ಹೊಸನಗರ ಪಟ್ಟಣದಲ್ಲಿ ಮಿಂಚಿನ ಸಂಚಾರ ನಡೆಸಿ ಬೇಳೂರು ಗೋಪಾಲಕೃಷ್ಣ ಮತಯಾಚನೆ
ಹೊಸನಗರ : ಸಾಗರ, ಹೊಸನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವರ್ಣ ರಂಜಿತ ವ್ಯಕ್ತಿತ್ವ ಹೊಂದಿದ ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣರವರು ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಮಿಂಚಿನ ಸಂಚಾರ ನಡೆಸಿ ಕುಡಿಯುವ ನೀರಿಗೂ ತತ್ವಾರ ಉಂಟು ಮಾಡಿದ ಬೊಗಳೆ ಸರ್ಕಾರದ ಆಮಿಷಗಳಿಗೆ ಮರುಳಾಗದೆ ಬಡವರ ಪರ ಕಾಳಜಿ ಹೊಂದಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸುವಂತೆ ಕೋರಿದರು.
ಎಲ್ಲ ಸಭೆಗಳಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪ್ರಚಾರ ಸಮಿತಿ ಅಧ್ಯಕ್ಷರು ಟೌನ್ ಸಮಿತಿ ಅಧ್ಯಕ್ಷರು ಮಹಿಳಾ ಸಮಿತಿಯ ಅಧ್ಯಕ್ಷರು ಜನ ಪ್ರತಿನಿಧಿಗಳು ಮಹಿಳೆಯರು ಯುವ ಮುಂದಾಳಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.