ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಖಾಸಗಿ ಬಸ್ !

0 63

ಹೊಸನಗರ : ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಮಾಸ್ತಿಕಟ್ಟೆ ಸಮೀಪದ ಲಕ್ಷ್ಮಿನರಸಿಂಹ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದ್ದು ಈ ಅಪಘಾತದಲ್ಲಿ ಸುಮಾರು 15 ಮಂದಿಗೆ ಗಾಯಗಳಾದ ಬಗ್ಗೆ ವರದಿಯಾಗಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಹೊಸನಗರ 108 ಆ್ಯಂಬುಲೆನ್ಸ್ ಸಿಬ್ಬಂದಿಗಳು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

Leave A Reply

Your email address will not be published.

error: Content is protected !!