ರಿಪ್ಪನ್ಪೇಟೆ: ಗ್ರಾಮೀಣ ಪ್ರದೇಶದಲ್ಲಿ ಹಾಸುಹೊಕ್ಕಾಗಿರುವ ಜಾನಪದ ಕಲೆಗಳಲ್ಲಿ ಒಂದಾದ ವಿವಿಧ ಭಂಗಿಯ ಕೋಲಾಟ ಪ್ರದರ್ಶನವು ಭಕ್ತಾರ ಆಕರ್ಷಣೆಗೊಂಡಿತು.
ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದು ಮಹಾಸಭಾದ 56ನೇ ವರ್ಷದ ಗಣೇಶೋತ್ಸವ ಸಮಿತಿಯವರು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಬಳೆ ಕೋಲಾಟ ಪ್ರದರ್ಶನದಲ್ಲಿ ಕೆದಲುಗುಡ್ಡೆ ಮತ್ತು ಚಿಪ್ಪಳ್ಳಿ ಕೋಲಾಟ ತಂಡದವರ ಕೋಲಾಟ ಪ್ರದರ್ಶನ ಜನಾಕರ್ಷಣೆಗೊಂಡಿತು.
ಈ ಸಂದರ್ಭದಲ್ಲಿ ಹಿಂದು ಮಹಾಸಭಾ ಕಟ್ಟಡ ಸಮಿತಿಯ ಅಧ್ಯಕ್ಷ ಎಂ.ಬಿ.ಮಂಜುನಾಥ ಮಾತನಾಡಿ, ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಪ್ರೋತ್ಸಾಹಿಸುವ ಕಾರ್ಯದಲ್ಲಿ ಇಲ್ಲಿನ ಕಲಾ ತಂಡಗಳ ಕಾರ್ಯ ಪ್ರಶಂಸನೀಯವೆಂದು ಹೇಳಿ, ಬರುವ ವರ್ಷದಿಂದ ಈ ಕೋಲಾಟಕ್ಕೆ ಉತ್ತೇಜನ ನೀಡುವ ಉದ್ದೇಶದಿಂದಾಗಿ ಮಹಿಳೆಯರಿಗೂ ಇಂತಹ ಕಲಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹಿಂದು ಮಹಾಸಭಾ ಸಮಿತಿ ಅಧ್ಯಕ್ಷ ನಾಗರಾಜ್ ಪವಾರ್, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಎಂ.ಸುರೇಶ್ಸಿಂಗ್, ಆರ್.ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಬಳ್ಳಾರಿ, ಹೆಚ್.ಎನ್.ಚೋಳರಾಜ್, ಯೋಗೀಶ್, ಡಿ.ಈ.ರವಿಭೂಷಣ, ಆರ್.ಈ.ಭಾಸ್ಕರ್ಶೆಟ್ಟಿ,
ವೈ.ಜೆ.ಕೃಷ್ಣ, ವಾಸುಶೆಟ್ಟಿ ಗವಟೂರು ಇನ್ನಿತರರು ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…