ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ರಾಮಚಂದ್ರಪ್ಪ

0 34

ಹೊಸನಗರ: ಮಠದಜಡ್ಡು ನಿವಾಸಿ ಈ ರಾಮಚಂದ್ರಪ್ಪನವರು (76) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಇವರು ಮಾಜಿ ಮುಖ್ಯಮಂತ್ರಿ ದಿ||ಬಂಗಾರಪ್ಪನವರಿಗೆ ಹತ್ತಿರದವರಾಗಿದ್ದು ಚಾಲುಕ್ಯ ಬಸವರಾಜ್‌ರವರು ಸೇರಿ ಓರ್ವ ಪುತ್ರ, ಓರ್ವ ಪುತ್ರಿ, ಪತ್ನಿ, ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.

ಸಾವಿನಲ್ಲೂ ಸಾರ್ಥಕತೆ :
ಇವರ ನಿಧನದ ನಂತರ ಇನ್ನೊಬ್ಬರಿಗೆ ಬೆಳಕಾಗಬೇಕು ಎಂಬ ಉದ್ದೇಶದಿಂದ ತಮ್ಮ ಎರಡು ಕಣ್ಣುಗಳನ್ನು ಶಿವಮೊಗ್ಗದ ಶಂಕರ್ ಕಣ್ಣಿನ ಆಸ್ಪತ್ರೆಗೆ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

Leave A Reply

Your email address will not be published.

error: Content is protected !!