾಡ ಪ್ರೌಢಶಾಲೆ ಹಾಗೂ ಹುಂಚದ ಎನ್.ಇ.ಎಸ್. ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು ಈ ಬಾರಿ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷಾರ್ಥಿಗಳು ಗೋಡೆ ಕಡೆ ಮುಖ ಮಾಡಿ ಕುಳಿತು ಕೊಳ್ಳಬೇಕು ಎಂಬ ನಿಯಮದಂತೆ ಈಗಾಗಲೇ ವಿದ್ಯಾರ್ಥಿಗಳಿಗೆ ಡೆಸ್ಕ್ ವ್ಯವಸ್ಥೆಯೊಂದಿಗೆ ಸಿಸಿ ಕ್ಯಾಮೆರಾಗಳ ಕಣ್ಗಾವಲು ಸಹ ಸಿದ್ದಗೊಳಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…